<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಗೆ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಜಟಾಪಟಿ ಆರಂಭವಾಗಿದ್ದು, ಈಗಲೇ ಚುನಾವಣಾ ಕಾವು ಏರಿದಂತಾಗಿದೆ.</p>.<p>‘ಬಾಂಗ್ಲಾದೇಶದ ನುಸುಳುಕೋರರಿಗೆ ಮಮತಾ ಬ್ಯಾನರ್ಜಿ ಕುಮ್ಮಕ್ಕು ನೀಡುತ್ತಿದ್ದು, ಇದು ಪಶ್ಚಿಮ ಬಂಗಾಳದಲ್ಲಿ ಜನಸಂಖ್ಯೆಯ ಸಾಂದ್ರತೆಯನ್ನು ಅಪಾಯಕಾರಿ ಮಟ್ಟದಲ್ಲಿ ಬದಲಿಸಿದೆ’ ಎಂದು ಅಮಿತ್ ಶಾ ಆರೋಪಿಸಿದ್ದಾರೆ.</p>.<p>ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾ,‘ಏಪ್ರಿಲ್ನಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ನುಸುಳುಕೋರರನ್ನು ದೇಶದಿಂದ ಹೊರಹಾಕುವುದೇ ಈ ಚುನಾವಣೆಯ ಮುಖ್ಯ ಕಾರ್ಯಸೂಚಿ’ ಎಂದು ಅಬ್ಬರಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ,‘ರಾಜ್ಯಕ್ಕೆ ಈ ದಿನ ದುಷ್ಯಾಶನ ಬಂದಿದ್ದಾನೆ. ಚುನಾವಣೆಗಳು ಘೋಷಣೆಯಾದಾಗಲೆಲ್ಲಾ, ಈ ದುಷ್ಯಾಶನ ಮತ್ತು ದುರ್ಯೋಧನ ರಾಜ್ಯಕ್ಕೆ ಬಂದಿಳಿಯುತ್ತಾರೆ’ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೇ ಟೀಕಾಪ್ರಹಾರ ನಡೆಸಿದ್ದಾರೆ.</p>.<p>ಬಾಂಕುರಾ ಜಿಲ್ಲೆಯ ಬರ್ಜೋರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,‘ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆಯಿತು, ದೆಹಲಿಯಲ್ಲಿ ಬಾಂಬ್ ಸ್ಫೋಟಗೊಂಡಿತು. ಆದಾಗ್ಯೂ ಯಾವಾಗಲೂ ಒಳನುಸುಳಿಕೆ ವಿಚಾರವಾಗಿ ಪದೇಪದೇ ರಾಜ್ಯವನ್ನೇ ಏಕೆ ದೂಷಿಸಲಾಗುತ್ತಿದೆ’ ಎಂದು ಕಿಡಿಕಾರಿದರು.</p>.<div><blockquote>ರಾಜ್ಯದಲ್ಲಿ ಕಮ್ಯುನಿಸ್ಟರು ಸೋತ ಬಳಿಕ ಹಿಂಸೆ ಮತ್ತು ಪ್ರತೀಕಾರದ ರಾಜಕೀಯ ನಿಲ್ಲುತ್ತದೆ ಎಂದು ನಂಬಲಾಗಿತ್ತು. ಆದರೆ ಈ ವಿಚಾರದಲ್ಲಿ ಟಿಎಂಸಿ ಆಡಳಿತ ಕಮ್ಯುನಿಸ್ಟರನ್ನೂ ಮೀರಿಸಿದೆ</blockquote><span class="attribution">ಅಮಿತ್ ಶಾ ಕೇಂದ್ರ ಗೃಹ ಸಚಿವ </span></div>.<div><blockquote>ದೇಶದ ಗೃಹ ಸಚಿವರಾಗಿ ನಿಮ್ಮ ಸಾಧನೆ ಏನು? ನೀವು ಸಂಪೂರ್ಣ ವಿಫಲರಾಗಿದ್ದು ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು</blockquote><span class="attribution">ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ </span></div>.<p><strong>ಅಮಿತ್ ಶಾ ಆರೋಪಗಳು</strong> </p><p>* ಒಳನುಸುಳುವಿಕೆ ಸಮಸ್ಯೆಯಿಂದ ಪಶ್ಚಿಮ ಬಂಗಾಳ ಜನರು ಆತಂಕಕ್ಕೆ ಒಳಗಾಗಿದ್ದಾರೆ. 2026ರಲ್ಲಿ ನಡೆಯುವ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೇರುವ ಬಿಜೆಪಿ ಈ ಸಮಸ್ಯೆಗೆ ಅಂತ್ಯ ಹಾಡಲಿದೆ </p><p>* ಈ ಬಾರಿ ರಾಜ್ಯದ ಜನರು ಸರ್ಕಾರ ಬದಲಿಸಲು ದೃಢಸಂಕಲ್ಪ ಮಾಡಿದ್ದಾರೆ. 2026ರ ಏಪ್ರಿಲ್ 15ರಂದು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. </p><p>* ನುಸುಳುಕೋರರನ್ನು ತಡೆಯುವುದಕ್ಕಾಗಿ ರಾಜ್ಯದ ಗಡಿಗಳಲ್ಲಿ ಬಲಿಷ್ಠವಾದ ‘ರಾಷ್ಟ್ರೀಯ ಗ್ರಿಡ್’ ಸ್ಥಾಪಿಸಲಾಗುವುದು. ಮನುಷ್ಯರಲ್ಲ ಪಕ್ಷಿಗಳು ಕೂಡ ಈ ಗ್ರಿಡ್ಗಳನ್ನು ದಾಟಿ ಬರಲು ಸಾಧ್ಯವಾಗುವುದಿಲ್ಲ </p><p>* ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನುಸುಳುವಿಕೆಯನ್ನು ಮಾತ್ರ ತಡೆಯುವುದಿಲ್ಲ. ದೇಶದಲ್ಲಿರುವ ಪ್ರತಿಯೊಬ್ಬ ನುಸುಳುಕೋರನನ್ನು ಗುರುತಿಸಿ ಹೊರ ಹಾಕಲಾಗುವುದು </p><p>* ಪಶ್ಚಿಮ ಬಂಗಾಳ ಸರ್ಕಾರ ಅಗತ್ಯವಿರುವ ಭೂಮಿ ನೀಡದ ಕಾರಣ ಭಾರತ–ಬಾಂಗ್ಲಾದೇಶ ನಡುವೆ ಬೇಲಿ ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ </p><p>* ಬಿಜೆಪಿ ಆಡಳಿತವಿರುವ ಅಸ್ಸಾಂ ತ್ರಿಪುರಾ ಅಥವಾ ಪಶ್ಚಿಮದ ರಾಜ್ಯಗಳಾದ ರಾಜಸ್ಥಾನ ಗುಜರಾತ್ ಪಂಜಾಬ್ ಮತ್ತು ಕಾಶ್ಮೀರಕ್ಕೆ ಹೋಲಿಸಿದರೆ ಪಶ್ಚಿಮ ಬಂಗಾಳದಲ್ಲಿ ನುಸುಳುವಿಕೆ ಸಮಸ್ಯೆ ಇಷ್ಟೊಂದು ತೀವ್ರವಾಗಿರುವುದು ಏಕೆ ಎಂಬ ಬಗ್ಗೆ ಮಮತಾ ಬ್ಯಾನರ್ಜಿ ಉತ್ತರಿಸಬೇಕು </p><p>* ಮತುವಾ ಸಮುದಾಯದವರು ಎಸ್ಐಆರ್ ಬಗ್ಗೆ ಭಯಪಡುವ ಅಗತ್ಯ ಇಲ್ಲ. ಧಾರ್ಮಿಕವಾಗಿ ಕಿರುಕುಳಕ್ಕೆ ಒಳಗಾಗಿರುವ ಎಲ್ಲ ನಿರಾಶ್ರಿತರಿಗೂ ದೇಶದಲ್ಲಿ ಆಶ್ರಯ ನೀಡಲಾಗುವುದು. ಮತುವಾ ಸಮುದಾಯಕ್ಕೆ ಮಮತಾ ಬ್ಯಾನರ್ಜಿ ಕೂಡ ತೊಂದರೆ ಕೊಡುವುದು ಸಾಧ್ಯವಿಲ್ಲ</p>.<p><strong>ಮಮತಾ ಬ್ಯಾನರ್ಜಿ ತಿರುಗೇಟು</strong> </p><p>* ದೇಶದ ಹಲವೆಡೆ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ. ಇದರ ನೈತಿಕ ಹೊಣೆ ಹೊತ್ತು ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು </p><p>* ಒಳನುಸುಳುವಿಕೆ ಸಮಸ್ಯೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಇದೆಯೇ? ಕಾಶ್ಮೀರದಲ್ಲಿ ಇದು ನಡೆಯುತ್ತಿಲ್ಲವೇ? ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಒಳನುಸುಳುವಿಕೆ ಅಲ್ಲವೇ? </p><p>* ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬೇರೆ ಕಡೆ ನುಸುಳುಕೋರರು ಇಲ್ಲವೇ? ಹಾಗಾದಲ್ಲಿ ಈ ನೀವೇ ಕಾರನ್ನು ಸ್ಫೋಟಿಸಿದ್ದಾ? </p><p>* ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಾಗಿ ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ ರಾಜ್ಯದ ಜನ ನಿಮ್ಮನ್ನು ತಿರಸ್ಕರಿಸುತ್ತಾರೆ. ಈ ಬಾರಿಯ ಚುನಾವಣೆ ಬಳಿಕ ನೀವು ಎಲ್ಲ ರಾಜ್ಯಗಳಲ್ಲಿಯೂ ಅಧಿಕಾರ ಕಳೆದುಕೊಳ್ಳುತ್ತೀರಿ </p><p>* ಅಂತರರಾಷ್ಟ್ರೀಯ ಗಡಿಯಲ್ಲಿ ಬೇಲಿ ಅಳವಡಿಸಲು ಟಿಎಂಸಿ ಸರ್ಕಾರ ಜಮೀನು ನೀಡುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ. ಜಮೀನು ನೀಡಿರದಿದ್ದಲ್ಲಿ ತಾರಕೇಶ್ವರ–ವಿಷ್ಣುಪುರ ರೈಲು ಮಾರ್ಗ ಪೂರ್ಣಗೊಳಿಸಿದ್ದು ಯಾರು? ಕಲ್ಲಿದ್ದಲು ಗಣಿಗಾರಿಕೆಗೆ ಇಸಿಎಲ್ಗೆ ಜಮೀನು ಎಲ್ಲಿಂದ ಬಂತು? </p><p>* ಬೋಂಗಾಂವ್ ಮತ್ತು ಪೆಟ್ರಾಪೋಲ್ನಲ್ಲಿ ಜಮೀನು ಕೊಟ್ಟಿದ್ದು ಯಾರು? ಘೋಜಾಡಾಂಗಾ ಮತ್ತು ಚಂಗ್ರಬಂಧಾದಲ್ಲಿ ಕೈಗೊಂಡ ಕಾಮಗಾರಿಗೆ ಜಮೀನು ಕೊಟ್ಟವರು ಯಾರು? </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ವಿಧಾನಸಭೆಗೆ ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ಜಟಾಪಟಿ ಆರಂಭವಾಗಿದ್ದು, ಈಗಲೇ ಚುನಾವಣಾ ಕಾವು ಏರಿದಂತಾಗಿದೆ.</p>.<p>‘ಬಾಂಗ್ಲಾದೇಶದ ನುಸುಳುಕೋರರಿಗೆ ಮಮತಾ ಬ್ಯಾನರ್ಜಿ ಕುಮ್ಮಕ್ಕು ನೀಡುತ್ತಿದ್ದು, ಇದು ಪಶ್ಚಿಮ ಬಂಗಾಳದಲ್ಲಿ ಜನಸಂಖ್ಯೆಯ ಸಾಂದ್ರತೆಯನ್ನು ಅಪಾಯಕಾರಿ ಮಟ್ಟದಲ್ಲಿ ಬದಲಿಸಿದೆ’ ಎಂದು ಅಮಿತ್ ಶಾ ಆರೋಪಿಸಿದ್ದಾರೆ.</p>.<p>ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಶಾ,‘ಏಪ್ರಿಲ್ನಲ್ಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ನುಸುಳುಕೋರರನ್ನು ದೇಶದಿಂದ ಹೊರಹಾಕುವುದೇ ಈ ಚುನಾವಣೆಯ ಮುಖ್ಯ ಕಾರ್ಯಸೂಚಿ’ ಎಂದು ಅಬ್ಬರಿಸಿದ್ದಾರೆ.</p>.<p>ಇದಕ್ಕೆ ತಿರುಗೇಟು ನೀಡಿರುವ ಮಮತಾ ಬ್ಯಾನರ್ಜಿ,‘ರಾಜ್ಯಕ್ಕೆ ಈ ದಿನ ದುಷ್ಯಾಶನ ಬಂದಿದ್ದಾನೆ. ಚುನಾವಣೆಗಳು ಘೋಷಣೆಯಾದಾಗಲೆಲ್ಲಾ, ಈ ದುಷ್ಯಾಶನ ಮತ್ತು ದುರ್ಯೋಧನ ರಾಜ್ಯಕ್ಕೆ ಬಂದಿಳಿಯುತ್ತಾರೆ’ ಎಂದು ಯಾರ ಹೆಸರನ್ನೂ ಪ್ರಸ್ತಾಪಿಸದೇ ಟೀಕಾಪ್ರಹಾರ ನಡೆಸಿದ್ದಾರೆ.</p>.<p>ಬಾಂಕುರಾ ಜಿಲ್ಲೆಯ ಬರ್ಜೋರಾದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ,‘ಜಮ್ಮು–ಕಾಶ್ಮೀರದಲ್ಲಿ ಉಗ್ರರ ದಾಳಿ ನಡೆಯಿತು, ದೆಹಲಿಯಲ್ಲಿ ಬಾಂಬ್ ಸ್ಫೋಟಗೊಂಡಿತು. ಆದಾಗ್ಯೂ ಯಾವಾಗಲೂ ಒಳನುಸುಳಿಕೆ ವಿಚಾರವಾಗಿ ಪದೇಪದೇ ರಾಜ್ಯವನ್ನೇ ಏಕೆ ದೂಷಿಸಲಾಗುತ್ತಿದೆ’ ಎಂದು ಕಿಡಿಕಾರಿದರು.</p>.<div><blockquote>ರಾಜ್ಯದಲ್ಲಿ ಕಮ್ಯುನಿಸ್ಟರು ಸೋತ ಬಳಿಕ ಹಿಂಸೆ ಮತ್ತು ಪ್ರತೀಕಾರದ ರಾಜಕೀಯ ನಿಲ್ಲುತ್ತದೆ ಎಂದು ನಂಬಲಾಗಿತ್ತು. ಆದರೆ ಈ ವಿಚಾರದಲ್ಲಿ ಟಿಎಂಸಿ ಆಡಳಿತ ಕಮ್ಯುನಿಸ್ಟರನ್ನೂ ಮೀರಿಸಿದೆ</blockquote><span class="attribution">ಅಮಿತ್ ಶಾ ಕೇಂದ್ರ ಗೃಹ ಸಚಿವ </span></div>.<div><blockquote>ದೇಶದ ಗೃಹ ಸಚಿವರಾಗಿ ನಿಮ್ಮ ಸಾಧನೆ ಏನು? ನೀವು ಸಂಪೂರ್ಣ ವಿಫಲರಾಗಿದ್ದು ಕೂಡಲೇ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು</blockquote><span class="attribution">ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ </span></div>.<p><strong>ಅಮಿತ್ ಶಾ ಆರೋಪಗಳು</strong> </p><p>* ಒಳನುಸುಳುವಿಕೆ ಸಮಸ್ಯೆಯಿಂದ ಪಶ್ಚಿಮ ಬಂಗಾಳ ಜನರು ಆತಂಕಕ್ಕೆ ಒಳಗಾಗಿದ್ದಾರೆ. 2026ರಲ್ಲಿ ನಡೆಯುವ ಚುನಾವಣೆಯಲ್ಲಿ ಪ್ರಚಂಡ ಬಹುಮತ ಪಡೆದು ಅಧಿಕಾರಕ್ಕೇರುವ ಬಿಜೆಪಿ ಈ ಸಮಸ್ಯೆಗೆ ಅಂತ್ಯ ಹಾಡಲಿದೆ </p><p>* ಈ ಬಾರಿ ರಾಜ್ಯದ ಜನರು ಸರ್ಕಾರ ಬದಲಿಸಲು ದೃಢಸಂಕಲ್ಪ ಮಾಡಿದ್ದಾರೆ. 2026ರ ಏಪ್ರಿಲ್ 15ರಂದು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. </p><p>* ನುಸುಳುಕೋರರನ್ನು ತಡೆಯುವುದಕ್ಕಾಗಿ ರಾಜ್ಯದ ಗಡಿಗಳಲ್ಲಿ ಬಲಿಷ್ಠವಾದ ‘ರಾಷ್ಟ್ರೀಯ ಗ್ರಿಡ್’ ಸ್ಥಾಪಿಸಲಾಗುವುದು. ಮನುಷ್ಯರಲ್ಲ ಪಕ್ಷಿಗಳು ಕೂಡ ಈ ಗ್ರಿಡ್ಗಳನ್ನು ದಾಟಿ ಬರಲು ಸಾಧ್ಯವಾಗುವುದಿಲ್ಲ </p><p>* ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನುಸುಳುವಿಕೆಯನ್ನು ಮಾತ್ರ ತಡೆಯುವುದಿಲ್ಲ. ದೇಶದಲ್ಲಿರುವ ಪ್ರತಿಯೊಬ್ಬ ನುಸುಳುಕೋರನನ್ನು ಗುರುತಿಸಿ ಹೊರ ಹಾಕಲಾಗುವುದು </p><p>* ಪಶ್ಚಿಮ ಬಂಗಾಳ ಸರ್ಕಾರ ಅಗತ್ಯವಿರುವ ಭೂಮಿ ನೀಡದ ಕಾರಣ ಭಾರತ–ಬಾಂಗ್ಲಾದೇಶ ನಡುವೆ ಬೇಲಿ ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ </p><p>* ಬಿಜೆಪಿ ಆಡಳಿತವಿರುವ ಅಸ್ಸಾಂ ತ್ರಿಪುರಾ ಅಥವಾ ಪಶ್ಚಿಮದ ರಾಜ್ಯಗಳಾದ ರಾಜಸ್ಥಾನ ಗುಜರಾತ್ ಪಂಜಾಬ್ ಮತ್ತು ಕಾಶ್ಮೀರಕ್ಕೆ ಹೋಲಿಸಿದರೆ ಪಶ್ಚಿಮ ಬಂಗಾಳದಲ್ಲಿ ನುಸುಳುವಿಕೆ ಸಮಸ್ಯೆ ಇಷ್ಟೊಂದು ತೀವ್ರವಾಗಿರುವುದು ಏಕೆ ಎಂಬ ಬಗ್ಗೆ ಮಮತಾ ಬ್ಯಾನರ್ಜಿ ಉತ್ತರಿಸಬೇಕು </p><p>* ಮತುವಾ ಸಮುದಾಯದವರು ಎಸ್ಐಆರ್ ಬಗ್ಗೆ ಭಯಪಡುವ ಅಗತ್ಯ ಇಲ್ಲ. ಧಾರ್ಮಿಕವಾಗಿ ಕಿರುಕುಳಕ್ಕೆ ಒಳಗಾಗಿರುವ ಎಲ್ಲ ನಿರಾಶ್ರಿತರಿಗೂ ದೇಶದಲ್ಲಿ ಆಶ್ರಯ ನೀಡಲಾಗುವುದು. ಮತುವಾ ಸಮುದಾಯಕ್ಕೆ ಮಮತಾ ಬ್ಯಾನರ್ಜಿ ಕೂಡ ತೊಂದರೆ ಕೊಡುವುದು ಸಾಧ್ಯವಿಲ್ಲ</p>.<p><strong>ಮಮತಾ ಬ್ಯಾನರ್ಜಿ ತಿರುಗೇಟು</strong> </p><p>* ದೇಶದ ಹಲವೆಡೆ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ. ಇದರ ನೈತಿಕ ಹೊಣೆ ಹೊತ್ತು ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು </p><p>* ಒಳನುಸುಳುವಿಕೆ ಸಮಸ್ಯೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಇದೆಯೇ? ಕಾಶ್ಮೀರದಲ್ಲಿ ಇದು ನಡೆಯುತ್ತಿಲ್ಲವೇ? ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಒಳನುಸುಳುವಿಕೆ ಅಲ್ಲವೇ? </p><p>* ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು ಸ್ಫೋಟಗೊಂಡಿತ್ತು. ಪಶ್ಚಿಮ ಬಂಗಾಳ ಹೊರತುಪಡಿಸಿ ಬೇರೆ ಕಡೆ ನುಸುಳುಕೋರರು ಇಲ್ಲವೇ? ಹಾಗಾದಲ್ಲಿ ಈ ನೀವೇ ಕಾರನ್ನು ಸ್ಫೋಟಿಸಿದ್ದಾ? </p><p>* ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಾಗಿ ಅಮಿತ್ ಶಾ ಹೇಳುತ್ತಿದ್ದಾರೆ. ಆದರೆ ರಾಜ್ಯದ ಜನ ನಿಮ್ಮನ್ನು ತಿರಸ್ಕರಿಸುತ್ತಾರೆ. ಈ ಬಾರಿಯ ಚುನಾವಣೆ ಬಳಿಕ ನೀವು ಎಲ್ಲ ರಾಜ್ಯಗಳಲ್ಲಿಯೂ ಅಧಿಕಾರ ಕಳೆದುಕೊಳ್ಳುತ್ತೀರಿ </p><p>* ಅಂತರರಾಷ್ಟ್ರೀಯ ಗಡಿಯಲ್ಲಿ ಬೇಲಿ ಅಳವಡಿಸಲು ಟಿಎಂಸಿ ಸರ್ಕಾರ ಜಮೀನು ನೀಡುತ್ತಿಲ್ಲ ಎಂದು ಆರೋಪಿಸಲಾಗುತ್ತಿದೆ. ಜಮೀನು ನೀಡಿರದಿದ್ದಲ್ಲಿ ತಾರಕೇಶ್ವರ–ವಿಷ್ಣುಪುರ ರೈಲು ಮಾರ್ಗ ಪೂರ್ಣಗೊಳಿಸಿದ್ದು ಯಾರು? ಕಲ್ಲಿದ್ದಲು ಗಣಿಗಾರಿಕೆಗೆ ಇಸಿಎಲ್ಗೆ ಜಮೀನು ಎಲ್ಲಿಂದ ಬಂತು? </p><p>* ಬೋಂಗಾಂವ್ ಮತ್ತು ಪೆಟ್ರಾಪೋಲ್ನಲ್ಲಿ ಜಮೀನು ಕೊಟ್ಟಿದ್ದು ಯಾರು? ಘೋಜಾಡಾಂಗಾ ಮತ್ತು ಚಂಗ್ರಬಂಧಾದಲ್ಲಿ ಕೈಗೊಂಡ ಕಾಮಗಾರಿಗೆ ಜಮೀನು ಕೊಟ್ಟವರು ಯಾರು? </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>