<p><strong>ಕೋಲ್ಕತ್ತ</strong>: ನಗರದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೀಡಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ತಾಯಿ, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಟಿಎಂಸಿ ಸರ್ಕಾರವನ್ನು ಕಿತ್ತೊಗೆಯುವ ಸಲುವಾಗಿ ರಾಜಕೀಯದ ಮಾರ್ಗದಲ್ಲಿ ನಡೆಯುವುದಾಗಿ ಗುರುವಾರ ಹೇಳಿಕೊಂಡಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಶೀಘ್ರದಲ್ಲೇ ಪ್ರಕಟವಾಗಲಿರುವ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಸಾಧ್ಯತೆ ಇದೆ. ತಮ್ಮನ್ನು ಉತ್ತರ 24 ಪರಗಣ ಜಿಲ್ಲೆಯ ಪಣಿಹತಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿಸಬಹುದು ಎಂದಿದ್ದಾರೆ.</p><p>ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಬಿಜೆಪಿಯಿಂದ ಈ ಹಿಂದೆಯೇ ಬಂದಿತ್ತು ಎಂದೂ ಹೇಳಿದ್ದಾರೆ.</p><p>ʼನನಗೆ ಬಹಳ ಹಿಂದೆಯೇ ಬಿಜೆಪಿ ಆಫರ್ ನೀಡಿತ್ತು. ಆದರೆ, ನಾನು ಆಗ ಮಾನಸಿಕವಾಗಿ ಸಿದ್ಧವಿರಲಿಲ್ಲ. ಆ ಆಹ್ವಾನವನ್ನು ಸ್ವೀಕರಿಸಲು ನಿನ್ನೆಯಷ್ಟೇ ನಿರ್ಧಾರ ಮಾಡಿದ್ದೇನೆ. ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯನ್ನು ಕೊನೆಗಾಣಿಸುವ ಸಲುವಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದೇನೆʼ ಎಂದು ಹೇಳಿದ್ದಾರೆ.</p><p>ತಮ್ಮ ಮಗಳ ಪ್ರಕರಣದಲ್ಲಿ ತನಿಖೆ ಹಾಗೂ ನ್ಯಾಯದಾನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.</p><p>ʼಮಗಳಿಗೆ ನ್ಯಾಯ ಕೊಡಿಸುವುದೇ ನಾನು ರಾಜಕೀಯ ಪ್ರವೇಶಿಸುತ್ತಿರುವುದರ ಹಿಂದಿನ ಉದ್ದೇಶʼ ಎಂದೂ ಸ್ಪಷ್ಟಪಡಿಸಿದ್ದಾರೆ.</p><p>ಮೃತ ವೈದ್ಯ ವಿದ್ಯಾರ್ಥಿನಿಯ ಪೋಷಕರನ್ನು ಬಿಜೆಪಿ ನಾಯಕ ಅರ್ಜುನ್ ಸಿಂಗ್ ಅವರು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು.</p><p>31 ವರ್ಷದ ವೈದ್ಯ ವಿದ್ಯಾರ್ಥಿನಿಯ ಮೇಲೆ 2024ರ ಆಗಸ್ಟ್ನಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.</p><p>ಕೃತ್ಯದ ಹಿಂದೆ ಇರುವವರನ್ನು ಮಮತಾ ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ನಿರಂತರವಾಗಿ ಆರೋಪಿಸುತ್ತಾ ಬಂದಿದೆ.</p>.<div><div class="bigfact-title">ಎರಡು ಹಂತಗಳಲ್ಲಿ ಚುನಾವಣೆ</div><div class="bigfact-description">294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಿ (ಏಪ್ರಿಲ್ 23 ಹಾಗೂ ಏಪ್ರಿಲ್ 29) ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ನಗರದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೀಡಾಗಿ, ಕೊಲೆಯಾದ ವೈದ್ಯ ವಿದ್ಯಾರ್ಥಿನಿಯ ತಾಯಿ, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಟಿಎಂಸಿ ಸರ್ಕಾರವನ್ನು ಕಿತ್ತೊಗೆಯುವ ಸಲುವಾಗಿ ರಾಜಕೀಯದ ಮಾರ್ಗದಲ್ಲಿ ನಡೆಯುವುದಾಗಿ ಗುರುವಾರ ಹೇಳಿಕೊಂಡಿದ್ದಾರೆ.</p><p>ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಶೀಘ್ರದಲ್ಲೇ ಪ್ರಕಟವಾಗಲಿರುವ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಸಾಧ್ಯತೆ ಇದೆ. ತಮ್ಮನ್ನು ಉತ್ತರ 24 ಪರಗಣ ಜಿಲ್ಲೆಯ ಪಣಿಹತಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿಸಬಹುದು ಎಂದಿದ್ದಾರೆ.</p><p>ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಬಿಜೆಪಿಯಿಂದ ಈ ಹಿಂದೆಯೇ ಬಂದಿತ್ತು ಎಂದೂ ಹೇಳಿದ್ದಾರೆ.</p><p>ʼನನಗೆ ಬಹಳ ಹಿಂದೆಯೇ ಬಿಜೆಪಿ ಆಫರ್ ನೀಡಿತ್ತು. ಆದರೆ, ನಾನು ಆಗ ಮಾನಸಿಕವಾಗಿ ಸಿದ್ಧವಿರಲಿಲ್ಲ. ಆ ಆಹ್ವಾನವನ್ನು ಸ್ವೀಕರಿಸಲು ನಿನ್ನೆಯಷ್ಟೇ ನಿರ್ಧಾರ ಮಾಡಿದ್ದೇನೆ. ಗೃಹ ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಳ್ವಿಕೆಯನ್ನು ಕೊನೆಗಾಣಿಸುವ ಸಲುವಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸಿದ್ದೇನೆʼ ಎಂದು ಹೇಳಿದ್ದಾರೆ.</p><p>ತಮ್ಮ ಮಗಳ ಪ್ರಕರಣದಲ್ಲಿ ತನಿಖೆ ಹಾಗೂ ನ್ಯಾಯದಾನ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿದ್ದಾರೆ.</p><p>ʼಮಗಳಿಗೆ ನ್ಯಾಯ ಕೊಡಿಸುವುದೇ ನಾನು ರಾಜಕೀಯ ಪ್ರವೇಶಿಸುತ್ತಿರುವುದರ ಹಿಂದಿನ ಉದ್ದೇಶʼ ಎಂದೂ ಸ್ಪಷ್ಟಪಡಿಸಿದ್ದಾರೆ.</p><p>ಮೃತ ವೈದ್ಯ ವಿದ್ಯಾರ್ಥಿನಿಯ ಪೋಷಕರನ್ನು ಬಿಜೆಪಿ ನಾಯಕ ಅರ್ಜುನ್ ಸಿಂಗ್ ಅವರು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು.</p><p>31 ವರ್ಷದ ವೈದ್ಯ ವಿದ್ಯಾರ್ಥಿನಿಯ ಮೇಲೆ 2024ರ ಆಗಸ್ಟ್ನಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.</p><p>ಕೃತ್ಯದ ಹಿಂದೆ ಇರುವವರನ್ನು ಮಮತಾ ಸರ್ಕಾರ ರಕ್ಷಿಸುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ನಿರಂತರವಾಗಿ ಆರೋಪಿಸುತ್ತಾ ಬಂದಿದೆ.</p>.<div><div class="bigfact-title">ಎರಡು ಹಂತಗಳಲ್ಲಿ ಚುನಾವಣೆ</div><div class="bigfact-description">294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭೆಗೆ ಎರಡು ಹಂತಗಳಲ್ಲಿ (ಏಪ್ರಿಲ್ 23 ಹಾಗೂ ಏಪ್ರಿಲ್ 29) ಮತದಾನ ನಡೆಯಲಿದೆ. ಮೇ 4ರಂದು ಫಲಿತಾಂಶ ಪ್ರಕಟವಾಗಲಿದೆ.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>