<p><strong>ಕೋಲ್ಕತ್ತ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ‘ಪ್ರವಾಸಿ ರಾಜಕಾರಣಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೇವಡಿ ಮಾಡಿದ್ದಾರೆ.</p>.<p>ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕನನ್ನು ಟೀಕಿಸಿದ್ದು ಮಾತ್ರವಲ್ಲದೆ, ಬಿಜೆಪಿಯ ಅಭಿವೃದ್ಧಿ ಅಜೆಂಡಾ, ರಾಷ್ಟ್ರೀಯತೆ ಮತ್ತು ಆತ್ಮ ನಿರ್ಭರ ಭಾರತ ಅಭಿಯಾನಗಳ ಬಗ್ಗೆ ಮಾತನಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/bjp-trying-to-destroy-bengal-and-its-culture-says-rahul-gandhi-822398.html" itemprop="url">ಸಂಸ್ಕೃತಿ ನಾಶಕ್ಕೆ ಬಿಜೆಪಿ ಯತ್ನ: ರಾಹುಲ್ ಗಾಂಧಿ</a></p>.<p>ರಾಹುಲ್ ಗಾಂಧಿಯವರು ಮೊದಲು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಿರಲಿಲ್ಲ. ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂಗಳಲ್ಲಿ ಮಾತ್ರವೇ ಪ್ರಚಾರ ನಡೆಸಿದ್ದರು. ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಮುಕ್ತಾಯವಾದ ಬಳಿಕ ಪ್ರಚಾರಕ್ಕೆ ಬಂದಿದ್ದಾರೆ.</p>.<p><strong>ಮಮತಾ ವಿರುದ್ಧವೂ ವಾಗ್ದಾಳಿ</strong></p>.<p>ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸು ಅಭಿವೃದ್ಧಿ ಬಯಸಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನುಸುಳುಕೋರರಿಗೆ ನೆರವಾಗಲು ಬಯಸುತ್ತಿದ್ದಾರೆ. ಈಗ ಯಾವ ರೀತಿಯ ಸರ್ಕಾರ ಬೇಕೆಂದು ನೀವೇ ನಿರ್ಧರಿಸಿ ಎಂದು ಶಾ ಹೇಳಿದ್ದಾರೆ.</p>.<p>ಮೋದಿಯವರ ‘ಬಂಗಾರದ ಬಂಗಾಳ (ಸೋನಾರ್ ಬಂಗಾಳ)’ ಬೇಕೇ ಅಥವಾ ನುಸುಳುಕೋರರಿಗೆ ಸಹಾಯ ಮಾಡುವ ದೀದಿ ಅವರ ಬಂಗಾಳ ಬೇಕೇ ಎಂಬುದನ್ನು ನೀವೇ ನಿರ್ಧರಿಸಿ ಎಂದು ಮತದಾರರನ್ನು ಉದ್ದೇಶಿಸಿ ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/bjp-is-west-bengal-culture-defender-says-bjp-president-jp-nadda-822397.html" itemprop="url">ಬಿಜೆಪಿಯೇ ಬಂಗಾಳ ಸಂಸ್ಕೃತಿ ರಕ್ಷಕ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ</a></p>.<p>ಮೇ 2ರಂದು ನೀವು ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಳಿಕ ಗಡಿ ನುಸುಳಿ ಬರಲು ಯಾರಿಗೂ ಅವಕಾಶ ಇರುವುದಿಲ್ಲ ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂಬುದಾಗಿಯೂ ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ‘ಪ್ರವಾಸಿ ರಾಜಕಾರಣಿ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೇವಡಿ ಮಾಡಿದ್ದಾರೆ.</p>.<p>ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕನನ್ನು ಟೀಕಿಸಿದ್ದು ಮಾತ್ರವಲ್ಲದೆ, ಬಿಜೆಪಿಯ ಅಭಿವೃದ್ಧಿ ಅಜೆಂಡಾ, ರಾಷ್ಟ್ರೀಯತೆ ಮತ್ತು ಆತ್ಮ ನಿರ್ಭರ ಭಾರತ ಅಭಿಯಾನಗಳ ಬಗ್ಗೆ ಮಾತನಾಡಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/bjp-trying-to-destroy-bengal-and-its-culture-says-rahul-gandhi-822398.html" itemprop="url">ಸಂಸ್ಕೃತಿ ನಾಶಕ್ಕೆ ಬಿಜೆಪಿ ಯತ್ನ: ರಾಹುಲ್ ಗಾಂಧಿ</a></p>.<p>ರಾಹುಲ್ ಗಾಂಧಿಯವರು ಮೊದಲು ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಿರಲಿಲ್ಲ. ತಮಿಳುನಾಡು, ಕೇರಳ, ಪುದುಚೇರಿ, ಅಸ್ಸಾಂಗಳಲ್ಲಿ ಮಾತ್ರವೇ ಪ್ರಚಾರ ನಡೆಸಿದ್ದರು. ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಮುಕ್ತಾಯವಾದ ಬಳಿಕ ಪ್ರಚಾರಕ್ಕೆ ಬಂದಿದ್ದಾರೆ.</p>.<p><strong>ಮಮತಾ ವಿರುದ್ಧವೂ ವಾಗ್ದಾಳಿ</strong></p>.<p>ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸು ಅಭಿವೃದ್ಧಿ ಬಯಸಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನುಸುಳುಕೋರರಿಗೆ ನೆರವಾಗಲು ಬಯಸುತ್ತಿದ್ದಾರೆ. ಈಗ ಯಾವ ರೀತಿಯ ಸರ್ಕಾರ ಬೇಕೆಂದು ನೀವೇ ನಿರ್ಧರಿಸಿ ಎಂದು ಶಾ ಹೇಳಿದ್ದಾರೆ.</p>.<p>ಮೋದಿಯವರ ‘ಬಂಗಾರದ ಬಂಗಾಳ (ಸೋನಾರ್ ಬಂಗಾಳ)’ ಬೇಕೇ ಅಥವಾ ನುಸುಳುಕೋರರಿಗೆ ಸಹಾಯ ಮಾಡುವ ದೀದಿ ಅವರ ಬಂಗಾಳ ಬೇಕೇ ಎಂಬುದನ್ನು ನೀವೇ ನಿರ್ಧರಿಸಿ ಎಂದು ಮತದಾರರನ್ನು ಉದ್ದೇಶಿಸಿ ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/bjp-is-west-bengal-culture-defender-says-bjp-president-jp-nadda-822397.html" itemprop="url">ಬಿಜೆಪಿಯೇ ಬಂಗಾಳ ಸಂಸ್ಕೃತಿ ರಕ್ಷಕ: ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ</a></p>.<p>ಮೇ 2ರಂದು ನೀವು ಬಿಜೆಪಿಯನ್ನು ಅಧಿಕಾರಕ್ಕೆ ತಂದ ಬಳಿಕ ಗಡಿ ನುಸುಳಿ ಬರಲು ಯಾರಿಗೂ ಅವಕಾಶ ಇರುವುದಿಲ್ಲ ಎಂದು ಈ ಮೂಲಕ ಭರವಸೆ ನೀಡುತ್ತೇನೆ ಎಂಬುದಾಗಿಯೂ ಶಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>