<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲೀಕ ಗಂಗಾಧರ್ ದಾಸ್ನನ್ನು ಪೊಲೀಸರು ಬಂಧಿಸಿದ್ದು, ಇಂದು (ಬುಧವಾರ) ಬರುಯಿಪುರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಸಂಪಾದಕೀಯ:ಬೈಕ್ ಟ್ಯಾಕ್ಸಿ ಸೇವೆ: ನಿರ್ಬಂಧ ರದ್ದು, ಸಮಗ್ರ ನಿಯಮಾವಳಿ ರೂಪುಗೊಳ್ಳಲಿ.ವಿಶ್ಲೇಷಣೆ: ರೀಲ್ ಕಾಲದಲ್ಲಿ ಮಕ್ಕಳ ಪುಸ್ತಕ. <p>ಮೃತದೇಹಗಳನ್ನು ಗುರುತಿಸಲಾಗದಷ್ಟು ಸುಟ್ಟು ಹೋದ ಕಾರಣ , ಡಿಎನ್ಎ ಪರೀಕ್ಷೆ ನಡೆಸಿ ಬಳಿಕ ಮೃತರ ಕುಟುಂಗಳಿಗೆ ಪರಿಹಾರ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.</p><p> ಡಿಎನ್ಎ ಪರೀಕ್ಷೆ ನಡೆಸಲು ಬುಧವಾರ ನ್ಯಾಯಾಲಯದಿಂದ ಅನುಮತಿ ಪಡೆಯಲಾಗುವುದು. ತನಿಖೆ ಮುಂದುವರಿದಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುವುದು ಎಂದು ಫಿರ್ಹಾದ್ ತಿಳಿಸಿದ್ದಾರೆ.</p><p>ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಹಕೀಮ್, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.</p>.ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್, 40 ಪ್ರಯಾಣಿಕರು ಅಪಾಯದಿಂದ ಪಾರು.ದೊಡ್ಡಬಳ್ಳಾಪುರಕ್ಕೆ ಮೆಟ್ರೊ: ತಜ್ಞರ ಸಮಿತಿಗೆ ಶಿಫಾರಸು– ಕೃಷ್ಣ ಬೈರೇಗೌಡ.ರಾಮ್ ಜಿ ಕಾಯ್ದೆ, SIR ಚರ್ಚೆಗೆ ವಿಪಕ್ಷ ಪಟ್ಟು: ಬಜೆಟ್ ಅಧಿವೇಶನದಲ್ಲಿ ಕದನ? .ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಜಿಲ್ಲೆಯ ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ಘೋಷಿಸಿದೆ.</p><p>ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋದಾಮಿನ ಮಾಲೀಕ ಗಂಗಾಧರ್ ದಾಸ್ನನ್ನು ಪೊಲೀಸರು ಬಂಧಿಸಿದ್ದು, ಇಂದು (ಬುಧವಾರ) ಬರುಯಿಪುರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p><p>ಗೋದಾಮುಗಳಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಜನರು ಮೃತಪಟ್ಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಸಂಪಾದಕೀಯ:ಬೈಕ್ ಟ್ಯಾಕ್ಸಿ ಸೇವೆ: ನಿರ್ಬಂಧ ರದ್ದು, ಸಮಗ್ರ ನಿಯಮಾವಳಿ ರೂಪುಗೊಳ್ಳಲಿ.ವಿಶ್ಲೇಷಣೆ: ರೀಲ್ ಕಾಲದಲ್ಲಿ ಮಕ್ಕಳ ಪುಸ್ತಕ. <p>ಮೃತದೇಹಗಳನ್ನು ಗುರುತಿಸಲಾಗದಷ್ಟು ಸುಟ್ಟು ಹೋದ ಕಾರಣ , ಡಿಎನ್ಎ ಪರೀಕ್ಷೆ ನಡೆಸಿ ಬಳಿಕ ಮೃತರ ಕುಟುಂಗಳಿಗೆ ಪರಿಹಾರ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಫಿರ್ಹಾದ್ ಹಕೀಮ್ ಹೇಳಿದ್ದಾರೆ.</p><p> ಡಿಎನ್ಎ ಪರೀಕ್ಷೆ ನಡೆಸಲು ಬುಧವಾರ ನ್ಯಾಯಾಲಯದಿಂದ ಅನುಮತಿ ಪಡೆಯಲಾಗುವುದು. ತನಿಖೆ ಮುಂದುವರಿದಿದ್ದು, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುವುದು ಎಂದು ಫಿರ್ಹಾದ್ ತಿಳಿಸಿದ್ದಾರೆ.</p><p>ಬೆಂಕಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ್ದ ಹಕೀಮ್, ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.</p>.ಶಿವಮೊಗ್ಗ: ತಡರಾತ್ರಿ ಹೊತ್ತಿ ಉರಿದ ಬಸ್, 40 ಪ್ರಯಾಣಿಕರು ಅಪಾಯದಿಂದ ಪಾರು.ದೊಡ್ಡಬಳ್ಳಾಪುರಕ್ಕೆ ಮೆಟ್ರೊ: ತಜ್ಞರ ಸಮಿತಿಗೆ ಶಿಫಾರಸು– ಕೃಷ್ಣ ಬೈರೇಗೌಡ.ರಾಮ್ ಜಿ ಕಾಯ್ದೆ, SIR ಚರ್ಚೆಗೆ ವಿಪಕ್ಷ ಪಟ್ಟು: ಬಜೆಟ್ ಅಧಿವೇಶನದಲ್ಲಿ ಕದನ? .ಭಾರತ–ಇಯು ನಡುವೆ ಮುಕ್ತ ವ್ಯಾಪಾರ ಒಪ್ಪಂದ: ಜಾಗತಿಕ ಸ್ಥಿರತೆಗೆ ಬಲ: ಮೋದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>