<p><strong>ಕೋಲ್ಕತ್ತ: </strong>ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯಪಾಲರು ಆದಷ್ಟು ಬೇಗ ಸೂಚಿಸುವ ಸಾಧ್ಯತೆ ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್ ಅವರು ಭಾನುವಾರ ತಿಳಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎಂಸಿ,‘ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಗೌರವ ಇಲ್ಲ' ಎಂದು ಹೇಳಿದೆ.</p>.<p>ಜಲ್ಪೈಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖಾನ್ ಅವರು,‘ಆಡಳಿತ ಪಕ್ಷದಲ್ಲಿ ದಿನೇ ದಿನೇ ಭಿನ್ನಭಿಪ್ರಾಯಗಳು, ಅಸಮಾಧಾನಗಳು ಹೆಚ್ಚುತ್ತಿವೆ. ಹೀಗಿರುವಾಗ ಪಕ್ಷ ಈಗಲೂ ಬಹುಮತವನ್ನು ಹೊಂದಿದೆಯೇ ಎಂಬ ಪ್ರಶ್ನೆ ಮೂಡುತ್ತದೆ’ ಎಂದರು.</p>.<p>‘ತೃಣಮೂಲ ಕಾಂಗ್ರೆಸ್ ಅನ್ನು ವಿರೋಧಿಸಿ ಶಾಸಕರು ಹೊರ ನಡೆಯುತ್ತಿದ್ದರೆ, ರಾಜ್ಯಪಾಲರು ಆದಷ್ಟು ಬೇಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಹುಮತ ಸಾಬೀತುಪಡಿಸುವಂತೆ ಸೂಚಿಸುವ ಸಾಧ್ಯತೆಯಿದೆ’ ಎಂದರು.</p>.<p>ಮಮತಾ ಬ್ಯಾನರ್ಜಿ ಅವರ ಸಂಪುಟದ ಹಲವು ಸಚಿವರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಅವರು ತಿಳಿಸಿದರು.</p>.<p>ಇದಕ್ಕೆ ತಿರುಗೇಟು ನೀಡಿದ ಟಿಎಂಸಿ ಸಂಸದ ಸೌಗತಾ ರಾಯ್,‘ಬಿಜೆಪಿ ನಾಯಕರಿಗೆ ಸಂವಿಧಾನ ಮತ್ತು ಅದರ ನಿಬಂಧನೆಗಳ ಬಗ್ಗೆ ಏನೂ ತಿಳಿದಿಲ್ಲ. ರಾಜ್ಯಪಾಲರು ಇಂತಹ ಅಸಾಂವಿಧಾನಿಕ ಕ್ರಮವನ್ನು ಕೈಗೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಾನ್ ಅವರಿಗೆ ತಿಳಿಯಲು ಹೇಗೆ ಸಾಧ್ಯ? ಚುನಾಯಿತ ಸರ್ಕಾರದ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಹೆಚ್ಚಿನ ಶಾಸಕರು ಮುಖ್ಯಮಂತ್ರಿಗಳ ಜತೆ ಇದ್ದಾರೆ. ವಿಧಾನಸಭೆಯಲ್ಲಿ ಟಿಎಂಸಿಗೆ 218 ಶಾಸಕರ ಬೆಂಬಲವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯಪಾಲರು ಆದಷ್ಟು ಬೇಗ ಸೂಚಿಸುವ ಸಾಧ್ಯತೆ ಎಂದು ಬಿಜೆಪಿ ಸಂಸದ ಸೌಮಿತ್ರ ಖಾನ್ ಅವರು ಭಾನುವಾರ ತಿಳಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿಎಂಸಿ,‘ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದ ಬಗ್ಗೆ ಗೌರವ ಇಲ್ಲ' ಎಂದು ಹೇಳಿದೆ.</p>.<p>ಜಲ್ಪೈಗುರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಖಾನ್ ಅವರು,‘ಆಡಳಿತ ಪಕ್ಷದಲ್ಲಿ ದಿನೇ ದಿನೇ ಭಿನ್ನಭಿಪ್ರಾಯಗಳು, ಅಸಮಾಧಾನಗಳು ಹೆಚ್ಚುತ್ತಿವೆ. ಹೀಗಿರುವಾಗ ಪಕ್ಷ ಈಗಲೂ ಬಹುಮತವನ್ನು ಹೊಂದಿದೆಯೇ ಎಂಬ ಪ್ರಶ್ನೆ ಮೂಡುತ್ತದೆ’ ಎಂದರು.</p>.<p>‘ತೃಣಮೂಲ ಕಾಂಗ್ರೆಸ್ ಅನ್ನು ವಿರೋಧಿಸಿ ಶಾಸಕರು ಹೊರ ನಡೆಯುತ್ತಿದ್ದರೆ, ರಾಜ್ಯಪಾಲರು ಆದಷ್ಟು ಬೇಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬಹುಮತ ಸಾಬೀತುಪಡಿಸುವಂತೆ ಸೂಚಿಸುವ ಸಾಧ್ಯತೆಯಿದೆ’ ಎಂದರು.</p>.<p>ಮಮತಾ ಬ್ಯಾನರ್ಜಿ ಅವರ ಸಂಪುಟದ ಹಲವು ಸಚಿವರು ಬಿಜೆಪಿಗೆ ಬರಲು ಸಿದ್ಧರಿದ್ದಾರೆ ಎಂದು ಅವರು ತಿಳಿಸಿದರು.</p>.<p>ಇದಕ್ಕೆ ತಿರುಗೇಟು ನೀಡಿದ ಟಿಎಂಸಿ ಸಂಸದ ಸೌಗತಾ ರಾಯ್,‘ಬಿಜೆಪಿ ನಾಯಕರಿಗೆ ಸಂವಿಧಾನ ಮತ್ತು ಅದರ ನಿಬಂಧನೆಗಳ ಬಗ್ಗೆ ಏನೂ ತಿಳಿದಿಲ್ಲ. ರಾಜ್ಯಪಾಲರು ಇಂತಹ ಅಸಾಂವಿಧಾನಿಕ ಕ್ರಮವನ್ನು ಕೈಗೊಳ್ಳಲಿದ್ದಾರೆ ಎಂಬುದರ ಬಗ್ಗೆ ಖಾನ್ ಅವರಿಗೆ ತಿಳಿಯಲು ಹೇಗೆ ಸಾಧ್ಯ? ಚುನಾಯಿತ ಸರ್ಕಾರದ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ. ಹೆಚ್ಚಿನ ಶಾಸಕರು ಮುಖ್ಯಮಂತ್ರಿಗಳ ಜತೆ ಇದ್ದಾರೆ. ವಿಧಾನಸಭೆಯಲ್ಲಿ ಟಿಎಂಸಿಗೆ 218 ಶಾಸಕರ ಬೆಂಬಲವಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>