ಸುವೇಂದು ಅವರ ಅಂಗರಕ್ಷಕರಾಗಿದ್ದ ಸುಭಬ್ರತಾ ಚಕ್ರವರ್ತಿ 2018ರಲ್ಲಿ ಸುವೇಂದು ಅವರ ಕಾಂತಿ ನಿವಾಸದಲ್ಲಿ ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡಿದ್ದರು ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿ ಅವರಿಗೆ ಸಿಐಡಿ ಸಮನ್ಸ್ ನೀಡಿತ್ತು. ಈ ಸಮನ್ಸ್ಗೆ ಸಂಬಂಧಿಸಿ ಸುವೇಂದು ವಿರುದ್ಧ ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳಬಾರದು. ನ್ಯಾಯಾಲಯದ ಅನುಮತಿಯಿಲ್ಲದೆ ಅವರನ್ನು ಬಂಧಿಸಬಾರದು ಎಂದು ಹೈಕೋರ್ಟ್ ಹೇಳಿತ್ತು.