<p><strong>ನವದೆಹಲಿ:</strong> ಪ್ರಮುಖ ಎಂಟು ವಿಧೇಯಕಗಳಿಗೆ ಒಪ್ಪಿಗೆ ನೀಡದೆ ತಡೆಹಿಡಿದಿರುವ ರಾಜ್ಯಪಾಲ ಸಿ.ವಿ. ಆನಂದ ಬೋಸ್ ನಡೆಯನ್ನು ಖಂಡಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.</p><p>ರಾಜ್ಯದ ವಿಶ್ವವಿದ್ಯಾನಿಲಯಗಳ ನಿರ್ವಹಣೆ ವಿಚಾರದಲ್ಲೂ ಆಡಳಿತಾರೂಢ ಟಿಎಂಸಿ ಸರ್ಕಾರ ಮತ್ತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ನಡುವೆ ಜಟಾಪಟಿ ನಡೆಯುತ್ತಿದೆ. </p><p>ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯ ಕಾನೂನು (ತಿದ್ದುಪಡಿ) ಮಸೂದೆ, 2023 ಅನ್ನು ಬಿಜೆಪಿ ವಿರೋಧಿಸಿತ್ತು. ಹೊಸ ಶೋಧನಾ ಸಮಿತಿಯು ಕುಲಪತಿಗಳ ನೇಮಕದ ಮೇಲೆ ಆಡಳಿತ ಪಕ್ಷದ ನಿಯಂತ್ರಣವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಆರೋಪಿಸಿತ್ತು.</p><p>ರಾಜಭವನದಲ್ಲಿ ನಡೆದಿರುವ ಕೆಲ ಘಟನೆಗಳಿಂದ ಅಲ್ಲಿಗೆ ತೆರಳಲು ಭಯವಾಗುತ್ತಿದೆ ಎಂದು ಮಹಿಳೆಯೊಬ್ಬರು ದೂರು ನೀಡಿರುವುದಾಗಿ ಮಮತಾ ಬ್ಯಾನರ್ಜಿ ಅವರು ಜೂನ್ 27ರಂದು ನಡೆದ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದರು. ಈ ಬಗ್ಗೆ ಜೂನ್ 28ರಂದು ಬೋಸ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈಚೆಗೆ ಪ್ರಕರಣದ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ಮುಂದೂಡಿತ್ತು. </p><p>‘ಮಮತಾ ಮತ್ತು ಅವರ ಬೆಂಬಲಿಗರು ರಾಜ್ಯಪಾಲರ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದು, ಇನ್ನೂ ಮುಂದೆ ಅವರು ಈ ಬಗ್ಗೆ ಹೇಳಿಕೆ ನೀಡದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಬೋಸ್ ಪರ ವಕೀಲರು ನ್ಯಾಯಲಯಾಕ್ಕೆ ಮನವಿ ಮಾಡಿದ್ದರು. </p><p>ರಾಜಭವನದ ಮಹಿಳಾ ಸಿಬ್ಬಂದಿಯೊಬ್ಬರು ರಾಜ್ಯಪಾಲ ಬೋಸ್ ವಿರುದ್ಧ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದರು.</p>.ಸೋಲು–ಗೆಲುವು ಸಹಜ | ಇರಾನಿ ಬಗ್ಗೆ ‘ಅವಹೇಳನ’ ಬೇಡ: ಬೆಂಬಲಿಗರಿಗೆ ರಾಹುಲ್ ಮನವಿ.ಕೋಲ್ಕತ್ತ ಪೊಲೀಸ್ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ.ರಾಜ್ಯಪಾಲರಿಂದ ಕೋಮು ಪ್ರಚೋದನೆ: ರಾಷ್ಟ್ರಪತಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ.ಪಶ್ಚಿಮ ಬಂಗಾಳ: ವಿಶೇಷ ಅಧಿವೇಶನ ಕರೆದ ಸ್ಪೀಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಮುಖ ಎಂಟು ವಿಧೇಯಕಗಳಿಗೆ ಒಪ್ಪಿಗೆ ನೀಡದೆ ತಡೆಹಿಡಿದಿರುವ ರಾಜ್ಯಪಾಲ ಸಿ.ವಿ. ಆನಂದ ಬೋಸ್ ನಡೆಯನ್ನು ಖಂಡಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಇಂದು (ಶುಕ್ರವಾರ) ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ ಎಂದು ‘ಲೈವ್ ಲಾ’ ವರದಿ ಮಾಡಿದೆ.</p><p>ರಾಜ್ಯದ ವಿಶ್ವವಿದ್ಯಾನಿಲಯಗಳ ನಿರ್ವಹಣೆ ವಿಚಾರದಲ್ಲೂ ಆಡಳಿತಾರೂಢ ಟಿಎಂಸಿ ಸರ್ಕಾರ ಮತ್ತು ರಾಜ್ಯಪಾಲ ಸಿ.ವಿ. ಆನಂದ ಬೋಸ್ ನಡುವೆ ಜಟಾಪಟಿ ನಡೆಯುತ್ತಿದೆ. </p><p>ಪಶ್ಚಿಮ ಬಂಗಾಳ ವಿಶ್ವವಿದ್ಯಾಲಯ ಕಾನೂನು (ತಿದ್ದುಪಡಿ) ಮಸೂದೆ, 2023 ಅನ್ನು ಬಿಜೆಪಿ ವಿರೋಧಿಸಿತ್ತು. ಹೊಸ ಶೋಧನಾ ಸಮಿತಿಯು ಕುಲಪತಿಗಳ ನೇಮಕದ ಮೇಲೆ ಆಡಳಿತ ಪಕ್ಷದ ನಿಯಂತ್ರಣವನ್ನು ಇನ್ನಷ್ಟು ಹೆಚ್ಚಿಸುತ್ತದೆ ಎಂದು ಆರೋಪಿಸಿತ್ತು.</p><p>ರಾಜಭವನದಲ್ಲಿ ನಡೆದಿರುವ ಕೆಲ ಘಟನೆಗಳಿಂದ ಅಲ್ಲಿಗೆ ತೆರಳಲು ಭಯವಾಗುತ್ತಿದೆ ಎಂದು ಮಹಿಳೆಯೊಬ್ಬರು ದೂರು ನೀಡಿರುವುದಾಗಿ ಮಮತಾ ಬ್ಯಾನರ್ಜಿ ಅವರು ಜೂನ್ 27ರಂದು ನಡೆದ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದರು. ಈ ಬಗ್ಗೆ ಜೂನ್ 28ರಂದು ಬೋಸ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈಚೆಗೆ ಪ್ರಕರಣದ ವಿಚಾರಣೆಯನ್ನು ಕಲ್ಕತ್ತಾ ಹೈಕೋರ್ಟ್ ಮುಂದೂಡಿತ್ತು. </p><p>‘ಮಮತಾ ಮತ್ತು ಅವರ ಬೆಂಬಲಿಗರು ರಾಜ್ಯಪಾಲರ ವಿರುದ್ಧ ಆಧಾರರಹಿತ ಆರೋಪ ಮಾಡುತ್ತಿದ್ದು, ಇನ್ನೂ ಮುಂದೆ ಅವರು ಈ ಬಗ್ಗೆ ಹೇಳಿಕೆ ನೀಡದಂತೆ ಮಧ್ಯಂತರ ತಡೆ ನೀಡಬೇಕು’ ಎಂದು ಬೋಸ್ ಪರ ವಕೀಲರು ನ್ಯಾಯಲಯಾಕ್ಕೆ ಮನವಿ ಮಾಡಿದ್ದರು. </p><p>ರಾಜಭವನದ ಮಹಿಳಾ ಸಿಬ್ಬಂದಿಯೊಬ್ಬರು ರಾಜ್ಯಪಾಲ ಬೋಸ್ ವಿರುದ್ಧ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದರು.</p>.ಸೋಲು–ಗೆಲುವು ಸಹಜ | ಇರಾನಿ ಬಗ್ಗೆ ‘ಅವಹೇಳನ’ ಬೇಡ: ಬೆಂಬಲಿಗರಿಗೆ ರಾಹುಲ್ ಮನವಿ.ಕೋಲ್ಕತ್ತ ಪೊಲೀಸ್ ಆಯುಕ್ತ, ಡಿಸಿಪಿ ವಿರುದ್ಧ ಗೃಹ ಇಲಾಖೆ ಶಿಸ್ತು ಕ್ರಮ.ರಾಜ್ಯಪಾಲರಿಂದ ಕೋಮು ಪ್ರಚೋದನೆ: ರಾಷ್ಟ್ರಪತಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ.ಪಶ್ಚಿಮ ಬಂಗಾಳ: ವಿಶೇಷ ಅಧಿವೇಶನ ಕರೆದ ಸ್ಪೀಕರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>