<p><strong>ಕೋಲ್ಕತ್ತ:</strong> ತನಿಖೆಯ ವಿವಿಧ ಹಂತದಲ್ಲಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ವರದಿ ನೀಡುವಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ರಾಜಭವನ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.</p>.<p>ಸಂವಿಧಾನದ ಅಡಿ ನೀಡಲಾಗಿರುವ ಅವಕಾಶವನ್ನು ಉಲ್ಲೇಖಿಸಿ ಅವರು ಈ ಪತ್ರ ಬರೆದಿದ್ದಾರೆ. ಆಡಳಿತ ಮತ್ತು ಉದ್ದೇಶಿತ ಶಾಸನಗಳ ಕುರಿತು ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರಗಳನ್ನು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೂ ತಮ್ಮ ರಾಜ್ಯಪಾಲರಿಗೆ ತಿಳಿಸಬೇಕು ಎಂದು ರಾಜ್ಯಪಾಲರು ಹೇಳಿದ್ದಾರೆ</p>.<p>ಶಾಲಾ ಸಿಬ್ಬಂದಿ ನೇಮಕಾತಿ ಮತ್ತು ಪಡಿತರ ವಿತರಣೆ ಹಗರಣ ಹಾಗೂ ಜಾನುವಾರು ಕಳ್ಳಸಾಗಣೆ, ಕಲ್ಲಿದ್ದಲು ಕಳ್ಳತನ ಪ್ರಕರಣಗಳೂ ಸೇರಿ ರಾಜ್ಯದಲ್ಲಿ ನಡೆದಿರುವ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಕುರಿತ ಮಾಹಿತಿಯನ್ನು ಅವರು ಕೇಳಿದ್ದಾರೆ. </p>.<p>ರಾಜ್ಯದ ಆಡಳಿತದ ಬಹುಹಂತಗಳಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿರುವುದಕ್ಕೆ ಈ ಪ್ರಕರಣಗಳು ನಿದರ್ಶನಗಳಾಗಿವೆ ಎಂದು ರಾಜಭವನ ಪೋಸ್ಟ್ನಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ತನಿಖೆಯ ವಿವಿಧ ಹಂತದಲ್ಲಿರುವ ಎಲ್ಲಾ ಹಗರಣಗಳ ಕುರಿತು ಸಮಗ್ರ ವರದಿ ನೀಡುವಂತೆ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ಅವರು ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ರಾಜಭವನ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.</p>.<p>ಸಂವಿಧಾನದ ಅಡಿ ನೀಡಲಾಗಿರುವ ಅವಕಾಶವನ್ನು ಉಲ್ಲೇಖಿಸಿ ಅವರು ಈ ಪತ್ರ ಬರೆದಿದ್ದಾರೆ. ಆಡಳಿತ ಮತ್ತು ಉದ್ದೇಶಿತ ಶಾಸನಗಳ ಕುರಿತು ಸಚಿವ ಸಂಪುಟ ತೆಗೆದುಕೊಳ್ಳುವ ನಿರ್ಧಾರಗಳನ್ನು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೂ ತಮ್ಮ ರಾಜ್ಯಪಾಲರಿಗೆ ತಿಳಿಸಬೇಕು ಎಂದು ರಾಜ್ಯಪಾಲರು ಹೇಳಿದ್ದಾರೆ</p>.<p>ಶಾಲಾ ಸಿಬ್ಬಂದಿ ನೇಮಕಾತಿ ಮತ್ತು ಪಡಿತರ ವಿತರಣೆ ಹಗರಣ ಹಾಗೂ ಜಾನುವಾರು ಕಳ್ಳಸಾಗಣೆ, ಕಲ್ಲಿದ್ದಲು ಕಳ್ಳತನ ಪ್ರಕರಣಗಳೂ ಸೇರಿ ರಾಜ್ಯದಲ್ಲಿ ನಡೆದಿರುವ ಎಲ್ಲಾ ಭ್ರಷ್ಟಾಚಾರ ಪ್ರಕರಣಗಳ ತನಿಖೆ ಕುರಿತ ಮಾಹಿತಿಯನ್ನು ಅವರು ಕೇಳಿದ್ದಾರೆ. </p>.<p>ರಾಜ್ಯದ ಆಡಳಿತದ ಬಹುಹಂತಗಳಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿರುವುದಕ್ಕೆ ಈ ಪ್ರಕರಣಗಳು ನಿದರ್ಶನಗಳಾಗಿವೆ ಎಂದು ರಾಜಭವನ ಪೋಸ್ಟ್ನಲ್ಲಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>