<p class="title"><strong>ದೀಘಾ: </strong>ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ದಿಘಾದಲ್ಲಿ ₹100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಗನ್ನಾಥ ದೇವಾಲಯದ ನಿರ್ಮಾಣ ಕಾರ್ಯವು 2023ರ ಡಿಸೆಂಬರ್ಗೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p>.<p class="bodytext">ಇಲ್ಲಿಯ ಕರಾವಳಿ ತೀರದಲ್ಲಿ 20 ಎಕರೆ ಪ್ರದೇಶದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮವು(ಡಬ್ಲ್ಯುಬಿಎಚ್ಐಡಿಸಿಒ) ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮಾದರಿಯಲ್ಲೇ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. 65 ಮೀಟರ್ ಎತ್ತರದ ಈ ದೇವಾಲಯದಲ್ಲಿ ಜಗನ್ನಾಥ, ಬಲಭದ್ರ ಮತ್ತು ಸುಭದ್ರಾ ದೇವತೆಗಳ ಮೂರ್ತಿ ಇರಲಿದೆ ಎಂದುಡಬ್ಲ್ಯುಬಿಎಚ್ಐಡಿಸಿಒ ಮುಖ್ಯ ಎಂಜಿನಿಯರ್ ಸುಮನ್ ನಿಯೋಗಿ ತಿಳಿಸಿದ್ದಾರೆ.</p>.<p class="bodytext">ನಿರ್ಮಾಣ ಕೆಲಸ ಪೂರ್ಣವಾದ ಬಳಿಕ ದೀಘಾ ಶಂಕರಪುರ ಅಭಿವೃದ್ಧಿ ಪ್ರಾಧಿಕಾರವು ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.</p>.<p class="bodytext">‘ಪುರಿ ಜಗನ್ನಾಥ ದೇವಸ್ಥಾನವನ್ನೇ ಹೋಲುವ ದೇವಸ್ಥಾನವನ್ನು ಪಶ್ಚಿಮ ಬಂಗಾಳದಲ್ಲಿ ನಿರ್ಮಿಸಬೇಕು ಎಂಬುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕನಸು. ಅದನ್ನು ನನಸಾಗಿಸಲು ಸುಮಾರು 200 ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p class="bodytext">ರಾಜಸ್ಥಾನದಿಂದ ತರಿಸಲಾದ ಕೆಂಪು ಕಲ್ಲಿನಿಂದ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ದೀಘಾ: </strong>ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ದಿಘಾದಲ್ಲಿ ₹100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಜಗನ್ನಾಥ ದೇವಾಲಯದ ನಿರ್ಮಾಣ ಕಾರ್ಯವು 2023ರ ಡಿಸೆಂಬರ್ಗೆ ಪೂರ್ಣವಾಗಲಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.</p>.<p class="bodytext">ಇಲ್ಲಿಯ ಕರಾವಳಿ ತೀರದಲ್ಲಿ 20 ಎಕರೆ ಪ್ರದೇಶದಲ್ಲಿ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. ಪಶ್ಚಿಮ ಬಂಗಾಳ ವಸತಿ ಮೂಲಸೌಕರ್ಯ ಅಭಿವೃದ್ಧಿ ನಿಗಮವು(ಡಬ್ಲ್ಯುಬಿಎಚ್ಐಡಿಸಿಒ) ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮಾದರಿಯಲ್ಲೇ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ. 65 ಮೀಟರ್ ಎತ್ತರದ ಈ ದೇವಾಲಯದಲ್ಲಿ ಜಗನ್ನಾಥ, ಬಲಭದ್ರ ಮತ್ತು ಸುಭದ್ರಾ ದೇವತೆಗಳ ಮೂರ್ತಿ ಇರಲಿದೆ ಎಂದುಡಬ್ಲ್ಯುಬಿಎಚ್ಐಡಿಸಿಒ ಮುಖ್ಯ ಎಂಜಿನಿಯರ್ ಸುಮನ್ ನಿಯೋಗಿ ತಿಳಿಸಿದ್ದಾರೆ.</p>.<p class="bodytext">ನಿರ್ಮಾಣ ಕೆಲಸ ಪೂರ್ಣವಾದ ಬಳಿಕ ದೀಘಾ ಶಂಕರಪುರ ಅಭಿವೃದ್ಧಿ ಪ್ರಾಧಿಕಾರವು ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.</p>.<p class="bodytext">‘ಪುರಿ ಜಗನ್ನಾಥ ದೇವಸ್ಥಾನವನ್ನೇ ಹೋಲುವ ದೇವಸ್ಥಾನವನ್ನು ಪಶ್ಚಿಮ ಬಂಗಾಳದಲ್ಲಿ ನಿರ್ಮಿಸಬೇಕು ಎಂಬುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕನಸು. ಅದನ್ನು ನನಸಾಗಿಸಲು ಸುಮಾರು 200 ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ’ ಎಂದು ಅವರು ಹೇಳಿದ್ದಾರೆ.</p>.<p class="bodytext">ರಾಜಸ್ಥಾನದಿಂದ ತರಿಸಲಾದ ಕೆಂಪು ಕಲ್ಲಿನಿಂದ ಈ ದೇವಸ್ಥಾನವನ್ನು ನಿರ್ಮಿಸಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>