ಪುರ್ಬಾ ಮೇದಿನಿಪುರ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿವೆ. ನಮ್ಮ ವಿರೋಧಿಗಳು ಶಾಂತಿ, ಸೌಹಾರ್ದತೆ ಕದಡಲು ಈಗಾಗಲೇ ಎಲ್ಲ ರೀತಿಯ ಯೋಜನೆ ರೂಪಿಸಿದ್ದಾರೆ. ಎಪ್ರಿಲ್ 6ರಂದು ನಡೆಯುವ ಹನುಮ ಜಯಂತಿಯಂದು ಅಲ್ಪಸಂಖ್ಯಾತರಿಗೆ ಹಿಂಸೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿಂದೂ ಸಹೋದರರ ಮೇಲಿದೆ’ ಎಂದು ಹೇಳಿದ್ದಾರೆ.