<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಕೆಲ ಅಪರಿಚಿತರು ಮಮತಾ ಬ್ಯಾನರ್ಜಿ ಅವರನ್ನು ತಳ್ಳಿ ಗಾಯಗೊಳಿಸಿದ ಘಟನೆ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.</p>.<p>ಕೋಲ್ಕತ್ತದಲ್ಲಿರುವ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಮಮತಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪಾದ, ಬಲ ಭುಜ, ಕುತ್ತಿಗೆಗೆ ಗಾಯಗಳಾಗಿವೆ ಎಂದು ವೈದ್ಯರ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸುವುದಕ್ಕಾಗಿ ಐವರು ತಜ್ಞ ವೈದ್ಯರ ಸಮಿತಿಯನ್ನು ರಚಿಸಲಾಗಿದೆ.</p>.<p>ಆಸ್ಪತ್ರೆಯಲ್ಲಿ ದಾಖಲಾಗಿರುವ ಮಮತಾರ ಚಿತ್ರವೊಂದನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುವ ಮೂಲಕ ಅವರ ಅಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ.</p>.<p>'ಪಶ್ಚಿಮ ಬಂಗಾಳ ಬಿಜೆಪಿ'ಯನ್ನು ಗುರಿಯಾಗಿಸಿ ಟ್ವೀಟ್ ಮಾಡಿರುವ ಅಭಿಷೇಕ್ ಬ್ಯಾನರ್ಜಿ, 'ಮೇ 2ರ ಭಾನುವಾರದಂದು ಬಂಗಾಳಿ ಜನರ ಶಕ್ತಿಯನ್ನು ಎದುರಿಸಲು ನೀವು ತಯಾರಾಗಿ' ಎಂದು ಗುಡುಗಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/mamata-banerjee-injured-says-pushed-by-5-men-812200.html" target="_blank"><strong>ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ</strong></a></p>.<p>'ಮಮತಾ ಅವರನ್ನು ತಡೆಯಲು ಹೇಡಿಗಳು ಯತ್ನಿಸಿದ್ದಾರೆ. ಆದರೆ, ಅದು ಅವರಿಗೆ ಸಾಧ್ಯವಾಗಿಲ್ಲ. ಮೊದಲು ಪಶ್ಚಿಮ ಬಂಗಾಳ ಎಡಿಜಿ, ನಂತರ ಡಿಜಿ ಅವರನ್ನು ತೆಗೆದುಹಾಕಲಾಯಿತು. ಈಗ ಈ ಘಟನೆ ನಡೆದಿದೆ. ಇದೆಲ್ಲವನ್ನೂ ನೋಡಿಕೊಂಡು ಚುನಾವಣಾ ಆಯೋಗ ಹೇಗೆ ಸುಮ್ಮನಿದೆ' ಎಂದು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ ನಿರ್ಧರಿಸಿದೆ ಎಂದೂ ಪಾರ್ಥ ಚಟರ್ಜಿ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/west-bengal-election-2021-will-go-to-kolkata-urge-farmers-to-defeat-bjp-in-polls-says-bku-leader-812210.html" target="_blank"><strong>ಬಿಜೆಪಿಯನ್ನು ಮಣಿಸಲು ಬಂಗಾಳಕ್ಕೆ ಭೇಟಿ ನೀಡಲಿರುವ ರಾಕೇಶ್ ಟಿಕಾಯತ್</strong></a></p>.<p>ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಂದುವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, 8 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ಕ್ಕೆ ಮತದಾನ ಮುಕ್ತಾಯಗೊಳ್ಳಲಿದೆ. ಮೇ 2ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.</p>.<p>ಮಮತಾ ಅವರು ಬುಧವಾರ ನಂದಿಗ್ರಾಮ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಒಂದು ಕಾಲದಲ್ಲಿ ಮಮತಾ ಅವರ ಆಪ್ತರಾಗಿದ್ದ ಸುವೇಂದು ಅಧಿಕಾರಿ ಇಲ್ಲಿನ ಬಿಜೆಪಿಯ ಪಕ್ಷದ ಅಭ್ಯರ್ಥಿಯಾಗಿದ್ದಾರೆ.</p>.<p><strong>ಇದನ್ನೂ ಓದಿ- <a href="http://https://www.prajavani.net/india-news/west-bengal-cm-mamata-banerjee-injured-after-being-manhandled-during-poll-campaign-in-nandigram-812296.html" target="_blank">ಮಮತಾಗೆ ಮಾಡು ಇಲ್ಲವೇ ಮಡಿ ಹೋರಾಟ: ಬಿಜೆಪಿಯ ತಂತ್ರಗಳಿಗೆ ಟಿಎಂಸಿ ಪ್ರತಿತಂತ್ರ</a></strong></p>.<p>ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಮಮತಾ ಅವರು ನಾಮಪತ್ರ ಸಲ್ಲಿಸಿದ ಬಳಿಕ ಈ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ವರದಿ ಕೇಳಿದೆ.</p>.<p>'ಕೆಲವು ಅಪರಿಚಿತರು ತಮ್ಮನ್ನು ತಳ್ಳಿದ್ದೂ ಅಲ್ಲದೇ ಎಡಗಾಲಿಗೆ ಗಾಯ ಆಗುವಂತೆ ಕಾರಿನ ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p><strong>VIDEO:</strong> <a href="https://www.prajavani.net/video/india-news/west-bengal-cm-mamata-brought-to-kolkata-hospital-after-suffering-injuries-812345.html" target="_blank"><strong>ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಕೆಲ ಅಪರಿಚಿತರು ಮಮತಾ ಬ್ಯಾನರ್ಜಿ ಅವರನ್ನು ತಳ್ಳಿ ಗಾಯಗೊಳಿಸಿದ ಘಟನೆ ತೀವ್ರ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.</p>.<p>ಕೋಲ್ಕತ್ತದಲ್ಲಿರುವ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ಮಮತಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಪಾದ, ಬಲ ಭುಜ, ಕುತ್ತಿಗೆಗೆ ಗಾಯಗಳಾಗಿವೆ ಎಂದು ವೈದ್ಯರ ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯದ ಮೇಲೆ ನಿಗಾ ಇರಿಸುವುದಕ್ಕಾಗಿ ಐವರು ತಜ್ಞ ವೈದ್ಯರ ಸಮಿತಿಯನ್ನು ರಚಿಸಲಾಗಿದೆ.</p>.<p>ಆಸ್ಪತ್ರೆಯಲ್ಲಿ ದಾಖಲಾಗಿರುವ ಮಮತಾರ ಚಿತ್ರವೊಂದನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುವ ಮೂಲಕ ಅವರ ಅಳಿಯ ಹಾಗೂ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಬಿಜೆಪಿಗೆ ನೇರ ಸವಾಲು ಹಾಕಿದ್ದಾರೆ.</p>.<p>'ಪಶ್ಚಿಮ ಬಂಗಾಳ ಬಿಜೆಪಿ'ಯನ್ನು ಗುರಿಯಾಗಿಸಿ ಟ್ವೀಟ್ ಮಾಡಿರುವ ಅಭಿಷೇಕ್ ಬ್ಯಾನರ್ಜಿ, 'ಮೇ 2ರ ಭಾನುವಾರದಂದು ಬಂಗಾಳಿ ಜನರ ಶಕ್ತಿಯನ್ನು ಎದುರಿಸಲು ನೀವು ತಯಾರಾಗಿ' ಎಂದು ಗುಡುಗಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/mamata-banerjee-injured-says-pushed-by-5-men-812200.html" target="_blank"><strong>ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ</strong></a></p>.<p>'ಮಮತಾ ಅವರನ್ನು ತಡೆಯಲು ಹೇಡಿಗಳು ಯತ್ನಿಸಿದ್ದಾರೆ. ಆದರೆ, ಅದು ಅವರಿಗೆ ಸಾಧ್ಯವಾಗಿಲ್ಲ. ಮೊದಲು ಪಶ್ಚಿಮ ಬಂಗಾಳ ಎಡಿಜಿ, ನಂತರ ಡಿಜಿ ಅವರನ್ನು ತೆಗೆದುಹಾಕಲಾಯಿತು. ಈಗ ಈ ಘಟನೆ ನಡೆದಿದೆ. ಇದೆಲ್ಲವನ್ನೂ ನೋಡಿಕೊಂಡು ಚುನಾವಣಾ ಆಯೋಗ ಹೇಗೆ ಸುಮ್ಮನಿದೆ' ಎಂದು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ ನಿರ್ಧರಿಸಿದೆ ಎಂದೂ ಪಾರ್ಥ ಚಟರ್ಜಿ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/west-bengal-election-2021-will-go-to-kolkata-urge-farmers-to-defeat-bjp-in-polls-says-bku-leader-812210.html" target="_blank"><strong>ಬಿಜೆಪಿಯನ್ನು ಮಣಿಸಲು ಬಂಗಾಳಕ್ಕೆ ಭೇಟಿ ನೀಡಲಿರುವ ರಾಕೇಶ್ ಟಿಕಾಯತ್</strong></a></p>.<p>ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಂದುವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, 8 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ಕ್ಕೆ ಮತದಾನ ಮುಕ್ತಾಯಗೊಳ್ಳಲಿದೆ. ಮೇ 2ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.</p>.<p>ಮಮತಾ ಅವರು ಬುಧವಾರ ನಂದಿಗ್ರಾಮ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಒಂದು ಕಾಲದಲ್ಲಿ ಮಮತಾ ಅವರ ಆಪ್ತರಾಗಿದ್ದ ಸುವೇಂದು ಅಧಿಕಾರಿ ಇಲ್ಲಿನ ಬಿಜೆಪಿಯ ಪಕ್ಷದ ಅಭ್ಯರ್ಥಿಯಾಗಿದ್ದಾರೆ.</p>.<p><strong>ಇದನ್ನೂ ಓದಿ- <a href="http://https://www.prajavani.net/india-news/west-bengal-cm-mamata-banerjee-injured-after-being-manhandled-during-poll-campaign-in-nandigram-812296.html" target="_blank">ಮಮತಾಗೆ ಮಾಡು ಇಲ್ಲವೇ ಮಡಿ ಹೋರಾಟ: ಬಿಜೆಪಿಯ ತಂತ್ರಗಳಿಗೆ ಟಿಎಂಸಿ ಪ್ರತಿತಂತ್ರ</a></strong></p>.<p>ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಮಮತಾ ಅವರು ನಾಮಪತ್ರ ಸಲ್ಲಿಸಿದ ಬಳಿಕ ಈ ಘಟನೆ ನಡೆದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ವರದಿ ಕೇಳಿದೆ.</p>.<p>'ಕೆಲವು ಅಪರಿಚಿತರು ತಮ್ಮನ್ನು ತಳ್ಳಿದ್ದೂ ಅಲ್ಲದೇ ಎಡಗಾಲಿಗೆ ಗಾಯ ಆಗುವಂತೆ ಕಾರಿನ ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p><strong>VIDEO:</strong> <a href="https://www.prajavani.net/video/india-news/west-bengal-cm-mamata-brought-to-kolkata-hospital-after-suffering-injuries-812345.html" target="_blank"><strong>ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>