<p><strong>ನವದೆಹಲಿ/ಚೆನ್ನೈ:</strong> ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಮೇಲೆ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬುಧವಾರ ನಡೆದ ದಾಳಿಯನ್ನು ಹಲವು ರಾಜಕೀಯ ಮುಖಂಡರು ಖಂಡಿಸಿದ್ದಾರೆ.</p>.<p>ಈ ವಿಚಾರವಾಗಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ಮಮತಾ ದೀದಿ ಮೇಲಿನ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಘಟನೆಗೆ ಕಾರಣರಾದವರನ್ನು ತಕ್ಷಣವೇ ಬಂಧಿಸಿ ಶಿಕ್ಷಿಸಬೇಕು' ಎಂದು ಒತ್ತಾಯಿಸಿದ್ದಾರೆ.</p>.<p>'ಮಮತಾ ಬ್ಯಾನರ್ಜಿ ಮೇಲಿನ ದಾಳಿಯು ಭಾರತದ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಇಂತಹ ಅಪರಾಧ ಎಸಗಿದವರಿಗೆ ಈ ಕೂಡಲೇ ಶಿಕ್ಷೆ ಆಗಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಪ್ಪಿಸಲು ಭಾರತದ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಡಿಎಂಕೆ ನಾಯಕ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/mamata-banerjee-injured-says-pushed-by-5-men-812200.html" target="_blank"><strong>ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ</strong></a></p>.<p>ಮಮತಾ ಬ್ಯಾನರ್ಜಿ ಅವರ ಮೇಲೆ ನಡೆದ ದಾಳಿಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ, ' ಪ್ರಜಾಪ್ರಭುತ್ವದಲ್ಲಿ ದ್ವೇಷ ಮತ್ತು ಹಿಂಸೆ ಸ್ವೀಕಾರಾರ್ಹವಲ್ಲ. ಅದನ್ನು ನಾವು ಖಂಡಿಸಲೇಬೇಕಿದೆ. ಟಿಎಂಸಿ ನಾಯಕಿಯ ತ್ವರಿತ ಚೇತರಿಕೆಗೆ ನಾನು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/west-bengal-election-2021-will-go-to-kolkata-urge-farmers-to-defeat-bjp-in-polls-says-bku-leader-812210.html" target="_blank"><strong>ಬಿಜೆಪಿಯನ್ನು ಮಣಿಸಲು ಬಂಗಾಳಕ್ಕೆ ಭೇಟಿ ನೀಡಲಿರುವ ರಾಕೇಶ್ ಟಿಕಾಯತ್</strong></a></p>.<p>ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಮಮತಾ ಅವರ ಮೇಲೆ ದಾಳಿ ನಡೆದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ವರದಿ ಕೇಳಿದೆ.</p>.<p><strong>ಇದನ್ನೂ ಓದಿ-<a href="http://https//www.prajavani.net/india-news/west-bengal-cm-mamata-banerjee-injured-after-being-manhandled-during-poll-campaign-in-nandigram-812296.html" target="_blank">ಮಮತಾಗೆ ಮಾಡು ಇಲ್ಲವೇ ಮಡಿ ಹೋರಾಟ: ಬಿಜೆಪಿಯ ತಂತ್ರಗಳಿಗೆ ಟಿಎಂಸಿ ಪ್ರತಿತಂತ್ರ</a></strong></p>.<p>'ಕೆಲವು ಅಪರಿಚಿತರು ತಮ್ಮನ್ನು ತಳ್ಳಿದ್ದೂ ಅಲ್ಲದೇ ಎಡಗಾಲಿಗೆ ಗಾಯ ಆಗುವಂತೆ ಕಾರಿನ ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ ನಿರ್ಧರಿಸಿದೆ.</p>.<p><strong>ಇದನ್ನೂ ಓದಿ-<a href="https://www.prajavani.net/india-news/west-bengal-mamata-banerjee-sskm-hospital-kolkata-nandigram-abhishek-banerjee-tmc-bjp-assembly-812342.html" target="_blank">ಆಸ್ಪತ್ರೆಯಲ್ಲಿರುವ ಮಮತಾ ಚಿತ್ರ ಹಂಚಿಕೊಂಡ ಅಳಿಯ ಅಭಿಷೇಕ್: ಬಿಜೆಪಿಗೆ ನೇರ ಸವಾಲು</a> </strong></p>.<p>ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಂದುವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, 8 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ಕ್ಕೆ ಮತದಾನ ಮುಕ್ತಾಯಗೊಳ್ಳಲಿದೆ. ಮೇ 2ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.</p>.<p><strong>VIDEO:</strong><a href="https://www.prajavani.net/video/india-news/west-bengal-cm-mamata-brought-to-kolkata-hospital-after-suffering-injuries-812345.html" target="_blank"><strong>ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ/ಚೆನ್ನೈ:</strong> ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರ ಮೇಲೆ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಬುಧವಾರ ನಡೆದ ದಾಳಿಯನ್ನು ಹಲವು ರಾಜಕೀಯ ಮುಖಂಡರು ಖಂಡಿಸಿದ್ದಾರೆ.</p>.<p>ಈ ವಿಚಾರವಾಗಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 'ಮಮತಾ ದೀದಿ ಮೇಲಿನ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಘಟನೆಗೆ ಕಾರಣರಾದವರನ್ನು ತಕ್ಷಣವೇ ಬಂಧಿಸಿ ಶಿಕ್ಷಿಸಬೇಕು' ಎಂದು ಒತ್ತಾಯಿಸಿದ್ದಾರೆ.</p>.<p>'ಮಮತಾ ಬ್ಯಾನರ್ಜಿ ಮೇಲಿನ ದಾಳಿಯು ಭಾರತದ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ಇಂತಹ ಅಪರಾಧ ಎಸಗಿದವರಿಗೆ ಈ ಕೂಡಲೇ ಶಿಕ್ಷೆ ಆಗಬೇಕು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಪ್ಪಿಸಲು ಭಾರತದ ಚುನಾವಣಾ ಆಯೋಗ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಡಿಎಂಕೆ ನಾಯಕ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/mamata-banerjee-injured-says-pushed-by-5-men-812200.html" target="_blank"><strong>ತಳ್ಳಿದ ಅಪರಿಚಿತರು: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲಗಾಲಿಗೆ ಗಾಯ</strong></a></p>.<p>ಮಮತಾ ಬ್ಯಾನರ್ಜಿ ಅವರ ಮೇಲೆ ನಡೆದ ದಾಳಿಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ ನಾಯಕ ಆನಂದ್ ಶರ್ಮಾ, ' ಪ್ರಜಾಪ್ರಭುತ್ವದಲ್ಲಿ ದ್ವೇಷ ಮತ್ತು ಹಿಂಸೆ ಸ್ವೀಕಾರಾರ್ಹವಲ್ಲ. ಅದನ್ನು ನಾವು ಖಂಡಿಸಲೇಬೇಕಿದೆ. ಟಿಎಂಸಿ ನಾಯಕಿಯ ತ್ವರಿತ ಚೇತರಿಕೆಗೆ ನಾನು ಪ್ರಾರ್ಥಿಸುತ್ತೇನೆ' ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.</p>.<p><strong>ಇದನ್ನೂ ಓದಿ-</strong><a href="https://www.prajavani.net/india-news/west-bengal-election-2021-will-go-to-kolkata-urge-farmers-to-defeat-bjp-in-polls-says-bku-leader-812210.html" target="_blank"><strong>ಬಿಜೆಪಿಯನ್ನು ಮಣಿಸಲು ಬಂಗಾಳಕ್ಕೆ ಭೇಟಿ ನೀಡಲಿರುವ ರಾಕೇಶ್ ಟಿಕಾಯತ್</strong></a></p>.<p>ನಂದಿಗ್ರಾಮ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು ಬುಧವಾರ ನಾಮಪತ್ರ ಸಲ್ಲಿಸಿದ ಬಳಿಕ ಮಮತಾ ಅವರ ಮೇಲೆ ದಾಳಿ ನಡೆದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಚುನಾವಣಾ ಆಯೋಗವು ಈ ಬಗ್ಗೆ ವರದಿ ಕೇಳಿದೆ.</p>.<p><strong>ಇದನ್ನೂ ಓದಿ-<a href="http://https//www.prajavani.net/india-news/west-bengal-cm-mamata-banerjee-injured-after-being-manhandled-during-poll-campaign-in-nandigram-812296.html" target="_blank">ಮಮತಾಗೆ ಮಾಡು ಇಲ್ಲವೇ ಮಡಿ ಹೋರಾಟ: ಬಿಜೆಪಿಯ ತಂತ್ರಗಳಿಗೆ ಟಿಎಂಸಿ ಪ್ರತಿತಂತ್ರ</a></strong></p>.<p>'ಕೆಲವು ಅಪರಿಚಿತರು ತಮ್ಮನ್ನು ತಳ್ಳಿದ್ದೂ ಅಲ್ಲದೇ ಎಡಗಾಲಿಗೆ ಗಾಯ ಆಗುವಂತೆ ಕಾರಿನ ಬಾಗಿಲನ್ನು ಬಲವಾಗಿ ಮುಚ್ಚಿದ್ದಾರೆ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಈ ವಿಚಾರವಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಟಿಎಂಸಿ ನಿರ್ಧರಿಸಿದೆ.</p>.<p><strong>ಇದನ್ನೂ ಓದಿ-<a href="https://www.prajavani.net/india-news/west-bengal-mamata-banerjee-sskm-hospital-kolkata-nandigram-abhishek-banerjee-tmc-bjp-assembly-812342.html" target="_blank">ಆಸ್ಪತ್ರೆಯಲ್ಲಿರುವ ಮಮತಾ ಚಿತ್ರ ಹಂಚಿಕೊಂಡ ಅಳಿಯ ಅಭಿಷೇಕ್: ಬಿಜೆಪಿಗೆ ನೇರ ಸವಾಲು</a> </strong></p>.<p>ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27ರಂದುವಿಧಾನಸಭೆ ಚುನಾವಣೆ ಆರಂಭವಾಗಲಿದ್ದು, 8 ಹಂತಗಳಲ್ಲಿ ಮತದಾನ ನಡೆಯಲಿದೆ. ಏಪ್ರಿಲ್ 29ಕ್ಕೆ ಮತದಾನ ಮುಕ್ತಾಯಗೊಳ್ಳಲಿದೆ. ಮೇ 2ರಂದು ಚುನಾವಣಾ ಫಲಿತಾಂಶ ಹೊರಬರಲಿದೆ.</p>.<p><strong>VIDEO:</strong><a href="https://www.prajavani.net/video/india-news/west-bengal-cm-mamata-brought-to-kolkata-hospital-after-suffering-injuries-812345.html" target="_blank"><strong>ಗಾಯಗೊಂಡಿದ್ದ ಮಮತಾ ಬ್ಯಾನರ್ಜಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲು</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>