<p><strong>ಕೋಲ್ಕತ್ತ:</strong> ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಕಾರ್ಯಕ್ರಮದ ವೇಳೆ ದಾಂದಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ಬಿಧಾನ್ನಗರ ಉಪ ಪೊಲೀಸ್ ಕಮಿಷನರ್ ಅನೀಶ್ ಸರ್ಕಾರ್ ಅವರನ್ನು ಅಮಾನತು ಮಾಡಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p>.<p>ಡಿಜಿಪಿ ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಿ, 24 ತಾಸಿನ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ಬಿಧಾನ್ನಗರ ಪೊಲೀಸ್ ಕಮಿಷನರ್ ಮುಕೇಶ್ ಕುಮಾರ್ ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಲಾಗಿದೆ.</p>.<p>ಡಿಸೆಂಬರ್ 13ರಂದು ನಡೆದ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆ ಕುರಿತು ತನಿಖೆಗೆ ರಚನೆಯಾಗಿದ್ದ ಸಮಿತಿಯ ಶಿಫಾರಸಿನ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಸ<strong>ಚಿವ ಸ್ಥಾನ ತೊರೆಯಲು ಮುಂದಾದ ಅರೂಪ್ ಬಿಸ್ವಾಸ್</strong></p><p> ಮೆಸ್ಸಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆ ಕುರಿತು ಟೀಕೆಗಳು ಹೆಚ್ಚಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ಸಚಿವ ಸ್ಥಾನ ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೀಡಲು ಬಿಸ್ವಾಸ್ ಅವರು ಬರೆದಿರುವ ರಾಜೀನಾಮೆ ಪತ್ರದ ಪ್ರತಿಯನ್ನು ಘೋಷ್ ಅವರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಘೋಷ್ ಹಂಚಿಕೊಂಡಿರುವ ಪತ್ರವು ಬಿಸ್ವಾಸ್ ಅವರ ಅಧಿಕೃತ ಲೆಟರ್ಹೆಡ್ ಹೊಂದಿಲ್ಲ. ಬಿಸ್ವಾಸ್ ಅವರು ಈ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ಕರೆಯನ್ನು ಸ್ವೀಕರಿಸಿಲ್ಲ. ಮುಖ್ಯಮಂತ್ರಿಗಳ ಕಚೇರಿಯಿಂದಲೂ ಈ ಕುರಿತು ಸ್ಪಷ್ಟನೆ ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಕಾರ್ಯಕ್ರಮದ ವೇಳೆ ದಾಂದಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p>.<p>ಬಿಧಾನ್ನಗರ ಉಪ ಪೊಲೀಸ್ ಕಮಿಷನರ್ ಅನೀಶ್ ಸರ್ಕಾರ್ ಅವರನ್ನು ಅಮಾನತು ಮಾಡಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p>.<p>ಡಿಜಿಪಿ ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಿ, 24 ತಾಸಿನ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ಬಿಧಾನ್ನಗರ ಪೊಲೀಸ್ ಕಮಿಷನರ್ ಮುಕೇಶ್ ಕುಮಾರ್ ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಲಾಗಿದೆ.</p>.<p>ಡಿಸೆಂಬರ್ 13ರಂದು ನಡೆದ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆ ಕುರಿತು ತನಿಖೆಗೆ ರಚನೆಯಾಗಿದ್ದ ಸಮಿತಿಯ ಶಿಫಾರಸಿನ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<p>ಸ<strong>ಚಿವ ಸ್ಥಾನ ತೊರೆಯಲು ಮುಂದಾದ ಅರೂಪ್ ಬಿಸ್ವಾಸ್</strong></p><p> ಮೆಸ್ಸಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆ ಕುರಿತು ಟೀಕೆಗಳು ಹೆಚ್ಚಿದ ಬೆನ್ನಲ್ಲೇ ಪಶ್ಚಿಮ ಬಂಗಾಳ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ಸಚಿವ ಸ್ಥಾನ ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೀಡಲು ಬಿಸ್ವಾಸ್ ಅವರು ಬರೆದಿರುವ ರಾಜೀನಾಮೆ ಪತ್ರದ ಪ್ರತಿಯನ್ನು ಘೋಷ್ ಅವರು ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಘೋಷ್ ಹಂಚಿಕೊಂಡಿರುವ ಪತ್ರವು ಬಿಸ್ವಾಸ್ ಅವರ ಅಧಿಕೃತ ಲೆಟರ್ಹೆಡ್ ಹೊಂದಿಲ್ಲ. ಬಿಸ್ವಾಸ್ ಅವರು ಈ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಲು ಕರೆಯನ್ನು ಸ್ವೀಕರಿಸಿಲ್ಲ. ಮುಖ್ಯಮಂತ್ರಿಗಳ ಕಚೇರಿಯಿಂದಲೂ ಈ ಕುರಿತು ಸ್ಪಷ್ಟನೆ ಲಭ್ಯವಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>