‘ಪ್ರಧಾನಿ ನರೇಂದ್ರ ಮೋದಿಯವರು, ಪಶ್ಚಿಮ ಬಂಗಾಳದ ಪರಿಸ್ಥಿತಿ ಕುರಿತು ಅಲ್ಲಿನ ರಾಜ್ಯಪಾಲರಿಂದ ದೂರವಾಣಿ ಮೂಲಕ ಮಾಹಿತಿ ಸಂಗ್ರಹಿಸುತ್ತಾರೆ. ಬಿಜೆಪಿ ಹಿರಿಯ ನಾಯಕರೊಬ್ಬರು, ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಹೊಣೆ ಮಾಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ, ಬಿಜೆಪಿ ಏನೊ ಮೋಸದಾಟ ನಡೆಸುತ್ತಿರುವುದು ತೋರುತ್ತಿದೆ‘ ಎಂದು ಶಿವಸೇನಾಶಂಕೆ ವ್ಯಕ್ತಪಡಿಸಿದೆ.