<p><strong>ಮುಂಬೈ</strong>: ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ರಾಜಕೀಯದ ರಕ್ತಸಿಕ್ತ ಮುಖವನ್ನು ಅನಾವರಣಗೊಳಿಸಿದೆ. ಈ ಘಟನೆಗಳು ಪ್ರಜಾಪ್ರಭುತ್ವದ ಬದಲಿಗೆ ಆಡಳಿತದ ಬಲವೇ ಮೇಲುಗೈ ಸಾಧಿಸಿದೆ ಎಂಬುದನ್ನು ತೋರಿಸುತ್ತಿವೆಎಂದು ಶಿವಸೇನಾಹೇಳಿದೆ.</p>.<p>ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ಸಮಾನ ಜವಾಬ್ದಾರಿಯಾಗಿದೆ ಎಂದು ಶಿವಸೇನಾ ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ‘ದ ಸಂಪಾದಕೀಯದಲ್ಲಿ ಹೇಳಿದೆ.</p>.<p>‘ಪಶ್ಚಿಮ ಬಂಗಾಳದಲ್ಲಿ ನಿಖರವಾಗಿ ಏನು ನಡೆಯುತ್ತಿದೆ ಮತ್ತು ಈ ಬೆಳವಣಿಗೆಗಳ ಹಿಂದೆ ಯಾವ ಕಾಣದ ಕೈಗಳಿವೆ ? ಇವುಗಳ ಬಗ್ಗೆ ಸ್ಪಷ್ಟವಾಗಿ ತಿಳಿಯಬೇಕಿದೆ. ಬಿಜೆಪಿ ಚುನಾವಣೆಯಲ್ಲಿ ಸೋತಾಗಿನಿಂದಲೂ, ಅಲ್ಲಿ ಹಿಂಸಾಚಾರದ ಸುದ್ದಿಗಳು ಸ್ಫೋಟಗೊಳ್ಳುತ್ತಿವೆ. ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳು ಸುದ್ದಿ'ಎಂದು ಶಿವಸೇನಾಹೇಳಿದೆ.</p>.<p>‘ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ನಡೆದಿರುವ ಹಿಂಸಾಚಾರದಲ್ಲಿ 17 ಮಂದಿ ಸತ್ತಿದ್ದಾರೆ. ಅದರಲ್ಲಿ ಒಂಬತ್ತು ಮಂದಿಗೆ ಬಿಜೆಪಿ ಸಂಪರ್ಕದವರಾದರೆ, ಉಳಿದವರು ಟಿಎಂಸಿಗೆ ಸೇರಿದವರು. ಅಂದರೆ, ಈ ಘರ್ಷಣೆಯಲ್ಲಿ ಎರಡೂ ಪಕ್ಷದವರೂ ಸೇರಿದ್ದಾರೆ'ಎಂದು ಶಿವಸೇನಾಹೇಳಿದೆ.</p>.<p>‘ಪ್ರಧಾನಿ ನರೇಂದ್ರ ಮೋದಿಯವರು, ಪಶ್ಚಿಮ ಬಂಗಾಳದ ಪರಿಸ್ಥಿತಿ ಕುರಿತು ಅಲ್ಲಿನ ರಾಜ್ಯಪಾಲರಿಂದ ದೂರವಾಣಿ ಮೂಲಕ ಮಾಹಿತಿ ಸಂಗ್ರಹಿಸುತ್ತಾರೆ. ಬಿಜೆಪಿ ಹಿರಿಯ ನಾಯಕರೊಬ್ಬರು, ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಹೊಣೆ ಮಾಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ, ಬಿಜೆಪಿ ಏನೊ ಮೋಸದಾಟ ನಡೆಸುತ್ತಿರುವುದು ತೋರುತ್ತಿದೆ‘ ಎಂದು ಶಿವಸೇನಾಶಂಕೆ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ರಾಜಕೀಯದ ರಕ್ತಸಿಕ್ತ ಮುಖವನ್ನು ಅನಾವರಣಗೊಳಿಸಿದೆ. ಈ ಘಟನೆಗಳು ಪ್ರಜಾಪ್ರಭುತ್ವದ ಬದಲಿಗೆ ಆಡಳಿತದ ಬಲವೇ ಮೇಲುಗೈ ಸಾಧಿಸಿದೆ ಎಂಬುದನ್ನು ತೋರಿಸುತ್ತಿವೆಎಂದು ಶಿವಸೇನಾಹೇಳಿದೆ.</p>.<p>ಇದೇ ವೇಳೆ ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕೇಂದ್ರ ಸರ್ಕಾರದ ಸಮಾನ ಜವಾಬ್ದಾರಿಯಾಗಿದೆ ಎಂದು ಶಿವಸೇನಾ ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ‘ದ ಸಂಪಾದಕೀಯದಲ್ಲಿ ಹೇಳಿದೆ.</p>.<p>‘ಪಶ್ಚಿಮ ಬಂಗಾಳದಲ್ಲಿ ನಿಖರವಾಗಿ ಏನು ನಡೆಯುತ್ತಿದೆ ಮತ್ತು ಈ ಬೆಳವಣಿಗೆಗಳ ಹಿಂದೆ ಯಾವ ಕಾಣದ ಕೈಗಳಿವೆ ? ಇವುಗಳ ಬಗ್ಗೆ ಸ್ಪಷ್ಟವಾಗಿ ತಿಳಿಯಬೇಕಿದೆ. ಬಿಜೆಪಿ ಚುನಾವಣೆಯಲ್ಲಿ ಸೋತಾಗಿನಿಂದಲೂ, ಅಲ್ಲಿ ಹಿಂಸಾಚಾರದ ಸುದ್ದಿಗಳು ಸ್ಫೋಟಗೊಳ್ಳುತ್ತಿವೆ. ಟಿಎಂಸಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳು ಸುದ್ದಿ'ಎಂದು ಶಿವಸೇನಾಹೇಳಿದೆ.</p>.<p>‘ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಪ್ರಕಟಗೊಂಡ ನಂತರ ನಡೆದಿರುವ ಹಿಂಸಾಚಾರದಲ್ಲಿ 17 ಮಂದಿ ಸತ್ತಿದ್ದಾರೆ. ಅದರಲ್ಲಿ ಒಂಬತ್ತು ಮಂದಿಗೆ ಬಿಜೆಪಿ ಸಂಪರ್ಕದವರಾದರೆ, ಉಳಿದವರು ಟಿಎಂಸಿಗೆ ಸೇರಿದವರು. ಅಂದರೆ, ಈ ಘರ್ಷಣೆಯಲ್ಲಿ ಎರಡೂ ಪಕ್ಷದವರೂ ಸೇರಿದ್ದಾರೆ'ಎಂದು ಶಿವಸೇನಾಹೇಳಿದೆ.</p>.<p>‘ಪ್ರಧಾನಿ ನರೇಂದ್ರ ಮೋದಿಯವರು, ಪಶ್ಚಿಮ ಬಂಗಾಳದ ಪರಿಸ್ಥಿತಿ ಕುರಿತು ಅಲ್ಲಿನ ರಾಜ್ಯಪಾಲರಿಂದ ದೂರವಾಣಿ ಮೂಲಕ ಮಾಹಿತಿ ಸಂಗ್ರಹಿಸುತ್ತಾರೆ. ಬಿಜೆಪಿ ಹಿರಿಯ ನಾಯಕರೊಬ್ಬರು, ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಹೊಣೆ ಮಾಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ, ಬಿಜೆಪಿ ಏನೊ ಮೋಸದಾಟ ನಡೆಸುತ್ತಿರುವುದು ತೋರುತ್ತಿದೆ‘ ಎಂದು ಶಿವಸೇನಾಶಂಕೆ ವ್ಯಕ್ತಪಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>