<p><strong>ಕೋಲ್ಕತ್ತ:</strong> ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಕಾರ್ಯಕ್ರಮದ ವೇಳೆ ದಾಂದಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಕೆಗಳು ಹೆಚ್ಚಿದ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಸಚಿವ ಅರೂಪ್ ಬಿಸ್ವಾಸ್ ಅವರು ಮಂಗಳವಾರ ಕ್ರೀಡಾ ಖಾತೆಯ ಜವಾಬ್ದಾರಿಯನ್ನು ತೊರೆದಿದ್ದಾರೆ.</p><p>ಕ್ರೀಡಾ ಖಾತೆಯ ಜವಾಬ್ದಾರಿ ಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಎಂಬ ಅವರ ಮನವಿಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಗೀಕರಿಸಿದದ್ದಾರೆ.</p><p>ಇದಕ್ಕೂ ಮುನ್ನ ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು, ಬಿಸ್ವಾಸ್ ಅವರ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ‘ನಿಷ್ಪಕ್ಷಪಾತ ತನಿಖೆಗಾಗಿ ಕ್ರೀಡಾ ಇಲಾಖೆಯ ಜವಾಬ್ದಾರಿಯಿಂದ ತಮಗೆ ಬಿಡುಗಡೆ ನೀಡಬೇಕು’ ಎಂದು ಬಿಸ್ವಾಸ್ ಅವರು ಪತ್ರದಲ್ಲಿ ಕೋರಿದ್ದರು.</p><p>ಈ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ‘ಕ್ರೀಡಾ ಸಚಿವರ ಉದ್ದೇಶ ಮತ್ತು ಭಾವನೆ ಅರ್ಥವಾಗುತ್ತದೆ. ತನಿಖೆ ಪೂರ್ಣಗೊಳ್ಳುವವರೆಗೆ ಮುಖ್ಯಮಂತ್ರಿಯವರೇ ಕ್ರೀಡಾ ಖಾತೆಯ ಉಸ್ತುವಾರಿಯಾಗಿರಲಿದ್ದಾರೆ’ ಎಂದು ತಿಳಿಸಿದರು.</p><p>ಬಿಸ್ವಾಸ್ ಅವರು ಕ್ರೀಡೆ, ಯುವ ಜನ ಕಲ್ಯಾಣ ಮತ್ತು ಇಂಧನ ಖಾತೆಗಳ ಸಚಿವರಾಗಿದ್ದು, ಸದ್ಯ ಕ್ರೀಡಾ ಖಾತೆಯ ಜವಾಬ್ದಾರಿಯಿಂದ ಮಾತ್ರ ದೂರ ಸರಿದಿದ್ದಾರೆ. </p><p>‘ಬಿಸ್ವಾಸ್ ಅವರ ನಿರ್ಧಾರ ‘ಮೂರ್ಖತನದ್ದು’. ಕಲ್ಕತ್ತಾ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಂದ (ಪಿಐಎಲ್) ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ’ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p><p><strong>ಹಿರಿಯ ಅಧಿಕಾರಿಗಳಿಗೆ ನೋಟಿಸ್</strong></p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p><p>ಬಿಧಾನ್ನಗರ ಉಪ ಪೊಲೀಸ್ ಕಮಿಷನರ್ ಅನೀಶ್ ಸರ್ಕಾರ್ ಅವರನ್ನು ಅಮಾನತು ಮಾಡಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p><p>ಡಿಜಿಪಿ ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಿ, 24 ತಾಸಿನ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ಬಿಧಾನ್ನಗರ ಪೊಲೀಸ್ ಕಮಿಷನರ್ ಮುಕೇಶ್ ಕುಮಾರ್ ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಲಾಗಿದೆ.</p><p>ಡಿಸೆಂಬರ್ 13ರಂದು ನಡೆದ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆ ಕುರಿತು ತನಿಖೆಗೆ ರಚನೆಯಾಗಿದ್ದ ಸಮಿತಿಯ ಶಿಫಾರಸಿನ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ಕಾರ್ಯಕ್ರಮದ ವೇಳೆ ದಾಂದಲೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಟೀಕೆಗಳು ಹೆಚ್ಚಿದ ಬೆನ್ನಲ್ಲೇ, ಪಶ್ಚಿಮ ಬಂಗಾಳದ ಸಚಿವ ಅರೂಪ್ ಬಿಸ್ವಾಸ್ ಅವರು ಮಂಗಳವಾರ ಕ್ರೀಡಾ ಖಾತೆಯ ಜವಾಬ್ದಾರಿಯನ್ನು ತೊರೆದಿದ್ದಾರೆ.</p><p>ಕ್ರೀಡಾ ಖಾತೆಯ ಜವಾಬ್ದಾರಿ ಯಿಂದ ತಮ್ಮನ್ನು ಮುಕ್ತಗೊಳಿಸಬೇಕು ಎಂಬ ಅವರ ಮನವಿಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಂಗೀಕರಿಸಿದದ್ದಾರೆ.</p><p>ಇದಕ್ಕೂ ಮುನ್ನ ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು, ಬಿಸ್ವಾಸ್ ಅವರ ಪತ್ರದ ಪ್ರತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದರು. ‘ನಿಷ್ಪಕ್ಷಪಾತ ತನಿಖೆಗಾಗಿ ಕ್ರೀಡಾ ಇಲಾಖೆಯ ಜವಾಬ್ದಾರಿಯಿಂದ ತಮಗೆ ಬಿಡುಗಡೆ ನೀಡಬೇಕು’ ಎಂದು ಬಿಸ್ವಾಸ್ ಅವರು ಪತ್ರದಲ್ಲಿ ಕೋರಿದ್ದರು.</p><p>ಈ ಬಗ್ಗೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ‘ಕ್ರೀಡಾ ಸಚಿವರ ಉದ್ದೇಶ ಮತ್ತು ಭಾವನೆ ಅರ್ಥವಾಗುತ್ತದೆ. ತನಿಖೆ ಪೂರ್ಣಗೊಳ್ಳುವವರೆಗೆ ಮುಖ್ಯಮಂತ್ರಿಯವರೇ ಕ್ರೀಡಾ ಖಾತೆಯ ಉಸ್ತುವಾರಿಯಾಗಿರಲಿದ್ದಾರೆ’ ಎಂದು ತಿಳಿಸಿದರು.</p><p>ಬಿಸ್ವಾಸ್ ಅವರು ಕ್ರೀಡೆ, ಯುವ ಜನ ಕಲ್ಯಾಣ ಮತ್ತು ಇಂಧನ ಖಾತೆಗಳ ಸಚಿವರಾಗಿದ್ದು, ಸದ್ಯ ಕ್ರೀಡಾ ಖಾತೆಯ ಜವಾಬ್ದಾರಿಯಿಂದ ಮಾತ್ರ ದೂರ ಸರಿದಿದ್ದಾರೆ. </p><p>‘ಬಿಸ್ವಾಸ್ ಅವರ ನಿರ್ಧಾರ ‘ಮೂರ್ಖತನದ್ದು’. ಕಲ್ಕತ್ತಾ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಂದ (ಪಿಐಎಲ್) ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರ’ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆರೋಪಿಸಿದ್ದಾರೆ.</p><p><strong>ಹಿರಿಯ ಅಧಿಕಾರಿಗಳಿಗೆ ನೋಟಿಸ್</strong></p><p>ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಮಂಗಳವಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.</p><p>ಬಿಧಾನ್ನಗರ ಉಪ ಪೊಲೀಸ್ ಕಮಿಷನರ್ ಅನೀಶ್ ಸರ್ಕಾರ್ ಅವರನ್ನು ಅಮಾನತು ಮಾಡಿ, ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಮನೋಜ್ ಪಂತ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.</p><p>ಡಿಜಿಪಿ ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಿ, 24 ತಾಸಿನ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ಬಿಧಾನ್ನಗರ ಪೊಲೀಸ್ ಕಮಿಷನರ್ ಮುಕೇಶ್ ಕುಮಾರ್ ಅವರಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿಸಲಾಗಿದೆ.</p><p>ಡಿಸೆಂಬರ್ 13ರಂದು ನಡೆದ ಕಾರ್ಯಕ್ರಮದಲ್ಲಿ ಉಂಟಾದ ಅವ್ಯವಸ್ಥೆ ಕುರಿತು ತನಿಖೆಗೆ ರಚನೆಯಾಗಿದ್ದ ಸಮಿತಿಯ ಶಿಫಾರಸಿನ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>