<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಬಂಕುರಾ ಮತ್ತು ಪುರ್ಬಾ ಬರ್ಧಮನ್ ಜಿಲ್ಲೆಗಳಲ್ಲಿ ಗುರುವಾರ ಸಿಡಿಲು ಬಡಿದು ಕನಿಷ್ಠ 13 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಬಂಕುರಾ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಎಂಟು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವೈಭವ್ ತಿವಾರಿ ತಿಳಿಸಿದ್ದಾರೆ.</p><p>ಒಂಡಾದಲ್ಲಿ ನಾಲ್ವರು, ಕೊತುಲ್ಪುರ್, ಜಾಯ್ಪುರ್, ಪತ್ರಸಾಯರ್ ಮತ್ತು ಇಂಡಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ತಿವಾರಿ ಮಾಹಿತಿ ನೀಡಿದ್ದಾರೆ.</p><p>ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಐದು ಮಂದಿ ಐದು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಜಿಲ್ಲೆಯ ಮಧಬ್ದಿಹಿಯಲ್ಲಿ ಇಬ್ಬರು, ಆಸ್ಗ್ರಾಮ್, ಮಂಗಲ್ಕೋಟ್ ಮತ್ತು ರೈನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಬಂಕುರಾದ ಒಂಡಾದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ನಾರಾಯಣ್ ಸಾರ್ (48), ಜಬಾ ಬೌರಿ (38), ತಿಲೋಕ ಮಾಲ್ (49) ಕೊನೆಯುಸಿರೆಳೆದಿದ್ದಾರೆ. ಆದರೆ, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p><p>ಜಿಲ್ಲೆಯಲ್ಲಿ ಮೃತಪಟ್ಟ ಇತರನ್ನು ಕೊಟುಲ್ಪುರದ ಜಿಯಾವುಲ್ ಹಕ್ ಮೊಲ್ಲಾ (50), ಪತ್ರಸೇಯರ್ನ ಜಿಬಾನ್ ಘೋಷ್ (20), ಇಂದಾಸ್ನ ಇಸ್ಮಾಯಿಲ್ ಮೊಂಡಲ್ (60) ಮತ್ತು ಜೋಯ್ಪುರದ ಉತ್ತಮ್ ಭುನಿಯಾ (38) ಎಂದು ಗುರುತಿಸಲಾಗಿದೆ.</p><p>ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಸನಾತನ ಪತ್ರಾ (60), ಮಧಬ್ದಿಹಿಯ ಪರಿಮಳ್ ದಾಸ್ (32), ಆಸ್ಗ್ರಾಮ್ನ ರಬಿನ್ ತುಡು (25), ರೈನಾದ ಅಭಿಜಿತ್ ಸಂತ್ರಾ (25), ಮಂಗಲ್ಕೋಟ್ನ ಬುರೋ ಮಡ್ಡಿ (64) ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಬಂಕುರಾ ಮತ್ತು ಪುರ್ಬಾ ಬರ್ಧಮನ್ ಜಿಲ್ಲೆಗಳಲ್ಲಿ ಗುರುವಾರ ಸಿಡಿಲು ಬಡಿದು ಕನಿಷ್ಠ 13 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಬಂಕುರಾ ಜಿಲ್ಲೆಯ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಎಂಟು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವೈಭವ್ ತಿವಾರಿ ತಿಳಿಸಿದ್ದಾರೆ.</p><p>ಒಂಡಾದಲ್ಲಿ ನಾಲ್ವರು, ಕೊತುಲ್ಪುರ್, ಜಾಯ್ಪುರ್, ಪತ್ರಸಾಯರ್ ಮತ್ತು ಇಂಡಾಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ ಎಂದು ತಿವಾರಿ ಮಾಹಿತಿ ನೀಡಿದ್ದಾರೆ.</p><p>ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಐದು ಮಂದಿ ಐದು ಮಂದಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p><p>ಜಿಲ್ಲೆಯ ಮಧಬ್ದಿಹಿಯಲ್ಲಿ ಇಬ್ಬರು, ಆಸ್ಗ್ರಾಮ್, ಮಂಗಲ್ಕೋಟ್ ಮತ್ತು ರೈನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಬಂಕುರಾದ ಒಂಡಾದಲ್ಲಿ ಭತ್ತದ ಗದ್ದೆಗಳಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ನಾರಾಯಣ್ ಸಾರ್ (48), ಜಬಾ ಬೌರಿ (38), ತಿಲೋಕ ಮಾಲ್ (49) ಕೊನೆಯುಸಿರೆಳೆದಿದ್ದಾರೆ. ಆದರೆ, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p><p>ಜಿಲ್ಲೆಯಲ್ಲಿ ಮೃತಪಟ್ಟ ಇತರನ್ನು ಕೊಟುಲ್ಪುರದ ಜಿಯಾವುಲ್ ಹಕ್ ಮೊಲ್ಲಾ (50), ಪತ್ರಸೇಯರ್ನ ಜಿಬಾನ್ ಘೋಷ್ (20), ಇಂದಾಸ್ನ ಇಸ್ಮಾಯಿಲ್ ಮೊಂಡಲ್ (60) ಮತ್ತು ಜೋಯ್ಪುರದ ಉತ್ತಮ್ ಭುನಿಯಾ (38) ಎಂದು ಗುರುತಿಸಲಾಗಿದೆ.</p><p>ಪುರ್ಬಾ ಬರ್ಧಮನ್ ಜಿಲ್ಲೆಯಲ್ಲಿ ಸನಾತನ ಪತ್ರಾ (60), ಮಧಬ್ದಿಹಿಯ ಪರಿಮಳ್ ದಾಸ್ (32), ಆಸ್ಗ್ರಾಮ್ನ ರಬಿನ್ ತುಡು (25), ರೈನಾದ ಅಭಿಜಿತ್ ಸಂತ್ರಾ (25), ಮಂಗಲ್ಕೋಟ್ನ ಬುರೋ ಮಡ್ಡಿ (64) ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>