<p><strong>ಕೋಲ್ಕತ್ತ:</strong> ಚುನಾವಣಾ ಆಯೋಗದ ಎಸ್ಐಆರ್ ವೇಳೆ ತನ್ನನ್ನು ಮತದಾರರ ಪಟ್ಟಿಯಿಂದ ತೆಗೆಯುತ್ತಾರೆ ಎಂದು ಹೆದರಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಬುಧವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜರುಗಿದೆ.</p><p>ಮೃತಪಟ್ಟಿರುವ ಸಫಿಕುಲ್ ಗಾಜಿಗೆ ಕೆಲವು ತಿಂಗಳ ಹಿಂದೆ ಅಪಘಾತವಾಗಿತ್ತು. ಅದರಿಂದ ಮಾನಸಿಕವಾಗಿ ಕುಗ್ಗಿದ್ದ. ರಾಜ್ಯದಲ್ಲಿ ಎಸ್ಐಆರ್ ಆರಂಭವಾಗಲಿರುವ ವಿಷಯ ತಿಳಿದ ನಂತರ ತುಂಬಾ ಭಯಭೀತನಾಗಿದ್ದ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.</p><p>‘ನನ್ನ ಬಳಿ ಸರಿಯಾದ ದಾಖಲೆಗಳು ಇಲ್ಲ. ಎಸ್ಐಆರ್ ನಂತರ ದೇಶದಿಂದ ನನ್ನನ್ನು ಹೊರಹಾಕಲಾಗುತ್ತದೆ ಎಂದು ಗಾಬರಿಗೊಂಡಿದ್ದರು. ಇದೇ ಯೋಚನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ’ ಎಂದು ಅವರ ಪತ್ನಿ ತಿಳಿಸಿದ್ದಾರೆ. </p><p>ಬಿಜೆಪಿಯು ಜನರಲ್ಲಿ ಭಯವನ್ನು ಸೃಷ್ಟಿಸುತ್ತಿದೆ. ರಾಜ್ಯದಲ್ಲಿ‘ಎಸ್ಐಆರ್’ಗೆ ಭಯಪಟ್ಟು ಆತ್ಮಹತ್ಮೆ ಮಾಡಿಕೊಂಡಿರುವ ಎಂಟನೇ ಪ್ರಕರಣ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಆರೋಪಿಸಿದೆ.</p><p>ಘಟನೆಯು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಇದು ರಾಜಕೀಯ ಪ್ರೇರಿತ ನಾಟಕವಾಗಿದೆ ಎಂದು ಬಿಜೆಪಿಯು ತಿರುಗೇಟು ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಚುನಾವಣಾ ಆಯೋಗದ ಎಸ್ಐಆರ್ ವೇಳೆ ತನ್ನನ್ನು ಮತದಾರರ ಪಟ್ಟಿಯಿಂದ ತೆಗೆಯುತ್ತಾರೆ ಎಂದು ಹೆದರಿಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯು ಬುಧವಾರ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ಜರುಗಿದೆ.</p><p>ಮೃತಪಟ್ಟಿರುವ ಸಫಿಕುಲ್ ಗಾಜಿಗೆ ಕೆಲವು ತಿಂಗಳ ಹಿಂದೆ ಅಪಘಾತವಾಗಿತ್ತು. ಅದರಿಂದ ಮಾನಸಿಕವಾಗಿ ಕುಗ್ಗಿದ್ದ. ರಾಜ್ಯದಲ್ಲಿ ಎಸ್ಐಆರ್ ಆರಂಭವಾಗಲಿರುವ ವಿಷಯ ತಿಳಿದ ನಂತರ ತುಂಬಾ ಭಯಭೀತನಾಗಿದ್ದ ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ.</p><p>‘ನನ್ನ ಬಳಿ ಸರಿಯಾದ ದಾಖಲೆಗಳು ಇಲ್ಲ. ಎಸ್ಐಆರ್ ನಂತರ ದೇಶದಿಂದ ನನ್ನನ್ನು ಹೊರಹಾಕಲಾಗುತ್ತದೆ ಎಂದು ಗಾಬರಿಗೊಂಡಿದ್ದರು. ಇದೇ ಯೋಚನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಮೆ ಮಾಡಿಕೊಂಡಿದ್ದಾರೆ’ ಎಂದು ಅವರ ಪತ್ನಿ ತಿಳಿಸಿದ್ದಾರೆ. </p><p>ಬಿಜೆಪಿಯು ಜನರಲ್ಲಿ ಭಯವನ್ನು ಸೃಷ್ಟಿಸುತ್ತಿದೆ. ರಾಜ್ಯದಲ್ಲಿ‘ಎಸ್ಐಆರ್’ಗೆ ಭಯಪಟ್ಟು ಆತ್ಮಹತ್ಮೆ ಮಾಡಿಕೊಂಡಿರುವ ಎಂಟನೇ ಪ್ರಕರಣ ಇದಾಗಿದೆ ಎಂದು ತೃಣಮೂಲ ಕಾಂಗ್ರೆಸ್(ಟಿಎಂಸಿ) ಆರೋಪಿಸಿದೆ.</p><p>ಘಟನೆಯು ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದ್ದು, ಇದು ರಾಜಕೀಯ ಪ್ರೇರಿತ ನಾಟಕವಾಗಿದೆ ಎಂದು ಬಿಜೆಪಿಯು ತಿರುಗೇಟು ನೀಡಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>