<p><strong>ಕೋಲ್ಕತ್ತ :</strong> ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಅಹವಾಲು ಆಲಿಕೆಗಾಗಿ ನೋಟಿಸ್ ನೀಡುವ ಕೆಲಸ ಗುರುವಾರ ಆರಂಭವಾಗಿದೆ.</p>.<p>ಮತದಾರರ ನೋಂದಣಿ ಅಧಿಕಾರಿಗಳು (ಇಆರ್ಒ) ಆರಂಭಿಕ ಹಂತದಲ್ಲಿ 32 ಲಕ್ಷ ಮತದಾರರಿಗೆ ನೋಟಿಸ್ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಡು ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಈ 32 ಲಕ್ಷ ಮತದಾರರ ವಿವರಗಳನ್ನು 2002ರ ಎಸ್ಐಆರ್ನ ದತ್ತಾಂಶದೊಂದಿಗೆ ತಾಳೆ ಹಾಕಲು ಸಾಧ್ಯವಾಗಿಲ್ಲ. ಆದ್ದರಿಂದ ಅವರ ದಾಖಲೆಗಳನ್ನು ಆಯೋಗ ಪರಿಶೀಲಿಸಲಿದೆ.</p>.<p>‘ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲ್ಪಟ್ಟ ಕೂಡಲೇ ಅಂತಹ ಮತದಾರರನ್ನು ದಾಖಲೆಗಳ ಪರಿಶೀಲನೆಗೆ ಆಯೋಗವು ಕರೆಯುವುದಿಲ್ಲ ಎಂದರ್ಥವಲ್ಲ. ಆದರೂ, ಅಂತಹ ಮತದಾರರ ಅಹವಾಲು ಆಲಿಕೆ ಪ್ರಕ್ರಿಯೆ ಸರಳವಾಗಿರಬಹುದು. ಇಆರ್ಒಗಳು ಡಿಸೆಂಬರ್ 18ರ ಬೆಳಿಗ್ಗೆಯಿಂದ ನೋಟಿಸ್ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ನೋಟಿಸ್ನ ಎರಡು ಪ್ರತಿಗಳನ್ನು ನೀಡಲಾಗುತ್ತದೆ. ಒಂದು ಪ್ರತಿಯನ್ನು ಸಂಬಂಧಪಟ್ಟ ಮತದಾರರಿಗೆ ಹಸ್ತಾಂತರಿಸಲಾಗುತ್ತದೆ. ಇನ್ನೊಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಯು ಮತದಾರರ ಸಹಿಯನ್ನು ಪಡೆದು ತಮ್ಮ ಬಳಿಯೇ ಇಟ್ಟುಕೊಳ್ಳುವರು. ನೋಟಿಸ್ ಪಡೆದ ನಂತರ ಮತದಾರರಿಗೆ ಅಧಿಕಾರಿಗಳ ಮುಂದೆ ಹಾಜರಾಗಲು ಅಲ್ಪ ಸಮಯಾವಕಾಶ ನೀಡಲಾಗುವುದು’ ಎಂದಿದ್ದಾರೆ.</p>.<p>ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ ಮತ್ತು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳ ಕಚೇರಿಗಳು ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಅಹವಾಲು ಆಲಿಕೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p>.<p>‘ಚುನಾವಣಾ ಆಯೋಗವು ತಿಳಿಸಿರುವ 11 ದಾಖಲೆಗಳನ್ನು ಪರಿಶೀಲನೆಗಾಗಿ ಸಿದ್ಧವಾಗಿಡುವಂತೆ ಅಧಿಕಾರಿಗಳು ಮತದಾರರಿಗೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ :</strong> ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಮುಂದಿನ ಹಂತಕ್ಕೆ ಕಾಲಿಟ್ಟಿದ್ದು, ಅಹವಾಲು ಆಲಿಕೆಗಾಗಿ ನೋಟಿಸ್ ನೀಡುವ ಕೆಲಸ ಗುರುವಾರ ಆರಂಭವಾಗಿದೆ.</p>.<p>ಮತದಾರರ ನೋಂದಣಿ ಅಧಿಕಾರಿಗಳು (ಇಆರ್ಒ) ಆರಂಭಿಕ ಹಂತದಲ್ಲಿ 32 ಲಕ್ಷ ಮತದಾರರಿಗೆ ನೋಟಿಸ್ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರಡು ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಈ 32 ಲಕ್ಷ ಮತದಾರರ ವಿವರಗಳನ್ನು 2002ರ ಎಸ್ಐಆರ್ನ ದತ್ತಾಂಶದೊಂದಿಗೆ ತಾಳೆ ಹಾಕಲು ಸಾಧ್ಯವಾಗಿಲ್ಲ. ಆದ್ದರಿಂದ ಅವರ ದಾಖಲೆಗಳನ್ನು ಆಯೋಗ ಪರಿಶೀಲಿಸಲಿದೆ.</p>.<p>‘ಕರಡು ಮತದಾರರ ಪಟ್ಟಿಯಲ್ಲಿ ಸೇರಿಸಲ್ಪಟ್ಟ ಕೂಡಲೇ ಅಂತಹ ಮತದಾರರನ್ನು ದಾಖಲೆಗಳ ಪರಿಶೀಲನೆಗೆ ಆಯೋಗವು ಕರೆಯುವುದಿಲ್ಲ ಎಂದರ್ಥವಲ್ಲ. ಆದರೂ, ಅಂತಹ ಮತದಾರರ ಅಹವಾಲು ಆಲಿಕೆ ಪ್ರಕ್ರಿಯೆ ಸರಳವಾಗಿರಬಹುದು. ಇಆರ್ಒಗಳು ಡಿಸೆಂಬರ್ 18ರ ಬೆಳಿಗ್ಗೆಯಿಂದ ನೋಟಿಸ್ ನೀಡುವ ಪ್ರಕ್ರಿಯೆ ಆರಂಭಿಸಿದ್ದಾರೆ’ ಎಂದು ಅಧಿಕಾರಿಗಳು ಹೇಳಿದ್ದಾರೆ.</p>.<p>‘ನೋಟಿಸ್ನ ಎರಡು ಪ್ರತಿಗಳನ್ನು ನೀಡಲಾಗುತ್ತದೆ. ಒಂದು ಪ್ರತಿಯನ್ನು ಸಂಬಂಧಪಟ್ಟ ಮತದಾರರಿಗೆ ಹಸ್ತಾಂತರಿಸಲಾಗುತ್ತದೆ. ಇನ್ನೊಂದು ಪ್ರತಿಯನ್ನು ಮತಗಟ್ಟೆ ಅಧಿಕಾರಿಯು ಮತದಾರರ ಸಹಿಯನ್ನು ಪಡೆದು ತಮ್ಮ ಬಳಿಯೇ ಇಟ್ಟುಕೊಳ್ಳುವರು. ನೋಟಿಸ್ ಪಡೆದ ನಂತರ ಮತದಾರರಿಗೆ ಅಧಿಕಾರಿಗಳ ಮುಂದೆ ಹಾಜರಾಗಲು ಅಲ್ಪ ಸಮಯಾವಕಾಶ ನೀಡಲಾಗುವುದು’ ಎಂದಿದ್ದಾರೆ.</p>.<p>ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ ಮತ್ತು ಬ್ಲಾಕ್ ಅಭಿವೃದ್ಧಿ ಅಧಿಕಾರಿಗಳ ಕಚೇರಿಗಳು ಸೇರಿದಂತೆ ಸರ್ಕಾರಿ ಕಚೇರಿಗಳಲ್ಲಿ ಅಹವಾಲು ಆಲಿಕೆ ನಡೆಸಲಾಗುವುದು ಎಂದು ಹೇಳಿದ್ದಾರೆ.</p>.<p>‘ಚುನಾವಣಾ ಆಯೋಗವು ತಿಳಿಸಿರುವ 11 ದಾಖಲೆಗಳನ್ನು ಪರಿಶೀಲನೆಗಾಗಿ ಸಿದ್ಧವಾಗಿಡುವಂತೆ ಅಧಿಕಾರಿಗಳು ಮತದಾರರಿಗೆ ಸಲಹೆ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>