ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದರೂ ಸಿಬಿಐ ರಾಜ್ಯದಲ್ಲಿ ತನಿಖೆ ನಡೆಸುತ್ತಿದೆ ಎಂಬ ರಾಜ್ಯ ಸರ್ಕಾರದ ಆರೋಪಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್, ‘ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ರಾಜಕೀಯ ವಿಷಯಗಳ ಬಗ್ಗೆ ವಾಗ್ವಾದ ನಡೆಸಲು ಅವಕಾಶ ನೀಡುವುದಿಲ್ಲ’ ಎಂದು ಬುಧವಾರ ಹೇಳಿದೆ.