<p><strong>ಕೃಷ್ಣಗಿರಿ</strong>: ಡಿಎಂಕೆ ಪಕ್ಷವು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ಹೊರತುಪಡಿಸಿ ತಮಿಳುನಾಡಿಗೆ ಏನು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ. </p><p>ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭ್ರಷ್ಟಾಚಾರ ಮುಕ್ತ ಹಾಗೂ ಅಭಿವೃದ್ಧಿ ಆಧರಿತ ಆಡಳಿತ ನೀಡಲು ಡಿಎಂಕೆ ಪಕ್ಷವು ವಿಫಲವಾಗಿದೆ ಎಂದು ಸಿಂಗ್ ವಾಗ್ದಾಳಿ ನಡೆಸಿದ್ದಾರೆ. </p><p>ಕೇವಲ ಅಧಿಕಾರ ಹಿಡಿಯುವುದೇ ಡಿಎಂಕೆ ಹಾಗೂ ಕಾಂಗ್ರೆಸ್ನ ಉದ್ದೇಶವಾಗಿದೆ. ಡಿಎಂಕೆ ಪಕ್ಷ ತಮಿಳುನಾಡಿಗೆ ಏನು ಮಾಡಿದೆ ಎಂದು ಕೇಳಲು ಇಚ್ಛಿಸುವೆ. ಬಿಜೆಪಿ ದೇಶ ಮೊದಲು ಎಂದು ಹೇಳಿದರೆ, ಡಿಎಂಕೆ ಪಕ್ಷದವರು ಕುಟುಂಬ ಮೊದಲು ಎಂದು ಉಚ್ಚರಿಸುತ್ತಾರೆ ಎಂದು ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ. </p><p>ತಮಿಳುನಾಡನ್ನು ಡಿಎಂಕೆ ಅಥವಾ ಕಾಂಗ್ರೆಸ್ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದೇ?, ಡಿಎಂಕೆ ಎಂದಾದರೂ ತನ್ನ ಕುಟುಂಬವನ್ನು ಮೀರಿ ರಾಜ್ಯದ ಬಗ್ಗೆ ಯೋಚಿಸಬಹುದೇ?, ಇಂಡಿಯಾ ಮೈತ್ರಿಕೂಟವು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಬಹುದೇ?, ಚುನಾವಣೆಯ ನಂತರ ಈ ಮೈತ್ರಿ ಹೀಗೆ ಉಳಿಯಬಹುದೇ ಎಂಬ ಪ್ರಶ್ನೆಗಳಿಗೆ ‘ಇಲ್ಲ‘ ಎಂಬ ಉತ್ತರವೇ ಸೂಕ್ತವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.</p><p>'ಸಿ. ರಾಜಗೋಪಾಲಾಚಾರಿ, ಕೆ. ಕಾಮರಾಜ್ ಹಾಗೂ ಎಂ.ಜಿ ರಾಮಚಂದ್ರನ್ ಅವರಂತಹ ನಾಯಕರಿಂದ ಸ್ಫೂರ್ತಿ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರು ದುರ್ಬಲ ವರ್ಗಗಳ ಸಬಲೀಕರಣದ ನಿಟ್ಟಿನಲ್ಲಿ ಅವರ ಹಾದಿಯನ್ನೇ (ನಾಯಕರ) ಅನುಸರಿಸುತ್ತಿದ್ದಾರೆ' ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣಗಿರಿ</strong>: ಡಿಎಂಕೆ ಪಕ್ಷವು ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ ಹೊರತುಪಡಿಸಿ ತಮಿಳುನಾಡಿಗೆ ಏನು ಮಾಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ. </p><p>ಚುನಾವಣಾ ರ್ಯಾಲಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಭ್ರಷ್ಟಾಚಾರ ಮುಕ್ತ ಹಾಗೂ ಅಭಿವೃದ್ಧಿ ಆಧರಿತ ಆಡಳಿತ ನೀಡಲು ಡಿಎಂಕೆ ಪಕ್ಷವು ವಿಫಲವಾಗಿದೆ ಎಂದು ಸಿಂಗ್ ವಾಗ್ದಾಳಿ ನಡೆಸಿದ್ದಾರೆ. </p><p>ಕೇವಲ ಅಧಿಕಾರ ಹಿಡಿಯುವುದೇ ಡಿಎಂಕೆ ಹಾಗೂ ಕಾಂಗ್ರೆಸ್ನ ಉದ್ದೇಶವಾಗಿದೆ. ಡಿಎಂಕೆ ಪಕ್ಷ ತಮಿಳುನಾಡಿಗೆ ಏನು ಮಾಡಿದೆ ಎಂದು ಕೇಳಲು ಇಚ್ಛಿಸುವೆ. ಬಿಜೆಪಿ ದೇಶ ಮೊದಲು ಎಂದು ಹೇಳಿದರೆ, ಡಿಎಂಕೆ ಪಕ್ಷದವರು ಕುಟುಂಬ ಮೊದಲು ಎಂದು ಉಚ್ಚರಿಸುತ್ತಾರೆ ಎಂದು ರಾಜನಾಥ್ ಸಿಂಗ್ ಕಿಡಿಕಾರಿದ್ದಾರೆ. </p><p>ತಮಿಳುನಾಡನ್ನು ಡಿಎಂಕೆ ಅಥವಾ ಕಾಂಗ್ರೆಸ್ ಅಭಿವೃದ್ಧಿ ಪಥದತ್ತ ಕೊಂಡೊಯ್ಯಬಹುದೇ?, ಡಿಎಂಕೆ ಎಂದಾದರೂ ತನ್ನ ಕುಟುಂಬವನ್ನು ಮೀರಿ ರಾಜ್ಯದ ಬಗ್ಗೆ ಯೋಚಿಸಬಹುದೇ?, ಇಂಡಿಯಾ ಮೈತ್ರಿಕೂಟವು ರಾಷ್ಟ್ರೀಯ ಭದ್ರತೆಯನ್ನು ಬಲಪಡಿಸಬಹುದೇ?, ಚುನಾವಣೆಯ ನಂತರ ಈ ಮೈತ್ರಿ ಹೀಗೆ ಉಳಿಯಬಹುದೇ ಎಂಬ ಪ್ರಶ್ನೆಗಳಿಗೆ ‘ಇಲ್ಲ‘ ಎಂಬ ಉತ್ತರವೇ ಸೂಕ್ತವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.</p><p>'ಸಿ. ರಾಜಗೋಪಾಲಾಚಾರಿ, ಕೆ. ಕಾಮರಾಜ್ ಹಾಗೂ ಎಂ.ಜಿ ರಾಮಚಂದ್ರನ್ ಅವರಂತಹ ನಾಯಕರಿಂದ ಸ್ಫೂರ್ತಿ ಪಡೆದು ಪ್ರಧಾನಿ ನರೇಂದ್ರ ಮೋದಿ ಅವರು ದುರ್ಬಲ ವರ್ಗಗಳ ಸಬಲೀಕರಣದ ನಿಟ್ಟಿನಲ್ಲಿ ಅವರ ಹಾದಿಯನ್ನೇ (ನಾಯಕರ) ಅನುಸರಿಸುತ್ತಿದ್ದಾರೆ' ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>