<p><strong>ಚೆನ್ನೈ:</strong> ತಮಿಳುನಾಡಿನ ಇಂಧನ, ಅಬಕಾರಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಕೈಗೊಂಡಿರುವ ಕ್ರಮವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಗದೊಮ್ಮೆ ಖಂಡಿಸಿದ್ದಾರೆ. </p><p>ಈ ಪ್ರಕರಣವನ್ನು ಇ.ಡಿ ನಿರ್ವಹಿಸಿದ ರೀತಿಯನ್ನು ಸ್ಟಾಲಿನ್ ಟೀಕೆ ಮಾಡಿದ್ದಾರೆ. </p><p>ಸೆಂಥಿಲ್ ಬಾಲಾಜಿ ಅವರಿಗೆ ಇ.ಡಿಯಿಂದ ಅನ್ಯಾಯವಾಗುತ್ತಿರುವ ಬಗ್ಗೆ ನಿಮಗೆಲ್ಲರಿಗೂ ಗೊತ್ತಿದೆ. ಇದು ನಿಷ್ಠುರವಾದ ರಾಜಕೀಯ ಹಗೆತನ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಸ್ಟಾಲಿನ್ ಪ್ರತಿಕ್ರಿಯಿಸಿದ್ದಾರೆ. </p><p>10 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸೆಂಥಿಲ್ ಅವರನ್ನು ಬಂಧಿಸಿ ಮಾನಸಿಕ ಹಿಂಸೆಗೆ ಒಳಪಡಿಸಲಾಯಿತು. ಇ.ಡಿ ಹಿಂಸೆಯಿಂದಾಗಿ ಸೆಂಥಿಲ್ ಮಾನಸಿಕ ಹಾಗೂ ದೈಹಿಕವಾಗಿ ನಿಶಕ್ತರಾಗಿದ್ದಾರೆ. ಹೃದ್ರೋಗ ಸಮಸ್ಯೆ ಎದುರಾಗಿದೆ. ಇದಕ್ಕಿಂತ ಲಜ್ಜೆಗೆಟ್ಟ ರಾಜಕೀಯ ದ್ವೇಷವಿದೆಯೇ ಎಂದು ಸ್ಟಾಲಿನ್ ಹೇಳಿದ್ದಾರೆ. </p><p>ಬಾಲಾಜಿ ಅವರನ್ನು ಉಗ್ರನಂತೆ ಬಂಧಿಸಿ ವಿಚಾರಿಸುವ ಅಗತ್ಯ ಏನಿತ್ತು ? ಇ.ಡಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧ ಎಂದು ಹೇಳಿದ್ದರು. ಹೀಗಿದ್ದರೂ 18 ಗಂಟೆಗಳ ಕಾಲ ಜನಪ್ರತಿನಿಧಿಯನ್ನು ವಶದಲ್ಲಿರಿಸಲಾಗಿತ್ತು. ಯಾರನ್ನೂ ಭೇಟಿಯಾಗಲು ಬಿಡಲಿಲ್ಲ. ಆರೋಗ್ಯ ಹದೆಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ದರು. ಇ.ಡಿ ನಿರ್ಲಕ್ಷ್ಯದಿಂದ ಅವರ ಪ್ರಾಣಕ್ಕೆ ಅಪಾಯ ಎದುರಾಗಿತ್ತು ಎಂದು ಹೇಳಿದರು. </p><p>ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಘೋಷಣೆಯಾಗಿತ್ತೇ? ತುರ್ತಾಗಿ ವಿಚಾರಣೆಗೆ ಒಳಪಡಿಸುವ ಪರಿಸ್ಥಿತಿ ಇತ್ತೇ? ಇ.ಡಿ ಬಳಸಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ರಾಜಕೀಯ ಜನ ವಿರೋಧಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. </p><p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬುಧವಾರ ಬಂಧನಕ್ಕೆ ಒಳಗಾದ ತಮಿಳುನಾಡಿನ ಇಂಧನ, ಅಬಕಾರಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಇದೇ 28ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ತಮಿಳುನಾಡಿನ ಇಂಧನ, ಅಬಕಾರಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಕೈಗೊಂಡಿರುವ ಕ್ರಮವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಗದೊಮ್ಮೆ ಖಂಡಿಸಿದ್ದಾರೆ. </p><p>ಈ ಪ್ರಕರಣವನ್ನು ಇ.ಡಿ ನಿರ್ವಹಿಸಿದ ರೀತಿಯನ್ನು ಸ್ಟಾಲಿನ್ ಟೀಕೆ ಮಾಡಿದ್ದಾರೆ. </p><p>ಸೆಂಥಿಲ್ ಬಾಲಾಜಿ ಅವರಿಗೆ ಇ.ಡಿಯಿಂದ ಅನ್ಯಾಯವಾಗುತ್ತಿರುವ ಬಗ್ಗೆ ನಿಮಗೆಲ್ಲರಿಗೂ ಗೊತ್ತಿದೆ. ಇದು ನಿಷ್ಠುರವಾದ ರಾಜಕೀಯ ಹಗೆತನ ಎಂಬುದರಲ್ಲಿ ಅನುಮಾನವೇ ಇಲ್ಲ ಎಂದು ಸ್ಟಾಲಿನ್ ಪ್ರತಿಕ್ರಿಯಿಸಿದ್ದಾರೆ. </p><p>10 ವರ್ಷಗಳ ಹಿಂದಿನ ಪ್ರಕರಣದಲ್ಲಿ ಸೆಂಥಿಲ್ ಅವರನ್ನು ಬಂಧಿಸಿ ಮಾನಸಿಕ ಹಿಂಸೆಗೆ ಒಳಪಡಿಸಲಾಯಿತು. ಇ.ಡಿ ಹಿಂಸೆಯಿಂದಾಗಿ ಸೆಂಥಿಲ್ ಮಾನಸಿಕ ಹಾಗೂ ದೈಹಿಕವಾಗಿ ನಿಶಕ್ತರಾಗಿದ್ದಾರೆ. ಹೃದ್ರೋಗ ಸಮಸ್ಯೆ ಎದುರಾಗಿದೆ. ಇದಕ್ಕಿಂತ ಲಜ್ಜೆಗೆಟ್ಟ ರಾಜಕೀಯ ದ್ವೇಷವಿದೆಯೇ ಎಂದು ಸ್ಟಾಲಿನ್ ಹೇಳಿದ್ದಾರೆ. </p><p>ಬಾಲಾಜಿ ಅವರನ್ನು ಉಗ್ರನಂತೆ ಬಂಧಿಸಿ ವಿಚಾರಿಸುವ ಅಗತ್ಯ ಏನಿತ್ತು ? ಇ.ಡಿ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರ ನೀಡಲು ಸಿದ್ಧ ಎಂದು ಹೇಳಿದ್ದರು. ಹೀಗಿದ್ದರೂ 18 ಗಂಟೆಗಳ ಕಾಲ ಜನಪ್ರತಿನಿಧಿಯನ್ನು ವಶದಲ್ಲಿರಿಸಲಾಗಿತ್ತು. ಯಾರನ್ನೂ ಭೇಟಿಯಾಗಲು ಬಿಡಲಿಲ್ಲ. ಆರೋಗ್ಯ ಹದೆಗೆಟ್ಟಾಗ ಆಸ್ಪತ್ರೆಗೆ ಕರೆದೊಯ್ದರು. ಇ.ಡಿ ನಿರ್ಲಕ್ಷ್ಯದಿಂದ ಅವರ ಪ್ರಾಣಕ್ಕೆ ಅಪಾಯ ಎದುರಾಗಿತ್ತು ಎಂದು ಹೇಳಿದರು. </p><p>ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಘೋಷಣೆಯಾಗಿತ್ತೇ? ತುರ್ತಾಗಿ ವಿಚಾರಣೆಗೆ ಒಳಪಡಿಸುವ ಪರಿಸ್ಥಿತಿ ಇತ್ತೇ? ಇ.ಡಿ ಬಳಸಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ರಾಜಕೀಯ ಜನ ವಿರೋಧಿಯಾಗಿದೆ ಎಂದು ವಾಗ್ದಾಳಿ ನಡೆಸಿದರು. </p><p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಬುಧವಾರ ಬಂಧನಕ್ಕೆ ಒಳಗಾದ ತಮಿಳುನಾಡಿನ ಇಂಧನ, ಅಬಕಾರಿ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಇದೇ 28ರವರೆಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>