<p><strong>ನವದೆಹಲಿ:</strong> ಮುಸ್ಲಿಂ ಸಮುದಾಯ ಹಾಗೂ ಸಮಾಜವಾದಿ ಪಕ್ಷವನ್ನು (ಎಸ್ಪಿ) ಉದ್ದೇಶಿಸಿ ‘ಅಬ್ಬಾ ಜಾನ್ ಎಂದು ಕರೆಯಲಾಗುವ ಈ ಜನರು’ ಎಂದು ವಾಗ್ದಾಳಿ ನಡೆಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. 'ದ್ವೇಷ ಹೊಂದಿರುವವನು ಯೋಗಿ ಆಗಲು ಹೇಗೆ ಸಾಧ್ಯ' ಎಂದು ಪ್ರಶ್ನಿಸಿದ್ದಾರೆ.</p>.<p>'ಕ್ರಿಮಿನಲ್ಗಳು ಮತ್ತು ದುಷ್ಕರ್ಮಿಗಳ ಸಾಮ್ರಾಜ್ಯವನ್ನು ಕೆಡವುವುದು ದ್ವೇಷ ಎಂದೆನಿಸಿಕೊಂಡರೆ, ಈ ದ್ವೇಷವು ನಿರಂತರವಾಗಿ ಮುಂದುವರಿಯುತ್ತದೆ' ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಕಚೇರಿ ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದೆ.</p>.<p>ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, 'ಜೋ ನಫ್ರತ್ ಕರೇ, ವೊ ಯೋಗಿ ಕೈಸಾ! (ದ್ವೇಷವನ್ನು ಹೊಂದಿರುವವನು ಯೋಗಿ ಹೇಗಾಗುತ್ತಾನೆ)' ಎಂದಿದ್ದಾರೆ.</p>.<p>ಭಾನುವಾರ ಕುಶಿನಗರದಲ್ಲಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ್ದ ಯೋಗಿ ಆದಿತ್ಯನಾಥ್, '2017ಕ್ಕೂ ಮುನ್ನ ಈಗಿನಂತೆ ಜನರಿಗೆ ಪಡಿತರ ಸಿಗುತ್ತಿರಲಿಲ್ಲ. ಏಕೆಂದರೆ, ಆಗ ‘ಅಬ್ಬಾ ಜಾನ್ ಎಂದು ಕರೆಯಲಾಗುವ ಈ ಜನರು’ ಪಡಿತರವನ್ನು ಜೀರ್ಣಿಸಿಕೊಳ್ಳುತ್ತಿದ್ದರು. ಕುಶಿನಗರದಲ್ಲಿ ನೀಡಲಾಗುತ್ತಿದ್ದ ಪಡಿತರಗಳು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗುತ್ತಿದ್ದವು. ಇಂದು ಯಾರಾದರೂ ಬಡ ಜನರಿಗೆ ನೀಡಲಾಗುವ ಪಡಿತರವನ್ನು ನುಂಗಲು ಪ್ರಯತ್ನಿಸಿದರೆ, ಅಂಥವರು ಜೈಲಿನಲ್ಲಿ ಇರುತ್ತಾರೆ' ಮುಖ್ಯಮಂತ್ರಿ ಯೋಗಿ ಹೇಳಿದ್ದರು.</p>.<p>'ಅಬ್ಬಾ ಜಾನ್' ಎಂದರೆ ಉರ್ದು ಶಬ್ದವಾಗಿದ್ದು, ತಂದೆ ಎಂದರ್ಥ.</p>.<p>ಫೇಸ್ಬುಕ್ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಒಂದು ವರ್ಷದ ಹಿಂದೆ ನಡೆದ ಭಯಾನಕ ಹಾಥರಸ್ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. 'ನ್ಯಾಯಕ್ಕಾಗಿ ಕಾಯುವಿಕೆ ಮುಂದುವರಿದಿದೆ. ಹಾಥರಸ್ನ ಯುವತಿ, ಈ ದೇಶದ ಮಗಳು' ಎಂದಿದ್ದಾರೆ.</p>.<p>ಭಯಾನಕ ಹಾಥರಸ್ ಘಟನೆ ಒಂದು ವರ್ಷದ ಹಿಂದೆ ನಡೆದಿದ್ದು, ದಲಿತ ಯುವತಿ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಸ್ಲಿಂ ಸಮುದಾಯ ಹಾಗೂ ಸಮಾಜವಾದಿ ಪಕ್ಷವನ್ನು (ಎಸ್ಪಿ) ಉದ್ದೇಶಿಸಿ ‘ಅಬ್ಬಾ ಜಾನ್ ಎಂದು ಕರೆಯಲಾಗುವ ಈ ಜನರು’ ಎಂದು ವಾಗ್ದಾಳಿ ನಡೆಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. 'ದ್ವೇಷ ಹೊಂದಿರುವವನು ಯೋಗಿ ಆಗಲು ಹೇಗೆ ಸಾಧ್ಯ' ಎಂದು ಪ್ರಶ್ನಿಸಿದ್ದಾರೆ.</p>.<p>'ಕ್ರಿಮಿನಲ್ಗಳು ಮತ್ತು ದುಷ್ಕರ್ಮಿಗಳ ಸಾಮ್ರಾಜ್ಯವನ್ನು ಕೆಡವುವುದು ದ್ವೇಷ ಎಂದೆನಿಸಿಕೊಂಡರೆ, ಈ ದ್ವೇಷವು ನಿರಂತರವಾಗಿ ಮುಂದುವರಿಯುತ್ತದೆ' ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿಯವರ ಕಚೇರಿ ರಾಹುಲ್ ಗಾಂಧಿಯವರಿಗೆ ತಿರುಗೇಟು ನೀಡಿದೆ.</p>.<p>ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, 'ಜೋ ನಫ್ರತ್ ಕರೇ, ವೊ ಯೋಗಿ ಕೈಸಾ! (ದ್ವೇಷವನ್ನು ಹೊಂದಿರುವವನು ಯೋಗಿ ಹೇಗಾಗುತ್ತಾನೆ)' ಎಂದಿದ್ದಾರೆ.</p>.<p>ಭಾನುವಾರ ಕುಶಿನಗರದಲ್ಲಿ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ್ದ ಯೋಗಿ ಆದಿತ್ಯನಾಥ್, '2017ಕ್ಕೂ ಮುನ್ನ ಈಗಿನಂತೆ ಜನರಿಗೆ ಪಡಿತರ ಸಿಗುತ್ತಿರಲಿಲ್ಲ. ಏಕೆಂದರೆ, ಆಗ ‘ಅಬ್ಬಾ ಜಾನ್ ಎಂದು ಕರೆಯಲಾಗುವ ಈ ಜನರು’ ಪಡಿತರವನ್ನು ಜೀರ್ಣಿಸಿಕೊಳ್ಳುತ್ತಿದ್ದರು. ಕುಶಿನಗರದಲ್ಲಿ ನೀಡಲಾಗುತ್ತಿದ್ದ ಪಡಿತರಗಳು ನೇಪಾಳ ಮತ್ತು ಬಾಂಗ್ಲಾದೇಶಕ್ಕೆ ಹೋಗುತ್ತಿದ್ದವು. ಇಂದು ಯಾರಾದರೂ ಬಡ ಜನರಿಗೆ ನೀಡಲಾಗುವ ಪಡಿತರವನ್ನು ನುಂಗಲು ಪ್ರಯತ್ನಿಸಿದರೆ, ಅಂಥವರು ಜೈಲಿನಲ್ಲಿ ಇರುತ್ತಾರೆ' ಮುಖ್ಯಮಂತ್ರಿ ಯೋಗಿ ಹೇಳಿದ್ದರು.</p>.<p>'ಅಬ್ಬಾ ಜಾನ್' ಎಂದರೆ ಉರ್ದು ಶಬ್ದವಾಗಿದ್ದು, ತಂದೆ ಎಂದರ್ಥ.</p>.<p>ಫೇಸ್ಬುಕ್ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಒಂದು ವರ್ಷದ ಹಿಂದೆ ನಡೆದ ಭಯಾನಕ ಹಾಥರಸ್ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. 'ನ್ಯಾಯಕ್ಕಾಗಿ ಕಾಯುವಿಕೆ ಮುಂದುವರಿದಿದೆ. ಹಾಥರಸ್ನ ಯುವತಿ, ಈ ದೇಶದ ಮಗಳು' ಎಂದಿದ್ದಾರೆ.</p>.<p>ಭಯಾನಕ ಹಾಥರಸ್ ಘಟನೆ ಒಂದು ವರ್ಷದ ಹಿಂದೆ ನಡೆದಿದ್ದು, ದಲಿತ ಯುವತಿ ಮೇಲೆ ನಾಲ್ವರು ಅತ್ಯಾಚಾರ ಎಸಗಿದ್ದರು. ಸೆಪ್ಟೆಂಬರ್ 29 ರಂದು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>