ಮಂಗಳವಾರ ನಡೆದ ಅಚ್ಚರಿಯ ಬೆಳವಣಿಗೆಯಲ್ಲಿ ಪುದುಚೇರಿಯ ಲೆಫ್ಟಿನೆಂಟ್ ಗರ್ವನರ್ ಹುದ್ದೆಯಿಂದ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಯಿತು. ರಾಷ್ಟ್ರಪತಿ ಭವನದಿಂದಲೇ ಈ ಅಧಿಕೃತ ಅದೇಶ ಪ್ರಕಟಗೊಂಡಿತು. ಈ ಘಟನೆ ನಡೆಯುವ ವಾರದ ಹಿಂದೆ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಅವರು ಕಿರಣ್ ಬೇಡಿ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಒತ್ತಾಯಿಸಿದ್ದರು.