<p><strong>ನವದೆಹಲಿ</strong>: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವದಂತಿ ಹರಿದಾಡುತ್ತಿರುವ ಹೊತ್ತಿನಲ್ಲೇ, ಕೇಸರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಜಾರ್ಖಂಡ್ಗೆ ಡಿಢೀರ್ ಪ್ರವಾಸ ಕೈಗೊಂಡಿದ್ದಾರೆ. ಈ ಬೆಳವಣಿಗೆ, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.</p><p>ನಡ್ಡಾ ಅವರ ಎರಡು ದಿನಗಳ ಭೇಟಿ ಸಂದರ್ಭದಲ್ಲಿ, ದಿಯೋಘರ್ನಲ್ಲಿರುವ ಅತಿಥಿ ಗೃಹದಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯನ್ನು ಶುಕ್ರವಾರ ಸಂಜೆ ನಡೆಸಲಿದ್ದಾರೆ ಎಂದು ಪಕ್ಷದ ವಕ್ತಾರ ಅನಿಲ್ ಬಲೂನಿ ಅವರು ಗುರುವಾರ ಹೇಳಿದ್ದರು.</p><p>ಈ ಸಭೆ ಹೊರತಾಗಿ ನಡ್ಡಾ ಅವರು ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮರುದಿನ (ಶನಿವಾರ), ದಿಯೋನಗರದಲ್ಲಿರುವ ಬಾಬಾ ವೈದ್ಯನಾಥ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದರು.</p><p>ಜಾರ್ಖಂಡ್ ಮುಖ್ಯಮಂತ್ರಿ ಹಾಗೂ ಜೆಎಂಎಂ ನಾಯಕ ಹೇಮಂತ ಸೊರೇನ್ ಅವರು ಇದೇ ವಾರದ ಆರಂಭದಲ್ಲಿ ದೆಹಲಿಗೆ ಏಕಾಏಕಿ ಭೇಟಿ ನೀಡಿದ್ದರು. ಇದರಿಂದಾಗಿ ಅವರು, ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದಿಂದ ಹೊರನಡೆದು, ಎನ್ಡಿಎ ಬಣ ಸೇರಬಹುದು ಎಂಬ ಊಹಾಪೋಹಗಳು ಎದ್ದಿವೆ.</p><p>ಹೇಮಂತ್ ಹಾಗೂ ಅವರ ಪತ್ನಿ, ಶಾಸಕಿ ಕಲ್ಪನಾ ಅವರು ಎನ್ಡಿಎ ಬಣ ಸೇರುವ ಕುರಿತು, ಹೊಸ ಸರ್ಕಾರ ರಚಿಸುವ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ಮಾತುಕತೆ ನಡೆಸುತ್ತಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿದೆ. ಆದರೆ, ಅದಕ್ಕೆ ಆಧಾರವಿಲ್ಲ.</p><p>2024ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಜೊತೆ ಮಾಡಿಕೊಂಡ ಸೀಟು ಹಂಚಿಕೆ ಬಗ್ಗೆ ಜೆಎಂಎಂನ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ, ಈ ಎಲ್ಲ ಊಹಾಪೋಹಗಳಿಗೆ ರೆಕ್ಕೆಪುಕ್ಕ ಕಟ್ಟಿದೆ ಎನ್ನಲಾಗಿದೆ.</p><p>ಹೊಸ ಸರ್ಕಾರ ಸೇರಿಕೊಳ್ಳಲು ಕಾಂಗ್ರೆಸ್ನ ಕೆಲವು ಶಾಸಕರೂ ಉತ್ಸುಕರಾಗಿದ್ದಾರೆ ಎಂಬ ಮತ್ತೊಂದು ವದಂತಿಯೂ ಚಾಲ್ತಿಯಲ್ಲಿದೆ.</p><p>ಬಿಹಾರದಲ್ಲಿ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಕಡೆಗಳಲ್ಲಿ ಸ್ಪರ್ಧಿಸಲು ಜೆಎಂಎಂ ಬಯಸಿತ್ತು. ಆದರೆ, ಇಂಡಿಯಾ ಮೈತ್ರಿಕೂಟದಲ್ಲಿನ ಸೀಟು ಹಂಚಿಕೆ ಮಾತುಕತೆಗಳು ಫಲಪ್ರದವಾಗಲಿಲ್ಲ ಎಂಬುದು, ಜೆಎಂಎಂ ಅಸಮಾಧಾನಕ್ಕೆ ಕಾರಣವಾಗಿದೆ.</p><p>81 ಸದಸ್ಯ ಬಲವಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 41 ಸ್ಥಾನಗಳ ಬಹುಮತ ಬೇಕಿದೆ. ಸದ್ಯ 34 ಕ್ಷೇತ್ರಗಳನ್ನು ಹೊಂದಿರುವ ಜೆಎಂಎಂಗೆ, ಕಾಂಗ್ರೆಸ್ನ 16 ಶಾಸಕರು ಬೆಂಬಲ ಸೂಚಿಸಿದ್ದಾರೆ. 4 ಸ್ಥಾನಗಳನ್ನು ಹೊಂದಿರುವ ಆರ್ಜೆಡಿ, 2 ಸ್ಥಾನ ಪಡೆದಿರುವ ಸಿಪಿಐ–ಎಂಎಲ್ ಬೆಂಬಲವೂ ಸರ್ಕಾರಕ್ಕೆ ಇದೆ.</p><p>ಮತ್ತೊಂದು ಕಡೆ ಬಿಜೆಪಿಯಲ್ಲಿ, 21 ಶಾಸಕರಿದ್ದಾರೆ. ಎನ್ಡಿಎ ಬಣದಲ್ಲಿರುವ ಎಲ್ಜೆಪಿ ಮತ್ತು ಜೆಡಿಯು ತಲಾ ಒಬ್ಬ ಶಾಸಕರನ್ನು ಹೊಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ವದಂತಿ ಹರಿದಾಡುತ್ತಿರುವ ಹೊತ್ತಿನಲ್ಲೇ, ಕೇಸರಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು, ಜಾರ್ಖಂಡ್ಗೆ ಡಿಢೀರ್ ಪ್ರವಾಸ ಕೈಗೊಂಡಿದ್ದಾರೆ. ಈ ಬೆಳವಣಿಗೆ, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.</p><p>ನಡ್ಡಾ ಅವರ ಎರಡು ದಿನಗಳ ಭೇಟಿ ಸಂದರ್ಭದಲ್ಲಿ, ದಿಯೋಘರ್ನಲ್ಲಿರುವ ಅತಿಥಿ ಗೃಹದಲ್ಲಿ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆಯನ್ನು ಶುಕ್ರವಾರ ಸಂಜೆ ನಡೆಸಲಿದ್ದಾರೆ ಎಂದು ಪಕ್ಷದ ವಕ್ತಾರ ಅನಿಲ್ ಬಲೂನಿ ಅವರು ಗುರುವಾರ ಹೇಳಿದ್ದರು.</p><p>ಈ ಸಭೆ ಹೊರತಾಗಿ ನಡ್ಡಾ ಅವರು ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮರುದಿನ (ಶನಿವಾರ), ದಿಯೋನಗರದಲ್ಲಿರುವ ಬಾಬಾ ವೈದ್ಯನಾಥ್ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದ್ದರು.</p><p>ಜಾರ್ಖಂಡ್ ಮುಖ್ಯಮಂತ್ರಿ ಹಾಗೂ ಜೆಎಂಎಂ ನಾಯಕ ಹೇಮಂತ ಸೊರೇನ್ ಅವರು ಇದೇ ವಾರದ ಆರಂಭದಲ್ಲಿ ದೆಹಲಿಗೆ ಏಕಾಏಕಿ ಭೇಟಿ ನೀಡಿದ್ದರು. ಇದರಿಂದಾಗಿ ಅವರು, ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ'ದಿಂದ ಹೊರನಡೆದು, ಎನ್ಡಿಎ ಬಣ ಸೇರಬಹುದು ಎಂಬ ಊಹಾಪೋಹಗಳು ಎದ್ದಿವೆ.</p><p>ಹೇಮಂತ್ ಹಾಗೂ ಅವರ ಪತ್ನಿ, ಶಾಸಕಿ ಕಲ್ಪನಾ ಅವರು ಎನ್ಡಿಎ ಬಣ ಸೇರುವ ಕುರಿತು, ಹೊಸ ಸರ್ಕಾರ ರಚಿಸುವ ವಿಚಾರವಾಗಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ಮಾತುಕತೆ ನಡೆಸುತ್ತಿದ್ದಾರೆ ಎಂಬುದಾಗಿಯೂ ಹೇಳಲಾಗುತ್ತಿದೆ. ಆದರೆ, ಅದಕ್ಕೆ ಆಧಾರವಿಲ್ಲ.</p><p>2024ರಲ್ಲಿ ನಡೆದ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಜೊತೆ ಮಾಡಿಕೊಂಡ ಸೀಟು ಹಂಚಿಕೆ ಬಗ್ಗೆ ಜೆಎಂಎಂನ ಹಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ, ಈ ಎಲ್ಲ ಊಹಾಪೋಹಗಳಿಗೆ ರೆಕ್ಕೆಪುಕ್ಕ ಕಟ್ಟಿದೆ ಎನ್ನಲಾಗಿದೆ.</p><p>ಹೊಸ ಸರ್ಕಾರ ಸೇರಿಕೊಳ್ಳಲು ಕಾಂಗ್ರೆಸ್ನ ಕೆಲವು ಶಾಸಕರೂ ಉತ್ಸುಕರಾಗಿದ್ದಾರೆ ಎಂಬ ಮತ್ತೊಂದು ವದಂತಿಯೂ ಚಾಲ್ತಿಯಲ್ಲಿದೆ.</p><p>ಬಿಹಾರದಲ್ಲಿ ಬುಡಕಟ್ಟು ಸಮುದಾಯದ ಪ್ರಾಬಲ್ಯವಿರುವ ಕಡೆಗಳಲ್ಲಿ ಸ್ಪರ್ಧಿಸಲು ಜೆಎಂಎಂ ಬಯಸಿತ್ತು. ಆದರೆ, ಇಂಡಿಯಾ ಮೈತ್ರಿಕೂಟದಲ್ಲಿನ ಸೀಟು ಹಂಚಿಕೆ ಮಾತುಕತೆಗಳು ಫಲಪ್ರದವಾಗಲಿಲ್ಲ ಎಂಬುದು, ಜೆಎಂಎಂ ಅಸಮಾಧಾನಕ್ಕೆ ಕಾರಣವಾಗಿದೆ.</p><p>81 ಸದಸ್ಯ ಬಲವಿರುವ ಜಾರ್ಖಂಡ್ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 41 ಸ್ಥಾನಗಳ ಬಹುಮತ ಬೇಕಿದೆ. ಸದ್ಯ 34 ಕ್ಷೇತ್ರಗಳನ್ನು ಹೊಂದಿರುವ ಜೆಎಂಎಂಗೆ, ಕಾಂಗ್ರೆಸ್ನ 16 ಶಾಸಕರು ಬೆಂಬಲ ಸೂಚಿಸಿದ್ದಾರೆ. 4 ಸ್ಥಾನಗಳನ್ನು ಹೊಂದಿರುವ ಆರ್ಜೆಡಿ, 2 ಸ್ಥಾನ ಪಡೆದಿರುವ ಸಿಪಿಐ–ಎಂಎಲ್ ಬೆಂಬಲವೂ ಸರ್ಕಾರಕ್ಕೆ ಇದೆ.</p><p>ಮತ್ತೊಂದು ಕಡೆ ಬಿಜೆಪಿಯಲ್ಲಿ, 21 ಶಾಸಕರಿದ್ದಾರೆ. ಎನ್ಡಿಎ ಬಣದಲ್ಲಿರುವ ಎಲ್ಜೆಪಿ ಮತ್ತು ಜೆಡಿಯು ತಲಾ ಒಬ್ಬ ಶಾಸಕರನ್ನು ಹೊಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>