<p><strong>ಸಂಭಾಲ್ (ಉ.ಪ್ರದೇಶ):</strong> ಕಾಲಚಕ್ರ ಉರುಳಿದಂತೆ ದೇಶವು ಹಲವು ಮೊದಲುಗಳ ದಾಖಲೆಯನ್ನು ನಿರ್ಮಿಸಿದ್ದು, ಜಗತ್ತಿಗೆ ಉತ್ತಮ ಮಾದರಿಯಾಗಿದೆ. ಜತೆಗೆ ಭಾರತವೆಂಬ ದೇಗುಲವನ್ನು ಮರುನಿರ್ಮಾಣಗೊಳಿಸುವ ಕರ್ತವ್ಯವನ್ನು ದೇವರು ನನಗೆ ನೀಡಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಶ್ರೀ ಕಲ್ಕಿ ಧಾಮ ದೇವಾಲಯ ನಿರ್ಮಾಣದ ಶಂಕುಸ್ಥಾಪನೆಯನ್ನು ನೇರವೇರಿಸಿ ಮಾತನಾಡಿದ ಅವರು, ಜನವರಿ 22ರಿಂದ ಹೊಸ ಯುಗ ಪ್ರಾರಂಭವಾಗಿದೆ ಎಂದು ಅಯೋಧ್ಯೆಯ ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯ ದಿನದಂದು ಹೇಳಿದ್ದ ಮಾತನ್ನು ಪುನರುಚ್ಚರಿಸಿದ್ದಾರೆ.</p><p>‘ಶ್ರೀ ರಾಮನ ಆಳ್ವಿಕೆಯು ಸಾವಿರ ವರ್ಷಗಳವರೆಗೆ ಪ್ರಭಾವ ಬೀರಿತ್ತು. ಹಾಗೆಯೇ, ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯೊಂದಿಗೆ ಮುಂದಿನ ಸಾವಿರ ವರ್ಷಗಳವರೆಗೆ ದೇಶಕ್ಕೆ ಹೊಸ ಪ್ರಯಾಣ ಪ್ರಾರಂಭಗೊಂಡಿದೆ. ಭಾರತವೆಂಬ ದೇಗುಲವನ್ನು ಮರುನಿರ್ಮಾಣಗೊಳಿಸುವ ಕರ್ತವ್ಯವನ್ನು ದೇವರು ನನಗೆ ನೀಡಿದ್ದಾನೆ’ ಎಂದು ಅವರು ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕಲ್ಕಿ ಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಾಲ್ (ಉ.ಪ್ರದೇಶ):</strong> ಕಾಲಚಕ್ರ ಉರುಳಿದಂತೆ ದೇಶವು ಹಲವು ಮೊದಲುಗಳ ದಾಖಲೆಯನ್ನು ನಿರ್ಮಿಸಿದ್ದು, ಜಗತ್ತಿಗೆ ಉತ್ತಮ ಮಾದರಿಯಾಗಿದೆ. ಜತೆಗೆ ಭಾರತವೆಂಬ ದೇಗುಲವನ್ನು ಮರುನಿರ್ಮಾಣಗೊಳಿಸುವ ಕರ್ತವ್ಯವನ್ನು ದೇವರು ನನಗೆ ನೀಡಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.</p>.<p>ಉತ್ತರ ಪ್ರದೇಶದ ಶ್ರೀ ಕಲ್ಕಿ ಧಾಮ ದೇವಾಲಯ ನಿರ್ಮಾಣದ ಶಂಕುಸ್ಥಾಪನೆಯನ್ನು ನೇರವೇರಿಸಿ ಮಾತನಾಡಿದ ಅವರು, ಜನವರಿ 22ರಿಂದ ಹೊಸ ಯುಗ ಪ್ರಾರಂಭವಾಗಿದೆ ಎಂದು ಅಯೋಧ್ಯೆಯ ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯ ದಿನದಂದು ಹೇಳಿದ್ದ ಮಾತನ್ನು ಪುನರುಚ್ಚರಿಸಿದ್ದಾರೆ.</p><p>‘ಶ್ರೀ ರಾಮನ ಆಳ್ವಿಕೆಯು ಸಾವಿರ ವರ್ಷಗಳವರೆಗೆ ಪ್ರಭಾವ ಬೀರಿತ್ತು. ಹಾಗೆಯೇ, ಬಾಲ ರಾಮ ಪ್ರಾಣ ಪ್ರತಿಷ್ಠಾಪನೆಯೊಂದಿಗೆ ಮುಂದಿನ ಸಾವಿರ ವರ್ಷಗಳವರೆಗೆ ದೇಶಕ್ಕೆ ಹೊಸ ಪ್ರಯಾಣ ಪ್ರಾರಂಭಗೊಂಡಿದೆ. ಭಾರತವೆಂಬ ದೇಗುಲವನ್ನು ಮರುನಿರ್ಮಾಣಗೊಳಿಸುವ ಕರ್ತವ್ಯವನ್ನು ದೇವರು ನನಗೆ ನೀಡಿದ್ದಾನೆ’ ಎಂದು ಅವರು ಹೇಳಿದ್ದಾರೆ.</p><p>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕಲ್ಕಿ ಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಅವರ ಸಮ್ಮುಖದಲ್ಲಿ ಪ್ರಧಾನಿ ಮೋದಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>