<p><strong>ನವದೆಹಲಿ:</strong> ಚೀನಾ ಪಡೆಗಳು 1962ರಲ್ಲಿ ಆಕ್ರಮಣ ಮಾಡಿದ್ದ ವೇಳೆ, ಗಡಿಯಲ್ಲಿನ ಪರಿಸ್ಥಿತಿ ಕುರಿತಂತೆ ಆಗ ಸಂಸತ್ನಲ್ಲಿ ಚರ್ಚೆ ನಡೆದಿತ್ತು. ಇದೇ ವಿಚಾರವಾಗಿ ಆಗಿನಂತೆ ಈಗ ಏಕೆ ಚರ್ಚೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.</p>.<p>ಮುಂದಿನ ವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ವಿಚಾರ ಕುರಿತು ಚರ್ಚೆ ನಡೆಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪುವರು ಎಂಬ ಭರವಸೆ ಇದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p>ದೇಶದ ಭದ್ರತೆ ಹಾಗೂ ಆರ್ಥಿಕತೆಗೆ ಸಂಬಂಧಿಸಿ ಚೀನಾದಿಂದ ಎದುರಾಗಿರುವ ಸವಾಲುಗಳಂತಹ ಮಹತ್ವದ ವಿಚಾರಗಳ ಕುರಿತು ರಾಷ್ಟ್ರೀಯ ಸಹಮತ ರೂಪಿಸುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ಪಾಕಿಸ್ತಾನವು ಚೀನಾ ನಿರ್ಮಿತ ಜೆ–35 ಯುದ್ಧವಿಮಾನಗಳನ್ನು ಮುಂಬರುವ ದಿನಗಳಲ್ಲಿ ಖರೀದಿಸುವ ಸಾಧ್ಯತೆ ಇದೆ. ವಿರಳ ಲೋಹಗಳು, ರಸಗೊಬ್ಬರಗಳು, ಸುರಂಗ ಕೊರೆಯುವ ಯಂತ್ರಗಳನ್ನು ಭಾರತಕ್ಕೆ ರಫ್ತು ಮಾಡುವುದರ ಮೇಲೆ ಚೀನಾ ನಿರ್ಬಂಧ ವಿಧಿಸಿದೆ’ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.ಚೀನಾ ಆಕ್ರಮಣ ವದಂತಿ ಸುಳ್ಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಚೀನಾ ಪಡೆಗಳು 1962ರಲ್ಲಿ ಆಕ್ರಮಣ ಮಾಡಿದ್ದ ವೇಳೆ, ಗಡಿಯಲ್ಲಿನ ಪರಿಸ್ಥಿತಿ ಕುರಿತಂತೆ ಆಗ ಸಂಸತ್ನಲ್ಲಿ ಚರ್ಚೆ ನಡೆದಿತ್ತು. ಇದೇ ವಿಚಾರವಾಗಿ ಆಗಿನಂತೆ ಈಗ ಏಕೆ ಚರ್ಚೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.</p>.<p>ಮುಂದಿನ ವಾರ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ವಿಚಾರ ಕುರಿತು ಚರ್ಚೆ ನಡೆಸುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಒಪ್ಪುವರು ಎಂಬ ಭರವಸೆ ಇದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.</p>.<p>ದೇಶದ ಭದ್ರತೆ ಹಾಗೂ ಆರ್ಥಿಕತೆಗೆ ಸಂಬಂಧಿಸಿ ಚೀನಾದಿಂದ ಎದುರಾಗಿರುವ ಸವಾಲುಗಳಂತಹ ಮಹತ್ವದ ವಿಚಾರಗಳ ಕುರಿತು ರಾಷ್ಟ್ರೀಯ ಸಹಮತ ರೂಪಿಸುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ಪಾಕಿಸ್ತಾನವು ಚೀನಾ ನಿರ್ಮಿತ ಜೆ–35 ಯುದ್ಧವಿಮಾನಗಳನ್ನು ಮುಂಬರುವ ದಿನಗಳಲ್ಲಿ ಖರೀದಿಸುವ ಸಾಧ್ಯತೆ ಇದೆ. ವಿರಳ ಲೋಹಗಳು, ರಸಗೊಬ್ಬರಗಳು, ಸುರಂಗ ಕೊರೆಯುವ ಯಂತ್ರಗಳನ್ನು ಭಾರತಕ್ಕೆ ರಫ್ತು ಮಾಡುವುದರ ಮೇಲೆ ಚೀನಾ ನಿರ್ಬಂಧ ವಿಧಿಸಿದೆ’ ಎಂದು ಅವರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.</p>.ಚೀನಾ ಆಕ್ರಮಣ ವದಂತಿ ಸುಳ್ಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>