<p><strong>ನವದೆಹಲಿ:</strong> ತೊಗರಿಯನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ಜಾರಿಗೊಳಿಸಲಾಗಿರುವ ವ್ಯವಸ್ಥೆಯನ್ನು ಇತರ ಬೇಳೆಕಾಳುಗಳನ್ನು ಮಾರಾಟ ಮಾಡುವುದಕ್ಕೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.</p>.<p>‘ಬೇಳೆ ಕಾಳುಗಳ ಖರೀದಿಗಾಗಿ ವ್ಯಯಿಸುವ ಹಣವು ಬೇರೆ ದೇಶಗಳಿಗೆ ಹೋಗದೇ, ಅದು ನಮ್ಮ ರೈತರಿಗೇ ಸಿಗಬೇಕು ಎಂಬುದು ಈ ಯೋಜನೆಯ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ದೇಶದ ವಿವಿಧೆಡೆ ಹಮ್ಮಿಕೊಂಡಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯನ್ನು ವರ್ಚುವಲ್ ಆಗಿ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಆನ್ಲೈನ್ ಮೂಲಕ ತೊಗರಿ ಮಾರಾಟ ಮಾಡುವುದಕ್ಕೆ ಜಾರಿಗೊಳಿಸಿರುವ ಈ ವ್ಯವಸ್ಥೆಯಿಂದ ರೈತರು ತಮ್ಮ ಕೃಷಿ ಉತ್ಪನ್ನವನ್ನು ನೇರವಾಗಿ ಸರ್ಕಾರಕ್ಕೆ ಮಾರಾಟ ಮಾಡಬಹುದು. ಈ ವ್ಯವಸ್ಥೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಇರುತ್ತದೆ’ ಎಂದು ಮೋದಿ ಹೇಳಿದರು.</p>.<p>‘ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನೀತಿ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿರಲಿಲ್ಲ. ಕೃಷಿ ಉತ್ಪಾದನೆ ಹಾಗೂ ಮಾರಾಟಕ್ಕೆ ಮಾತ್ರ ಚರ್ಚೆ ನಡೆಸಲಾಗುತ್ತಿತ್ತು. ಆದರೆ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತಿತ್ತು’ ಎಂದು ಹೇಳಿದರು.</p>.<p>‘ನಮ್ಮ ಸರ್ಕಾರ ರೈತರು ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆ ನಿವಾರಣೆಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದೆ’ ಎಂದರು. </p>.<p><strong>ಯಾತ್ರೆ ಉದ್ದೇಶ</strong>: ‘ಯಾವ ಫಲಾನುಭವಿಯೂ ಸರ್ಕಾರದ ಯೋಜನೆಗಳಿಂದ ಹೊರಗುಳಿಯುವುದಿಲ್ಲ ಎಂಬುದನ್ನು ಖಾತ್ರಿಪಡಿಸುವುದೇ ಈ ಯಾತ್ರೆಯ ಮುಖ್ಯ ಉದ್ದೇಶ’ ಎಂದು ಪ್ರಧಾನಿ ಮೋದಿ ಹೇಳಿದರು.</p>.<h2>‘ದೇಶದೆಲ್ಲೆಡೆ ಮೋದಿ ಕಿ ಗ್ಯಾರಂಟಿ ಗಾಡಿ ಸಂಚಾರ’</h2>.<p> ‘ಮೋದಿ ಅವರ ಗ್ಯಾರಂಟಿ ಗಾಡಿ (ಮೋದಿ ಕಿ ಗ್ಯಾರಂಟಿ ವಾಲಿ ಗಾಡಿ) ದೇಶದ ಪ್ರತಿಯೊಂದು ಮೂಲೆಗೂ ಹೋಗಲಿದೆ. ಫಲಾನುಭವಿಗಳ ಮನೆ ಬಾಗಿಲಿಗೇ ಸರ್ಕಾರ ಹೋಗಲಿದ್ದು ತ್ವರಿತವಾಗಿ ಯೋಜನೆಯ ಲಾಭವನ್ನು ತಲುಪಿಸಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. </p><p>ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನಭವಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಅವರು ‘ಯಾತ್ರೆಯು 50 ದಿನಗಳನ್ನು ಪೂರೈಸಿದ್ದು 11 ಕೋಟಿ ಜನರೊಂದಿಗೆ ಮುಖಾಮುಖಿಯಾಗಿದೆ’ ಎಂದರು. ‘ಮೋದಿ ಗ್ಯಾರಂಟಿ ಗಾಡಿಯೊಂದಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಹ ಜನರ ಬಳಿ ಹೋಗುತ್ತಿದ್ದಾರೆ. ಈ ಯಾತ್ರೆ ಆರಂಭಗೊಂಡ ನಂತರ ಉಜ್ವಲಾ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಕೋರಿ ಹೊಸದಾಗಿ 12 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ’ ಎಂದು ಹೇಳಿದ ಅವರು ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಒದಗಿಸಿರುವ ಸೌಲಭ್ಯಗಳನ್ನು ಪಟ್ಟಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ತೊಗರಿಯನ್ನು ಆನ್ಲೈನ್ ಮೂಲಕ ಮಾರಾಟ ಮಾಡಲು ಜಾರಿಗೊಳಿಸಲಾಗಿರುವ ವ್ಯವಸ್ಥೆಯನ್ನು ಇತರ ಬೇಳೆಕಾಳುಗಳನ್ನು ಮಾರಾಟ ಮಾಡುವುದಕ್ಕೆ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.</p>.<p>‘ಬೇಳೆ ಕಾಳುಗಳ ಖರೀದಿಗಾಗಿ ವ್ಯಯಿಸುವ ಹಣವು ಬೇರೆ ದೇಶಗಳಿಗೆ ಹೋಗದೇ, ಅದು ನಮ್ಮ ರೈತರಿಗೇ ಸಿಗಬೇಕು ಎಂಬುದು ಈ ಯೋಜನೆಯ ಉದ್ದೇಶವಾಗಿದೆ’ ಎಂದು ಹೇಳಿದರು.</p>.<p>ದೇಶದ ವಿವಿಧೆಡೆ ಹಮ್ಮಿಕೊಂಡಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯನ್ನು ವರ್ಚುವಲ್ ಆಗಿ ಉದ್ದೇಶಿಸಿ ಅವರು ಮಾತನಾಡಿದರು.</p>.<p>‘ಆನ್ಲೈನ್ ಮೂಲಕ ತೊಗರಿ ಮಾರಾಟ ಮಾಡುವುದಕ್ಕೆ ಜಾರಿಗೊಳಿಸಿರುವ ಈ ವ್ಯವಸ್ಥೆಯಿಂದ ರೈತರು ತಮ್ಮ ಕೃಷಿ ಉತ್ಪನ್ನವನ್ನು ನೇರವಾಗಿ ಸರ್ಕಾರಕ್ಕೆ ಮಾರಾಟ ಮಾಡಬಹುದು. ಈ ವ್ಯವಸ್ಥೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಇರುತ್ತದೆ’ ಎಂದು ಮೋದಿ ಹೇಳಿದರು.</p>.<p>‘ಈ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನೀತಿ ಕುರಿತು ಹೆಚ್ಚು ಚರ್ಚೆಗಳು ನಡೆಯುತ್ತಿರಲಿಲ್ಲ. ಕೃಷಿ ಉತ್ಪಾದನೆ ಹಾಗೂ ಮಾರಾಟಕ್ಕೆ ಮಾತ್ರ ಚರ್ಚೆ ನಡೆಸಲಾಗುತ್ತಿತ್ತು. ಆದರೆ, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿರ್ಲಕ್ಷಿಸಲಾಗುತ್ತಿತ್ತು’ ಎಂದು ಹೇಳಿದರು.</p>.<p>‘ನಮ್ಮ ಸರ್ಕಾರ ರೈತರು ಎದುರಿಸುತ್ತಿರುವ ಪ್ರತಿಯೊಂದು ಸಮಸ್ಯೆ ನಿವಾರಣೆಗೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಿದೆ’ ಎಂದರು. </p>.<p><strong>ಯಾತ್ರೆ ಉದ್ದೇಶ</strong>: ‘ಯಾವ ಫಲಾನುಭವಿಯೂ ಸರ್ಕಾರದ ಯೋಜನೆಗಳಿಂದ ಹೊರಗುಳಿಯುವುದಿಲ್ಲ ಎಂಬುದನ್ನು ಖಾತ್ರಿಪಡಿಸುವುದೇ ಈ ಯಾತ್ರೆಯ ಮುಖ್ಯ ಉದ್ದೇಶ’ ಎಂದು ಪ್ರಧಾನಿ ಮೋದಿ ಹೇಳಿದರು.</p>.<h2>‘ದೇಶದೆಲ್ಲೆಡೆ ಮೋದಿ ಕಿ ಗ್ಯಾರಂಟಿ ಗಾಡಿ ಸಂಚಾರ’</h2>.<p> ‘ಮೋದಿ ಅವರ ಗ್ಯಾರಂಟಿ ಗಾಡಿ (ಮೋದಿ ಕಿ ಗ್ಯಾರಂಟಿ ವಾಲಿ ಗಾಡಿ) ದೇಶದ ಪ್ರತಿಯೊಂದು ಮೂಲೆಗೂ ಹೋಗಲಿದೆ. ಫಲಾನುಭವಿಗಳ ಮನೆ ಬಾಗಿಲಿಗೇ ಸರ್ಕಾರ ಹೋಗಲಿದ್ದು ತ್ವರಿತವಾಗಿ ಯೋಜನೆಯ ಲಾಭವನ್ನು ತಲುಪಿಸಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. </p><p>ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನಭವಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಅವರು ‘ಯಾತ್ರೆಯು 50 ದಿನಗಳನ್ನು ಪೂರೈಸಿದ್ದು 11 ಕೋಟಿ ಜನರೊಂದಿಗೆ ಮುಖಾಮುಖಿಯಾಗಿದೆ’ ಎಂದರು. ‘ಮೋದಿ ಗ್ಯಾರಂಟಿ ಗಾಡಿಯೊಂದಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಹ ಜನರ ಬಳಿ ಹೋಗುತ್ತಿದ್ದಾರೆ. ಈ ಯಾತ್ರೆ ಆರಂಭಗೊಂಡ ನಂತರ ಉಜ್ವಲಾ ಯೋಜನೆಯಡಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಕೋರಿ ಹೊಸದಾಗಿ 12 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ’ ಎಂದು ಹೇಳಿದ ಅವರು ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಒದಗಿಸಿರುವ ಸೌಲಭ್ಯಗಳನ್ನು ಪಟ್ಟಿ ಮಾಡಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>