<p><strong>ನವದೆಹಲಿ:</strong> ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಕಾಯಂ ನೇಮಕಾತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ 2020ರಲ್ಲಿ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪು ನೀಡುವ ವೇಳೆ ಕರ್ನಲ್ ಸೋಫಿಯಾ ಖುರೇಷಿ ಅವರ ಸಾಧನೆಯನ್ನು ಉಲ್ಲೇಖಿಸಿತ್ತು.</p>.<p>ಸೋಫಿಯಾ ಅವರು ‘ಆಪರೇಷನ್ ಸಿಂಧೂರ’ದ ಕುರಿತು ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ್ದರು. ತೀರ್ಪು ನೀಡುವ ವೇಳೆ ಹಲವು ಮಹಿಳಾ ಅಧಿಕಾರಿಗಳ ಸಾಧನೆಗಳನ್ನು ನ್ಯಾಯಾಲಯ ಉಲ್ಲೇಖಿಸಿತ್ತು. ಸೋಫಿಯಾ ಅವರ ಸಾಧನೆಯನ್ನು ಕೂಡ ಉದಾಹರಣೆಯಾಗಿ ನೀಡಿತ್ತು.</p>.<p>‘ಅದೇ ಮೊದಲ ಬಾರಿಗೆ ಭಾರತವು ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದ ‘ಎಕ್ಸೈಜ್ ಫೋರ್ಸ್ 18’ ಹೆಸರಿನ ವಿವಿಧ ದೇಶಗಳ ಸೇನಾಭ್ಯಾಸದಲ್ಲಿ ಭಾರತದ ಸೇನಾ ತಂಡವನ್ನು ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರು ಮುನ್ನಡೆಸಿದ್ದರು’ ಎಂದು ಸುಪ್ರೀಂ ಕೋರ್ಟ್ ಶ್ಲಾಘನೆ ವ್ಯಕ್ತಪಡಿಸಿತ್ತು.</p>.<p>‘2006ರಲ್ಲಿ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಸೋಫಿಯಾ ಅವರು ಪಾಲ್ಗೊಂಡಿದ್ದರು. ಈ ವೇಳೆ ಕದನ ವಿರಾಮ ಉಲ್ಲಂಘನೆಯಂಥ ಘಟನೆಗಳ ಮೇಲ್ವಿಚಾರಣೆ ಮತ್ತು ಮಾನವೀಯ ನೆರವು ಚಟುವಟಿಕೆಗಳ ನೇತೃತ್ವ ವಹಿಸಿದ್ದರು’ ಎಂದೂ ಉಲ್ಲೇಖಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತೀಯ ಸೇನೆಯಲ್ಲಿ ಮಹಿಳೆಯರಿಗೆ ಕಾಯಂ ನೇಮಕಾತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ 2020ರಲ್ಲಿ ಐತಿಹಾಸಿಕ ತೀರ್ಪು ನೀಡಿತ್ತು. ತೀರ್ಪು ನೀಡುವ ವೇಳೆ ಕರ್ನಲ್ ಸೋಫಿಯಾ ಖುರೇಷಿ ಅವರ ಸಾಧನೆಯನ್ನು ಉಲ್ಲೇಖಿಸಿತ್ತು.</p>.<p>ಸೋಫಿಯಾ ಅವರು ‘ಆಪರೇಷನ್ ಸಿಂಧೂರ’ದ ಕುರಿತು ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಕಾರ್ಯಾಚರಣೆ ಕುರಿತು ಮಾಹಿತಿ ನೀಡಿದ್ದರು. ತೀರ್ಪು ನೀಡುವ ವೇಳೆ ಹಲವು ಮಹಿಳಾ ಅಧಿಕಾರಿಗಳ ಸಾಧನೆಗಳನ್ನು ನ್ಯಾಯಾಲಯ ಉಲ್ಲೇಖಿಸಿತ್ತು. ಸೋಫಿಯಾ ಅವರ ಸಾಧನೆಯನ್ನು ಕೂಡ ಉದಾಹರಣೆಯಾಗಿ ನೀಡಿತ್ತು.</p>.<p>‘ಅದೇ ಮೊದಲ ಬಾರಿಗೆ ಭಾರತವು ದೊಡ್ಡ ಮಟ್ಟದಲ್ಲಿ ಆಯೋಜಿಸಿದ್ದ ‘ಎಕ್ಸೈಜ್ ಫೋರ್ಸ್ 18’ ಹೆಸರಿನ ವಿವಿಧ ದೇಶಗಳ ಸೇನಾಭ್ಯಾಸದಲ್ಲಿ ಭಾರತದ ಸೇನಾ ತಂಡವನ್ನು ಲೆಫ್ಟಿನೆಂಟ್ ಕರ್ನಲ್ ಸೋಫಿಯಾ ಖುರೇಷಿ ಅವರು ಮುನ್ನಡೆಸಿದ್ದರು’ ಎಂದು ಸುಪ್ರೀಂ ಕೋರ್ಟ್ ಶ್ಲಾಘನೆ ವ್ಯಕ್ತಪಡಿಸಿತ್ತು.</p>.<p>‘2006ರಲ್ಲಿ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಸೋಫಿಯಾ ಅವರು ಪಾಲ್ಗೊಂಡಿದ್ದರು. ಈ ವೇಳೆ ಕದನ ವಿರಾಮ ಉಲ್ಲಂಘನೆಯಂಥ ಘಟನೆಗಳ ಮೇಲ್ವಿಚಾರಣೆ ಮತ್ತು ಮಾನವೀಯ ನೆರವು ಚಟುವಟಿಕೆಗಳ ನೇತೃತ್ವ ವಹಿಸಿದ್ದರು’ ಎಂದೂ ಉಲ್ಲೇಖಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>