<p><strong>ಶ್ರೀನಗರ</strong>: ’ವೈಟ್ ಕಾಲರ್ ಟೆರರ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಚಾರಣೆಗೆ ಕರೆದಿದ್ದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಅನಂತನಾಗ್ ಜಿಲ್ಲೆಯ ಖಾಜಿಗುಂದ್ ಬಳಿಯ ಒಣ ಹಣ್ಣು ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ ಹಾಗೂ ಅವರ ಮಗ ಜಸೀರ್ ಬಿಲಾಲ್ನನ್ನು ನಿನ್ನೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮನೆಯಿಂದ ವಶಕ್ಕೆ ಪಡೆದುಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು.</p><p>ಈ ವೇಳೆ ಪೊಲೀಸರು ವಾನಿ ಮಗ ಜಸೀರ್ನನ್ನು ಮಾತ್ರ ಇಟ್ಟುಕೊಂಡು ಬಿಲಾಲ್ರನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ್ದರು. ಅವರು ನಿನ್ನೆ ಸಂಜೆ ಮನೆಯಲ್ಲಿ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ವಿಷಯ ತಿಳಿದು ಪೊಲೀಸರು ಅವರನ್ನು ಅನಂತ್ನಾಗ್ನ ಎಸ್ಎಂಎಸ್ಎಚ್ ಆಸ್ಪತ್ರೆಗೆ ದಾಖಲಿಸಿದ್ದರು.</p><p>ಗಂಭೀರವಾಗಿ ಗಾಯಗೊಂಡಿದ್ದ ಒಣ ಹಣ್ಣು ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಮೃತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಹರಾನ್ಪುರದಲ್ಲಿ ಬಂಧನಕ್ಕೆ ಒಳಗಾಗಿರುವ ವೈದ್ಯ ಡಾ. ಅದೀಲ್ ರಾಥರ್ ಅಣ್ಣ ಡಾ. ಮುಜಾಪ್ಫರ್ ರಾಥರ್ ದೆಹಲಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಸದ್ಯ ಈತ ಅಪ್ಗಾನಿಸ್ತಾನದಲ್ಲಿ ಇದ್ದಾನೆ ಎನ್ನಲಾಗಿದೆ. ಈ ಮುಜಾಪ್ಫರ್ ಮನೆಯ ಪಕ್ಕದಲ್ಲಿಯೇ ಒಣ ಹಣ್ಣು ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ’ವೈಟ್ ಕಾಲರ್ ಟೆರರ್’ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಿಚಾರಣೆಗೆ ಕರೆದಿದ್ದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p>ಅನಂತನಾಗ್ ಜಿಲ್ಲೆಯ ಖಾಜಿಗುಂದ್ ಬಳಿಯ ಒಣ ಹಣ್ಣು ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ ಹಾಗೂ ಅವರ ಮಗ ಜಸೀರ್ ಬಿಲಾಲ್ನನ್ನು ನಿನ್ನೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮನೆಯಿಂದ ವಶಕ್ಕೆ ಪಡೆದುಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು.</p><p>ಈ ವೇಳೆ ಪೊಲೀಸರು ವಾನಿ ಮಗ ಜಸೀರ್ನನ್ನು ಮಾತ್ರ ಇಟ್ಟುಕೊಂಡು ಬಿಲಾಲ್ರನ್ನು ಪೊಲೀಸರು ವಾಪಸ್ ಮನೆಗೆ ಕಳುಹಿಸಿದ್ದರು. ಅವರು ನಿನ್ನೆ ಸಂಜೆ ಮನೆಯಲ್ಲಿ ಪೆಟ್ರೊಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ವಿಷಯ ತಿಳಿದು ಪೊಲೀಸರು ಅವರನ್ನು ಅನಂತ್ನಾಗ್ನ ಎಸ್ಎಂಎಸ್ಎಚ್ ಆಸ್ಪತ್ರೆಗೆ ದಾಖಲಿಸಿದ್ದರು.</p><p>ಗಂಭೀರವಾಗಿ ಗಾಯಗೊಂಡಿದ್ದ ಒಣ ಹಣ್ಣು ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಮೃತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಸಹರಾನ್ಪುರದಲ್ಲಿ ಬಂಧನಕ್ಕೆ ಒಳಗಾಗಿರುವ ವೈದ್ಯ ಡಾ. ಅದೀಲ್ ರಾಥರ್ ಅಣ್ಣ ಡಾ. ಮುಜಾಪ್ಫರ್ ರಾಥರ್ ದೆಹಲಿ ಸ್ಫೋಟದ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಸದ್ಯ ಈತ ಅಪ್ಗಾನಿಸ್ತಾನದಲ್ಲಿ ಇದ್ದಾನೆ ಎನ್ನಲಾಗಿದೆ. ಈ ಮುಜಾಪ್ಫರ್ ಮನೆಯ ಪಕ್ಕದಲ್ಲಿಯೇ ಒಣ ಹಣ್ಣು ವ್ಯಾಪಾರಿ ಬಿಲಾಲ್ ಅಹ್ಮದ್ ವಾನಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.ದೆಹಲಿ ಸ್ಫೋಟ: ಪ್ರಮುಖ ಸಂಚುಕೋರನ ಬಂಧಿಸಿದ ಎನ್ಐಎ.ದೆಹಲಿ ಸ್ಫೋಟ: ಕಾರು ಓಡಿಸಿದ್ದ ವ್ಯಕ್ತಿಗೆ ಅಕ್ರಮವಾಗಿ ₹20 ಲಕ್ಷ ಸಂದಾಯ; ವರದಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>