<p><strong>ಶ್ರೀನಗರ:</strong> 'ವೈಟ್ ಕಾಲರ್' ಭಯೋತ್ಪಾದಕ ಜಾಲ ಪ್ರಕರಣದಲ್ಲಿ ಹರಿಯಾಣ ಮೂಲದ ಧರ್ಮ ಬೋಧಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ಫರೀದಾಬಾದ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿರುವ ವೈಟ್ ಕಾಲರ್ ಭಯೋತ್ಪಾದಕ ಜಾಲದ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ಹರಿಯಾಣದ ಮೆವಾತ್ ಮೂಲದ ಧರ್ಮ ಬೋಧಕ ಮೌಲ್ವಿ ಇಶ್ತಿಯಾಕ್ನನ್ನು ವಶಕ್ಕೆ ಪಡೆಯಲಾಗಿದೆ. </p><p>ಆತ ಫರೀದಾಬಾದ್ನ ಅಲ್ ಫಲಾಹ್ ವಿಶ್ವವಿದ್ಯಾಲಯದ ಆವರಣದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಆತನ ಮನೆಯಿಂದಲೇ ಪೊಲೀಸರು 2,500 ಕೆ.ಜಿಗೂ ಹೆಚ್ಚು ಅಮೋನಿಯಂ ನೈಟ್ರೇಟ್, ಪೊಟ್ಯಾಷಿಯಂ ಕ್ಲೋರೆಟ್ ಮತ್ತು ಸಲ್ಫರ್ ವಶಪಡಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಕರಣ ಸಂಬಂಧ ಮೌಲ್ವಿ ಇಶ್ತಿಯಾಕ್ನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಬಂಧನಕ್ಕೊಳಗಾಗಲಿರುವ ಒಂಬತ್ತನೇ ಆರೋಪಿ ಎನಿಸಲಿದ್ದಾರೆ. </p><p>ನಿಷೇಧಿತ ಜೈಶ್–ಎ–ಮೊಹಮ್ಮದ್ (ಜೆಇಎಂ) ಮತ್ತು ಅನ್ಸರ್ ಫಜ್ವತ್-ಉಲ್-ಹಿಂದ್ನ 'ವೈಟ್ ಕಾಲರ್' ಭಯೋತ್ಪಾದಕ ಜಾಲವನ್ನು ಭೇದಿಸಲು ನವೆಂಬರ್ 10ರಂದು ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ್ದರು. </p><p>ನವದೆಹಲಿಯ ಕೆಂಪು ಕೋಟೆಯಲ್ಲಿ ಸೋಮವಾರ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಸ್ಫೋಟದಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾದ ವೈದ್ಯ ಡಾ. ಉಮರ್ ನಬಿ (34) ಎಂಬಾತ ಪ್ರಮುಖ ಶಂಕಿತ ಆರೋಪಿಯಾಗಿದ್ದಾನೆ. ಆತ ಫರೀದಾಬಾದ್ನಲ್ಲಿ ಪತ್ತೆಯಾದ ಭಯೋತ್ಪಾದಕರ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. </p>.Delhi Blast: ಘಟನಾ ಸ್ಥಳದಿಂದ 2 ಕಾರ್ಟ್ರಿಡ್ಜ್, 40ಕ್ಕೂ ಅಧಿಕ ಮಾದರಿ ಸಂಗ್ರಹ.'ವೈಟ್ಕಾಲರ್ ಭಯೋತ್ಪಾದನೆ': ಶಿಕ್ಷಿತ ವೃತ್ತಿಪರರ ಬಳಸಿ ಉಗ್ರ ಕೃತ್ಯಕ್ಕೆ ಪಿತೂರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> 'ವೈಟ್ ಕಾಲರ್' ಭಯೋತ್ಪಾದಕ ಜಾಲ ಪ್ರಕರಣದಲ್ಲಿ ಹರಿಯಾಣ ಮೂಲದ ಧರ್ಮ ಬೋಧಕನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. </p><p>ಫರೀದಾಬಾದ್ ವಿಶ್ವವಿದ್ಯಾಲಯದಿಂದ ಕಾರ್ಯನಿರ್ವಹಿಸುತ್ತಿರುವ ವೈಟ್ ಕಾಲರ್ ಭಯೋತ್ಪಾದಕ ಜಾಲದ ಕುರಿತು ತನಿಖೆ ತೀವ್ರಗೊಳಿಸಲಾಗಿದ್ದು, ಹರಿಯಾಣದ ಮೆವಾತ್ ಮೂಲದ ಧರ್ಮ ಬೋಧಕ ಮೌಲ್ವಿ ಇಶ್ತಿಯಾಕ್ನನ್ನು ವಶಕ್ಕೆ ಪಡೆಯಲಾಗಿದೆ. </p><p>ಆತ ಫರೀದಾಬಾದ್ನ ಅಲ್ ಫಲಾಹ್ ವಿಶ್ವವಿದ್ಯಾಲಯದ ಆವರಣದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಆತನ ಮನೆಯಿಂದಲೇ ಪೊಲೀಸರು 2,500 ಕೆ.ಜಿಗೂ ಹೆಚ್ಚು ಅಮೋನಿಯಂ ನೈಟ್ರೇಟ್, ಪೊಟ್ಯಾಷಿಯಂ ಕ್ಲೋರೆಟ್ ಮತ್ತು ಸಲ್ಫರ್ ವಶಪಡಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. </p><p>ಪ್ರಕರಣ ಸಂಬಂಧ ಮೌಲ್ವಿ ಇಶ್ತಿಯಾಕ್ನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಬಂಧನಕ್ಕೊಳಗಾಗಲಿರುವ ಒಂಬತ್ತನೇ ಆರೋಪಿ ಎನಿಸಲಿದ್ದಾರೆ. </p><p>ನಿಷೇಧಿತ ಜೈಶ್–ಎ–ಮೊಹಮ್ಮದ್ (ಜೆಇಎಂ) ಮತ್ತು ಅನ್ಸರ್ ಫಜ್ವತ್-ಉಲ್-ಹಿಂದ್ನ 'ವೈಟ್ ಕಾಲರ್' ಭಯೋತ್ಪಾದಕ ಜಾಲವನ್ನು ಭೇದಿಸಲು ನವೆಂಬರ್ 10ರಂದು ಹರಿಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಪೊಲೀಸರು ದಾಳಿ ನಡೆಸಿದ್ದರು. </p><p>ನವದೆಹಲಿಯ ಕೆಂಪು ಕೋಟೆಯಲ್ಲಿ ಸೋಮವಾರ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 12 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ಸ್ಫೋಟದಲ್ಲಿ ದಕ್ಷಿಣ ಕಾಶ್ಮೀರದ ಪುಲ್ವಾಮಾದ ವೈದ್ಯ ಡಾ. ಉಮರ್ ನಬಿ (34) ಎಂಬಾತ ಪ್ರಮುಖ ಶಂಕಿತ ಆರೋಪಿಯಾಗಿದ್ದಾನೆ. ಆತ ಫರೀದಾಬಾದ್ನಲ್ಲಿ ಪತ್ತೆಯಾದ ಭಯೋತ್ಪಾದಕರ ಜಾಲದೊಂದಿಗೆ ಸಂಪರ್ಕ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. </p>.Delhi Blast: ಘಟನಾ ಸ್ಥಳದಿಂದ 2 ಕಾರ್ಟ್ರಿಡ್ಜ್, 40ಕ್ಕೂ ಅಧಿಕ ಮಾದರಿ ಸಂಗ್ರಹ.'ವೈಟ್ಕಾಲರ್ ಭಯೋತ್ಪಾದನೆ': ಶಿಕ್ಷಿತ ವೃತ್ತಿಪರರ ಬಳಸಿ ಉಗ್ರ ಕೃತ್ಯಕ್ಕೆ ಪಿತೂರಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>