<p><strong>ಸಂಭಲ್:</strong> ಉತ್ತರ ಪ್ರದೇಶದ ಸಂಭಲ್ನ ಶಾಹಿ ಜಾಮಿಯಾ ಮಸೀದಿಯ ಹೊರಗಿನ ಗೋಡೆಗಳಿಗೆ ಸುಣ್ಣ ಬಳಿಯುವ ಕಾರ್ಯ ಭಾನುವಾರ ಆರಂಭವಾಗಿದೆ ಎಂದು ಮಸೀದಿಯ ವಕೀಲರೊಬ್ಬರು ತಿಳಿಸಿದ್ದಾರೆ.</p><p>ಮಸೀದಿಗೆ ಸುಣ್ಣ ಬಳಿಯುವ ಕಾರ್ಯವನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಮಾರ್ಚ್ 12 ರಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶನ ನೀಡಿತ್ತು.</p>.ಸಂಭಲ್ | ಬಾವಿ ವಿವಾದ: ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶ.<p>ಹೈಕೋರ್ಟ್ ಆದೇಶದ ಬಳಿಕ,ಮಾರ್ಚ್ 13 ರಂದು ಪುರಾತತ್ವ ಇಲಾಖೆಯು ಮೌಲ್ಯಮಾಪನ ನಡೆಸಿತ್ತು. </p><p>ಸಂಭಲ್ನಲ್ಲಿರುವ ಶಾಹಿ ಜಾಮಾ ಮಸೀದಿಯ ಹೊರಗಿನ ಗೋಡೆಗಳಿಗೆ ಸುಣ್ಣ ಬಳಿಯುವ ಕಾರ್ಯ ಭಾನುವಾರ ಪ್ರಾರಂಭವಾಗಿದೆ ಎಂದು ಸಂಭಲ್ ಜಿಲ್ಲಾ ನ್ಯಾಯಾಲಯದಲ್ಲಿ ಮಸೀದಿ ಪರ ವಕೀಲ ಶಕೀಲ್ ವಾರ್ಸಿ ತಿಳಿಸಿದ್ದಾರೆ.</p><p>ಕಳೆದ ವರ್ಷ ನವೆಂಬರ್ 24ರಂದು ಮೊಘಲ್ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ವೇಳೆ ಗಲಭೆ ಭುಗಿಲೆದ್ದು, ಸಂಭಲ್ ಉದ್ವಿಗ್ನಗೊಂಡಿತ್ತು. ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದರು. ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದರು.</p>.Fact Check: ಸಂಭಲ್ ಮಸೀದಿಯಲ್ಲಿ ವಿಷ್ಣು ವಿಗ್ರಹ ಪತ್ತೆಯಾಗಿದೆ ಎಂಬುದು ಸುಳ್ಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂಭಲ್:</strong> ಉತ್ತರ ಪ್ರದೇಶದ ಸಂಭಲ್ನ ಶಾಹಿ ಜಾಮಿಯಾ ಮಸೀದಿಯ ಹೊರಗಿನ ಗೋಡೆಗಳಿಗೆ ಸುಣ್ಣ ಬಳಿಯುವ ಕಾರ್ಯ ಭಾನುವಾರ ಆರಂಭವಾಗಿದೆ ಎಂದು ಮಸೀದಿಯ ವಕೀಲರೊಬ್ಬರು ತಿಳಿಸಿದ್ದಾರೆ.</p><p>ಮಸೀದಿಗೆ ಸುಣ್ಣ ಬಳಿಯುವ ಕಾರ್ಯವನ್ನು ಒಂದು ವಾರದೊಳಗೆ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಮಾರ್ಚ್ 12 ರಂದು ಅಲಹಾಬಾದ್ ಹೈಕೋರ್ಟ್ ನಿರ್ದೇಶನ ನೀಡಿತ್ತು.</p>.ಸಂಭಲ್ | ಬಾವಿ ವಿವಾದ: ಯಥಾಸ್ಥಿತಿಗೆ ಸುಪ್ರೀಂ ಕೋರ್ಟ್ ಆದೇಶ.<p>ಹೈಕೋರ್ಟ್ ಆದೇಶದ ಬಳಿಕ,ಮಾರ್ಚ್ 13 ರಂದು ಪುರಾತತ್ವ ಇಲಾಖೆಯು ಮೌಲ್ಯಮಾಪನ ನಡೆಸಿತ್ತು. </p><p>ಸಂಭಲ್ನಲ್ಲಿರುವ ಶಾಹಿ ಜಾಮಾ ಮಸೀದಿಯ ಹೊರಗಿನ ಗೋಡೆಗಳಿಗೆ ಸುಣ್ಣ ಬಳಿಯುವ ಕಾರ್ಯ ಭಾನುವಾರ ಪ್ರಾರಂಭವಾಗಿದೆ ಎಂದು ಸಂಭಲ್ ಜಿಲ್ಲಾ ನ್ಯಾಯಾಲಯದಲ್ಲಿ ಮಸೀದಿ ಪರ ವಕೀಲ ಶಕೀಲ್ ವಾರ್ಸಿ ತಿಳಿಸಿದ್ದಾರೆ.</p><p>ಕಳೆದ ವರ್ಷ ನವೆಂಬರ್ 24ರಂದು ಮೊಘಲ್ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯ ವೇಳೆ ಗಲಭೆ ಭುಗಿಲೆದ್ದು, ಸಂಭಲ್ ಉದ್ವಿಗ್ನಗೊಂಡಿತ್ತು. ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದರು. ಪೊಲೀಸ್ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದರು.</p>.Fact Check: ಸಂಭಲ್ ಮಸೀದಿಯಲ್ಲಿ ವಿಷ್ಣು ವಿಗ್ರಹ ಪತ್ತೆಯಾಗಿದೆ ಎಂಬುದು ಸುಳ್ಳು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>