<p class="title"><strong>ನವದೆಹಲಿ:</strong> ‘ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರ ಕೋಮುಭಾವನೆ ಕೆರಳಿಸುವಂತಹ ಹೇಳಿಕೆ ಬಗ್ಗೆ ಉದಾರವಾದಿಗಳು ಎಂದು ಕರೆದುಕೊಳ್ಳುವವರು ಮೌನವಾಗಿ ಇರುವುದೇಕೆ’ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ ಪ್ರಶ್ನಿಸಿದ್ದಾರೆ.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/stories/national/aimim-leader-waris-pathan-hate-speech-triggers-backlash-from-bjp-706932.html" target="_blank">ವಾರಿಸ್ ಪಠಾಣ್ನ ಬೆದರಿಕೆಗಳು ಭಾರತದಲ್ಲಿ ನಡೆಯುವುದಿಲ್ಲ–ಬಿಜೆಪಿ ಟ್ವೀಟ್</a></p>.<p class="title">‘ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿಕಲಬುರ್ಗಿಯಲ್ಲಿಫೆಬ್ರುವರಿ 16ರಂದು ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿತ್ತು. ಈ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ವಾರಿಸ್, ‘ಇತರ 100 ಕೋಟಿ ಜನರ ಮೇಲೆ ಪ್ರಾಬಲ್ಯ ಸಾಧಿಸಲು 15 ಕೋಟಿಯಷ್ಟಿರುವ ಮುಸ್ಲಿಮರು ಸಾಕು’ ಎಂದು ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹೇಳಿಕೆ ಇರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.</p>.<p class="title">‘ಸಿಎಎ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿಂದಿನ ಸಂಚನ್ನು ಈ ಹೇಳಿಕೆ ಬಹಿರಂಗಪಡಿಸಿದೆ. ಶಾಹೀನ್ ಬಾಗ್ನ ರಸ್ತೆಗಳಲ್ಲಿ ಕುಳಿತಿರುವ ಮಹಿಳೆಯರನ್ನು ಇವರು ಗುರಾಣಿಯಂತೆ ಬಳಸಿಕೊಳ್ಳುತ್ತಿದ್ದಾರೆ. ಈ ಮೂಲಕ ಕೋಮುದ್ವೇಷವನ್ನು ಹರಡುತ್ತಿದ್ದಾರೆ’ ಎಂದು ಪಾತ್ರಾ ಆರೋಪಿಸಿದ್ದಾರೆ.</p>.<p class="title">ವಾರಿಸ್ ಹೇಳಿಕೆ ವೈರಲ್ ಆಗುತ್ತಿರುವ ಬೆನ್ನಲ್ಲೇ, ವಾರಿಸ್ ಅವರು ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಜತೆ ಇರುವ ಚಿತ್ರಗಳೂ ವೈರಲ್ ಆಗುತ್ತಿವೆ. ವಾರಿಸ್ ಹೇಳಿಕೆ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong> ‘ಎಐಎಂಐಎಂ ನಾಯಕ ವಾರಿಸ್ ಪಠಾಣ್ ಅವರ ಕೋಮುಭಾವನೆ ಕೆರಳಿಸುವಂತಹ ಹೇಳಿಕೆ ಬಗ್ಗೆ ಉದಾರವಾದಿಗಳು ಎಂದು ಕರೆದುಕೊಳ್ಳುವವರು ಮೌನವಾಗಿ ಇರುವುದೇಕೆ’ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರಾ ಪ್ರಶ್ನಿಸಿದ್ದಾರೆ.</p>.<p class="title"><strong>ಇದನ್ನೂ ಓದಿ:</strong><a href="https://www.prajavani.net/stories/national/aimim-leader-waris-pathan-hate-speech-triggers-backlash-from-bjp-706932.html" target="_blank">ವಾರಿಸ್ ಪಠಾಣ್ನ ಬೆದರಿಕೆಗಳು ಭಾರತದಲ್ಲಿ ನಡೆಯುವುದಿಲ್ಲ–ಬಿಜೆಪಿ ಟ್ವೀಟ್</a></p>.<p class="title">‘ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿಕಲಬುರ್ಗಿಯಲ್ಲಿಫೆಬ್ರುವರಿ 16ರಂದು ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿತ್ತು. ಈ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದ ವಾರಿಸ್, ‘ಇತರ 100 ಕೋಟಿ ಜನರ ಮೇಲೆ ಪ್ರಾಬಲ್ಯ ಸಾಧಿಸಲು 15 ಕೋಟಿಯಷ್ಟಿರುವ ಮುಸ್ಲಿಮರು ಸಾಕು’ ಎಂದು ಹೇಳಿದ್ದರು. ಈ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹೇಳಿಕೆ ಇರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.</p>.<p class="title">‘ಸಿಎಎ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿಂದಿನ ಸಂಚನ್ನು ಈ ಹೇಳಿಕೆ ಬಹಿರಂಗಪಡಿಸಿದೆ. ಶಾಹೀನ್ ಬಾಗ್ನ ರಸ್ತೆಗಳಲ್ಲಿ ಕುಳಿತಿರುವ ಮಹಿಳೆಯರನ್ನು ಇವರು ಗುರಾಣಿಯಂತೆ ಬಳಸಿಕೊಳ್ಳುತ್ತಿದ್ದಾರೆ. ಈ ಮೂಲಕ ಕೋಮುದ್ವೇಷವನ್ನು ಹರಡುತ್ತಿದ್ದಾರೆ’ ಎಂದು ಪಾತ್ರಾ ಆರೋಪಿಸಿದ್ದಾರೆ.</p>.<p class="title">ವಾರಿಸ್ ಹೇಳಿಕೆ ವೈರಲ್ ಆಗುತ್ತಿರುವ ಬೆನ್ನಲ್ಲೇ, ವಾರಿಸ್ ಅವರು ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಜತೆ ಇರುವ ಚಿತ್ರಗಳೂ ವೈರಲ್ ಆಗುತ್ತಿವೆ. ವಾರಿಸ್ ಹೇಳಿಕೆ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>