<p class="title"><strong>ಮುಂಬೈ</strong>: ಗುಜರಾತ್ ರಾಜ್ಯ ಅಭಿವೃದ್ಧಿ ಪಥದಲ್ಲಿಯೇ ಸಾಗುತ್ತಿದ್ದರೂ ಅಲ್ಲಿನ ಮುಖ್ಯಮಂತ್ರಿಯನ್ನು ಬದಲಿಸಿ, ಪ್ರಥಮ ಬಾರಿಗೆ ಶಾಸಕರಾಗಿದ್ದ ಭೂಪೇಂದ್ರ ಪಟೇಲ್ರನ್ನು ಸಿ.ಎಂ ಆಗಿ ನೇಮಿಸುವ ಔಚಿತ್ಯವೇನಿತ್ತು ಎಂದು ಶಿವಸೇನಾ ಪ್ರಶ್ನಿಸಿದೆ.</p>.<p>ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಈ ಕುರಿತು ಬರೆದಿದೆ. ‘ಅಭಿವೃದ್ಧಿ ಮತ್ತು ಆಡಳಿತಕ್ಕಾಗಿ ಬಿಂಬಿಸಲಾಗುತ್ತಿದ್ದ ಗುಜರಾತ್ ಮಾದರಿಯ ಬಲೂನು ಈಗ ಸಿಡಿದಿದೆ’ ಎಂದೂ ತರಾಟೆಗೆ ತೆಗೆದುಕೊಂಡಿದೆ.</p>.<p class="title">ವಿಜಯ್ ರೂಪಾಣಿ ಮುಖ್ಯಮಂತ್ರಿ ಆಗಿದ್ದಾಗ ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಗುಜರಾತ್ನಲ್ಲಿ ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಕುಸಿದಿದ್ದು, ಅಲ್ಲಿನ ಜನರು ಈ ಬಗ್ಗೆ ಆಕ್ರೋಶಗೊಂಡಿದ್ದರು ಎಂದು ಟೀಕಿಸಿದೆ. ಅಲ್ಲದೆ, ಪಟೇಲ್ ಪ್ರತಿನಿಧಿಸುವ ಪ್ರಭಾವಿ ಪಾಟಿದಾರ ಸಮುದಾಯವು ಪಕ್ಷದ ಜೊತೆಗೆ ಮುನಿಸಿಕೊಂಡಿದೆ ಎಂಬುದನ್ನು ಬಿಜೆಪಿ ಅರಿತಿತ್ತು ಎಂದು ಟೀಕಿಸಿದೆ.</p>.<p class="title">ಇದೇ ಬೆಳವಣಿಗೆಯು ಕಾಂಗ್ರೆಸ್ ಪಕ್ಷದಲ್ಲಿ ಆಗಿದ್ದರೆ ಅದನ್ನು ನಾವು ಪ್ರಜಾಪ್ರಭುತ್ವ ಎಂದು ಕರೆಯಬಹುದಿತ್ತು ಎಂದು ಶಿವಸೇನಾ ವ್ಯಂಗ್ಯವಾಗಿ ಹೇಳಿದೆ. ಒಂದು ವೇಳೆ ಗುಜರಾತ್ ನಿಜವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದರೆ ರಾತ್ರೋರಾತ್ರಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಅಗತ್ಯವೇನಿತ್ತು ಎಂದು ಖಾರವಾಗಿ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮುಂಬೈ</strong>: ಗುಜರಾತ್ ರಾಜ್ಯ ಅಭಿವೃದ್ಧಿ ಪಥದಲ್ಲಿಯೇ ಸಾಗುತ್ತಿದ್ದರೂ ಅಲ್ಲಿನ ಮುಖ್ಯಮಂತ್ರಿಯನ್ನು ಬದಲಿಸಿ, ಪ್ರಥಮ ಬಾರಿಗೆ ಶಾಸಕರಾಗಿದ್ದ ಭೂಪೇಂದ್ರ ಪಟೇಲ್ರನ್ನು ಸಿ.ಎಂ ಆಗಿ ನೇಮಿಸುವ ಔಚಿತ್ಯವೇನಿತ್ತು ಎಂದು ಶಿವಸೇನಾ ಪ್ರಶ್ನಿಸಿದೆ.</p>.<p>ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಈ ಕುರಿತು ಬರೆದಿದೆ. ‘ಅಭಿವೃದ್ಧಿ ಮತ್ತು ಆಡಳಿತಕ್ಕಾಗಿ ಬಿಂಬಿಸಲಾಗುತ್ತಿದ್ದ ಗುಜರಾತ್ ಮಾದರಿಯ ಬಲೂನು ಈಗ ಸಿಡಿದಿದೆ’ ಎಂದೂ ತರಾಟೆಗೆ ತೆಗೆದುಕೊಂಡಿದೆ.</p>.<p class="title">ವಿಜಯ್ ರೂಪಾಣಿ ಮುಖ್ಯಮಂತ್ರಿ ಆಗಿದ್ದಾಗ ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಗುಜರಾತ್ನಲ್ಲಿ ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಕುಸಿದಿದ್ದು, ಅಲ್ಲಿನ ಜನರು ಈ ಬಗ್ಗೆ ಆಕ್ರೋಶಗೊಂಡಿದ್ದರು ಎಂದು ಟೀಕಿಸಿದೆ. ಅಲ್ಲದೆ, ಪಟೇಲ್ ಪ್ರತಿನಿಧಿಸುವ ಪ್ರಭಾವಿ ಪಾಟಿದಾರ ಸಮುದಾಯವು ಪಕ್ಷದ ಜೊತೆಗೆ ಮುನಿಸಿಕೊಂಡಿದೆ ಎಂಬುದನ್ನು ಬಿಜೆಪಿ ಅರಿತಿತ್ತು ಎಂದು ಟೀಕಿಸಿದೆ.</p>.<p class="title">ಇದೇ ಬೆಳವಣಿಗೆಯು ಕಾಂಗ್ರೆಸ್ ಪಕ್ಷದಲ್ಲಿ ಆಗಿದ್ದರೆ ಅದನ್ನು ನಾವು ಪ್ರಜಾಪ್ರಭುತ್ವ ಎಂದು ಕರೆಯಬಹುದಿತ್ತು ಎಂದು ಶಿವಸೇನಾ ವ್ಯಂಗ್ಯವಾಗಿ ಹೇಳಿದೆ. ಒಂದು ವೇಳೆ ಗುಜರಾತ್ ನಿಜವಾಗಿ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದ್ದರೆ ರಾತ್ರೋರಾತ್ರಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವ ಅಗತ್ಯವೇನಿತ್ತು ಎಂದು ಖಾರವಾಗಿ ಪ್ರಶ್ನಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>