<p class="title"><strong>ನವದೆಹಲಿ: </strong>ಜಿಎಸ್ಟಿ ಪರಿಹಾರಕ್ಕೆ ಸಂಬಂಧಿಸಿ ಸಾಲ ಪಡೆಯುವ ಕೇಂದ್ರದ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿರುವ ವಿವಿಧ ರಾಜ್ಯ ಸರ್ಕಾರಗಳ ನಿಲುವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p class="title">‘ನಿಮ್ಮಗಳ ಭವಿಷ್ಯವನ್ನು ನಿಮ್ಮ ಮುಖ್ಯಮಂತ್ರಿಯು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಏಕೆ ‘ಒತ್ತೆ’ ಇಡುತ್ತಿದ್ದಾರೆ?’ ಎಂದೂ ಅವರು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿರುವ ರಾಜ್ಯಗಳ ಜನತೆಗೆ ಪ್ರಶ್ನಿಸಿದ್ದಾರೆ.</p>.<p class="title">ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಜಿಎಸ್ಟಿಗೆ ಸಂಬಂಧಿಸಿದಂತೆ ಐದು ಅಂಶಗಳನ್ನು ಉಲ್ಲೇಖಿಸಿ, ಜನರಿಗೆ ಮೇಲಿನಂತೆ ಪ್ರಶ್ನೆ ಮಾಡಿದ್ದಾರೆ.</p>.<p class="title">1. ಜಿಎಸ್ಟಿ ಆದಾಯ ಕೊಡಲಾಗುವುದು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಭರವಸೆ ನೀಡಿತ್ತು.</p>.<p class="title">2. ಪ್ರಧಾನಿ ಮತ್ತು ಕೋವಿಡ್ನಿಂದಾಗಿ ಆರ್ಥಿಕತೆ ಅಸ್ತವ್ಯಸ್ತಗೊಂಡಿತು.</p>.<p class="title">3. ಪ್ರಧಾನಿಯಿಂದ ಕಾರ್ಪೊರೇಟ್ ಕಂಪನಿಗಳಿಗೆ ₹ 1.4 ಲಕ್ಷ ಕೋಟಿ ತೆರಿಗೆ ಕಡಿತದ ನೆರವು ಮತ್ತು ತಮಗಾಗಿ ₹ 8,400 ಕೋಟಿ ವೆಚ್ಚದಲ್ಲಿ ಎರಡು ವಿಮಾನಗಳ ಖರೀದಿ.</p>.<p class="title">4) ರಾಜ್ಯಗಳಿಗೆ ಕೊಡಲು ಕೇಂದ್ರದ ಬಳಿ ಹಣವಿಲ್ಲ.</p>.<p class="title">5) ಸಾಲ ಪಡೆಯಲು ರಾಜ್ಯಗಳಿಗೆ ಹಣಕಾಸು ಸಚಿವರ ಸಲಹೆ‘ ಎಂಬ ಅಂಶಗಳನ್ನು ರಾಹುಲ್ ಗಾಂಧಿ ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಜಿಎಸ್ಟಿ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು, ಬಹುತೇಕ ಬಿಜೆಪಿ ಆಡಳಿತವಿರುವ ಸುಮಾರು 21 ರಾಜ್ಯಗಳು ಬೆಂಬಲಿಸಿದ್ದು, ಪರಿಹಾರದ ಕೊರತೆ ನೀಗಿಕೊಳ್ಳಲು ₹ 1.10 ಲಕ್ಷ ಕೋಟಿ ಸಾಲ ಪಡೆಯಲು ಮುಂದಾಗಿವೆ.</p>.<p>ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಪರಿಹಾರ ಕೊರತೆಯನ್ನು ಭರಿಸುವ ಕ್ರಮವಾಗಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ₹ 20,000 ಕೋಟಿ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ಜಿಎಸ್ಟಿ ಪರಿಹಾರಕ್ಕೆ ಸಂಬಂಧಿಸಿ ಸಾಲ ಪಡೆಯುವ ಕೇಂದ್ರದ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸಿರುವ ವಿವಿಧ ರಾಜ್ಯ ಸರ್ಕಾರಗಳ ನಿಲುವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ.</p>.<p class="title">‘ನಿಮ್ಮಗಳ ಭವಿಷ್ಯವನ್ನು ನಿಮ್ಮ ಮುಖ್ಯಮಂತ್ರಿಯು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಏಕೆ ‘ಒತ್ತೆ’ ಇಡುತ್ತಿದ್ದಾರೆ?’ ಎಂದೂ ಅವರು ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ಒಪ್ಪಿರುವ ರಾಜ್ಯಗಳ ಜನತೆಗೆ ಪ್ರಶ್ನಿಸಿದ್ದಾರೆ.</p>.<p class="title">ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಜಿಎಸ್ಟಿಗೆ ಸಂಬಂಧಿಸಿದಂತೆ ಐದು ಅಂಶಗಳನ್ನು ಉಲ್ಲೇಖಿಸಿ, ಜನರಿಗೆ ಮೇಲಿನಂತೆ ಪ್ರಶ್ನೆ ಮಾಡಿದ್ದಾರೆ.</p>.<p class="title">1. ಜಿಎಸ್ಟಿ ಆದಾಯ ಕೊಡಲಾಗುವುದು ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಭರವಸೆ ನೀಡಿತ್ತು.</p>.<p class="title">2. ಪ್ರಧಾನಿ ಮತ್ತು ಕೋವಿಡ್ನಿಂದಾಗಿ ಆರ್ಥಿಕತೆ ಅಸ್ತವ್ಯಸ್ತಗೊಂಡಿತು.</p>.<p class="title">3. ಪ್ರಧಾನಿಯಿಂದ ಕಾರ್ಪೊರೇಟ್ ಕಂಪನಿಗಳಿಗೆ ₹ 1.4 ಲಕ್ಷ ಕೋಟಿ ತೆರಿಗೆ ಕಡಿತದ ನೆರವು ಮತ್ತು ತಮಗಾಗಿ ₹ 8,400 ಕೋಟಿ ವೆಚ್ಚದಲ್ಲಿ ಎರಡು ವಿಮಾನಗಳ ಖರೀದಿ.</p>.<p class="title">4) ರಾಜ್ಯಗಳಿಗೆ ಕೊಡಲು ಕೇಂದ್ರದ ಬಳಿ ಹಣವಿಲ್ಲ.</p>.<p class="title">5) ಸಾಲ ಪಡೆಯಲು ರಾಜ್ಯಗಳಿಗೆ ಹಣಕಾಸು ಸಚಿವರ ಸಲಹೆ‘ ಎಂಬ ಅಂಶಗಳನ್ನು ರಾಹುಲ್ ಗಾಂಧಿ ತಮ್ಮ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಜಿಎಸ್ಟಿ ಪರಿಹಾರ ಕುರಿತಂತೆ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು, ಬಹುತೇಕ ಬಿಜೆಪಿ ಆಡಳಿತವಿರುವ ಸುಮಾರು 21 ರಾಜ್ಯಗಳು ಬೆಂಬಲಿಸಿದ್ದು, ಪರಿಹಾರದ ಕೊರತೆ ನೀಗಿಕೊಳ್ಳಲು ₹ 1.10 ಲಕ್ಷ ಕೋಟಿ ಸಾಲ ಪಡೆಯಲು ಮುಂದಾಗಿವೆ.</p>.<p>ಪ್ರಸಕ್ತ ಹಣಕಾಸು ವರ್ಷಕ್ಕೆ ಸಂಬಂಧಿಸಿದಂತೆ ಪರಿಹಾರ ಕೊರತೆಯನ್ನು ಭರಿಸುವ ಕ್ರಮವಾಗಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ ₹ 20,000 ಕೋಟಿ ಬಿಡುಗಡೆ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>