<p><strong>ಮುಂಬೈ</strong>: ‘ತೌತೆ’ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಆದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ವೈಮಾನಿಕ ಸಮೀಕ್ಷೆ ನಡೆಸುತ್ತಿಲ್ಲ’ ಎಂದು ಎನ್ಸಿಪಿಯು ಬುಧವಾರ ಪ್ರಶ್ನಿಸಿದೆ.</p>.<p>‘ಪ್ರಧಾನಿ ಮೋದಿ ಅವರು ಬುಧವಾರ ಗುಜರಾತ್ ಮತ್ತು ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಈ ರೀತಿಯ ಸಮೀಕ್ಷೆಯನ್ನು ನಡೆಸಿಲ್ಲ. ಇದು ತಾರತಮ್ಯ ಅಲ್ಲವೇ?’ ಎಂದು ಎನ್ಸಿಪಿಯ ರಾಷ್ಟ್ರೀಯ ವಕ್ತಾರ ನವಾಬ್ ಮಲೀಕ್ ಅವರು ಟ್ವೀಟ್ ಮಾಡಿದ್ದಾರೆ.</p>.<p>ತೌತೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸುವುದಕ್ಕೂ ಮುನ್ನ ಮಹಾರಾಷ್ಟ್ರದ ಕರಾವಳಿ ಭಾಗದಲ್ಲೂ ಹಾನಿಯನ್ನುಂಟು ಮಾಡಿದೆ. ಏಳು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ‘ತೌತೆ’ ಚಂಡಮಾರುತದಿಂದ ಮಹಾರಾಷ್ಟ್ರದಲ್ಲಿ ಆದ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಕೆ ವೈಮಾನಿಕ ಸಮೀಕ್ಷೆ ನಡೆಸುತ್ತಿಲ್ಲ’ ಎಂದು ಎನ್ಸಿಪಿಯು ಬುಧವಾರ ಪ್ರಶ್ನಿಸಿದೆ.</p>.<p>‘ಪ್ರಧಾನಿ ಮೋದಿ ಅವರು ಬುಧವಾರ ಗುಜರಾತ್ ಮತ್ತು ನೆರೆಯ ಕೇಂದ್ರಾಡಳಿತ ಪ್ರದೇಶ ದಿಯುವಿನ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಈ ರೀತಿಯ ಸಮೀಕ್ಷೆಯನ್ನು ನಡೆಸಿಲ್ಲ. ಇದು ತಾರತಮ್ಯ ಅಲ್ಲವೇ?’ ಎಂದು ಎನ್ಸಿಪಿಯ ರಾಷ್ಟ್ರೀಯ ವಕ್ತಾರ ನವಾಬ್ ಮಲೀಕ್ ಅವರು ಟ್ವೀಟ್ ಮಾಡಿದ್ದಾರೆ.</p>.<p>ತೌತೆ ಚಂಡಮಾರುತವು ಸೋಮವಾರ ಮಧ್ಯರಾತ್ರಿ ಗುಜರಾತ್ ಪ್ರವೇಶಿಸುವುದಕ್ಕೂ ಮುನ್ನ ಮಹಾರಾಷ್ಟ್ರದ ಕರಾವಳಿ ಭಾಗದಲ್ಲೂ ಹಾನಿಯನ್ನುಂಟು ಮಾಡಿದೆ. ಏಳು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>