<p><strong>ನವದೆಹಲಿ:</strong> ‘ಲವ್ ಜಿಹಾದ್’ಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಬರೇಲಿ ನ್ಯಾಯಾಲಯ ಮಾಡಿದ್ದ ಕೆಲ ಅವಲೋಕನಗಳನ್ನು ಅಳಿಸಿ ಹಾಕುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದತು.</p>.<p>ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು, ‘ಸಾಕ್ಷ್ಯಗಳ ಆಧಾರದ ಮೇಲೆ ಮಾಡಿದ ಅವಲೋಕನಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿತು.</p>.<p>‘ನೀವು ಯಾರು ಮತ್ತು ಈ ವಿಷಯ ನಿಮಗೆ ಹೇಗೆ ಸಂಬಂಧಿಸುತ್ತದೆ’ ಎಂದು ಪ್ರಶ್ನಿಸಿದ ಪೀಠ, ‘ಇದನ್ನು ನೀವು ಉತ್ಪ್ರೇಕ್ಷಿಸುವುದು ಸರಿಯಲ್ಲ’ ಎಂದು ಖಾರವಾಗಿ ಹೇಳಿತು.</p>.<p>ಅರ್ಜಿಯನ್ನು ಹಿಂಪಡೆಯಲು ಸಿದ್ಧರಿದ್ದೀರಾ ಎಂದು ಅರ್ಜಿದಾರರನ್ನು ಕೇಳಿದ ಪೀಠವು, ಇಲ್ಲದಿದ್ದರೆ ವಜಾಗೊಳಿಸಬೇಕಾಗುತ್ತದೆ ಎಂದಿತು. ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ಹೇಳಿದರು. ಅದಕ್ಕೆ ಪೀಠ ಅನುಮತಿ ನೀಡಿತು.</p>.<h2>ಏನಿದು ಪ್ರಕರಣ:</h2>.<p>‘ನಿರ್ದಿಷ್ಟ ಧರ್ಮವೊಂದರ ಸಮಾಜ ವಿರೋಧಿಗಳು ಜನಸಂಖ್ಯಾ ಸಮರ, ಅಂತರರಾಷ್ಟ್ರೀಯ ಪಿತೂರಿ ಮೂಲಕ ಭಾರತದಲ್ಲಿ ತಮ್ಮ ಪ್ರಾಬಲ್ಯ ಸಾಧಿಸುವುದೇ ಲವ್ ಜಿಹಾದ್ನ ಗುರಿಯಾಗಿದೆ’ ಎಂದು ಉತ್ತರ ಪ್ರದೇಶದ ಬರೇಲಿಯ ತ್ವರಿತಗತಿ ನ್ಯಾಯಾಲಯವು 2014ರ ಅಕ್ಟೋಬರ್ನಲ್ಲಿ ಹೇಳಿತ್ತು.</p>.<p>ಮೊಹಮ್ಮದ್ ಅಲಿಂ (25) ಎನ್ನುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ನ್ಯಾಯಾಧೀಶರು ಈ ಮಾತುಗಳನ್ನು ಹೇಳಿದ್ದರು.</p>.<p>ಅಲಿಂ, ತಮ್ಮ ಹೆಸರು ಆನಂದ್ ಕುಮಾರ್ ಎಂದು ಹೇಳಿಕೊಂಡು ವಿದ್ಯಾರ್ಥಿನಿಯನ್ನು ವಂಚಿಸಿದ್ದರು. ಅವರು ಆನಂದ್ ಅಲ್ಲ ಎಂಬುದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಅಲಿಂ ಈ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ಬಳಿಕ ಆಕೆಯನ್ನು ವರಿಸಿದ್ದರು. ವಿವಾಹವಾದ ಬಳಿಕ ವಿದ್ಯಾರ್ಥಿನಿಗೆ ತನ್ನ ಪತಿ ಆನಂದ್ ಅಲ್ಲ, ಅಲಿಂ ಎಂಬುದು ಮತ್ತು ಅವರು ಮುಸ್ಲಿಂ ಎಂಬುದು ಗೊತ್ತಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಲವ್ ಜಿಹಾದ್’ಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಬರೇಲಿ ನ್ಯಾಯಾಲಯ ಮಾಡಿದ್ದ ಕೆಲ ಅವಲೋಕನಗಳನ್ನು ಅಳಿಸಿ ಹಾಕುವಂತೆ ಕೋರಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತರಾಟೆಗೆ ತೆಗೆದುಕೊಂಡಿದತು.</p>.<p>ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್.ವಿ.ಎನ್. ಭಟ್ಟಿ ಅವರನ್ನೊಳಗೊಂಡ ಪೀಠವು, ‘ಸಾಕ್ಷ್ಯಗಳ ಆಧಾರದ ಮೇಲೆ ಮಾಡಿದ ಅವಲೋಕನಗಳನ್ನು ತೆಗೆದುಹಾಕಲು ಸಾಧ್ಯವಿಲ್ಲ’ ಎಂದು ಸ್ಪಷ್ಟಪಡಿಸಿತು.</p>.<p>‘ನೀವು ಯಾರು ಮತ್ತು ಈ ವಿಷಯ ನಿಮಗೆ ಹೇಗೆ ಸಂಬಂಧಿಸುತ್ತದೆ’ ಎಂದು ಪ್ರಶ್ನಿಸಿದ ಪೀಠ, ‘ಇದನ್ನು ನೀವು ಉತ್ಪ್ರೇಕ್ಷಿಸುವುದು ಸರಿಯಲ್ಲ’ ಎಂದು ಖಾರವಾಗಿ ಹೇಳಿತು.</p>.<p>ಅರ್ಜಿಯನ್ನು ಹಿಂಪಡೆಯಲು ಸಿದ್ಧರಿದ್ದೀರಾ ಎಂದು ಅರ್ಜಿದಾರರನ್ನು ಕೇಳಿದ ಪೀಠವು, ಇಲ್ಲದಿದ್ದರೆ ವಜಾಗೊಳಿಸಬೇಕಾಗುತ್ತದೆ ಎಂದಿತು. ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ಹೇಳಿದರು. ಅದಕ್ಕೆ ಪೀಠ ಅನುಮತಿ ನೀಡಿತು.</p>.<h2>ಏನಿದು ಪ್ರಕರಣ:</h2>.<p>‘ನಿರ್ದಿಷ್ಟ ಧರ್ಮವೊಂದರ ಸಮಾಜ ವಿರೋಧಿಗಳು ಜನಸಂಖ್ಯಾ ಸಮರ, ಅಂತರರಾಷ್ಟ್ರೀಯ ಪಿತೂರಿ ಮೂಲಕ ಭಾರತದಲ್ಲಿ ತಮ್ಮ ಪ್ರಾಬಲ್ಯ ಸಾಧಿಸುವುದೇ ಲವ್ ಜಿಹಾದ್ನ ಗುರಿಯಾಗಿದೆ’ ಎಂದು ಉತ್ತರ ಪ್ರದೇಶದ ಬರೇಲಿಯ ತ್ವರಿತಗತಿ ನ್ಯಾಯಾಲಯವು 2014ರ ಅಕ್ಟೋಬರ್ನಲ್ಲಿ ಹೇಳಿತ್ತು.</p>.<p>ಮೊಹಮ್ಮದ್ ಅಲಿಂ (25) ಎನ್ನುವವರಿಗೆ ಜೀವಾವಧಿ ಶಿಕ್ಷೆ ವಿಧಿಸುವ ಸಂದರ್ಭದಲ್ಲಿ ನ್ಯಾಯಾಧೀಶರು ಈ ಮಾತುಗಳನ್ನು ಹೇಳಿದ್ದರು.</p>.<p>ಅಲಿಂ, ತಮ್ಮ ಹೆಸರು ಆನಂದ್ ಕುಮಾರ್ ಎಂದು ಹೇಳಿಕೊಂಡು ವಿದ್ಯಾರ್ಥಿನಿಯನ್ನು ವಂಚಿಸಿದ್ದರು. ಅವರು ಆನಂದ್ ಅಲ್ಲ ಎಂಬುದು ಗೊತ್ತಾದ ನಂತರ ವಿದ್ಯಾರ್ಥಿನಿ ದೂರು ದಾಖಲಿಸಿದ್ದರು. ಕೋಚಿಂಗ್ ಕೇಂದ್ರವೊಂದರಲ್ಲಿ ಅಲಿಂ ಈ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ್ದರು. ಬಳಿಕ ಆಕೆಯನ್ನು ವರಿಸಿದ್ದರು. ವಿವಾಹವಾದ ಬಳಿಕ ವಿದ್ಯಾರ್ಥಿನಿಗೆ ತನ್ನ ಪತಿ ಆನಂದ್ ಅಲ್ಲ, ಅಲಿಂ ಎಂಬುದು ಮತ್ತು ಅವರು ಮುಸ್ಲಿಂ ಎಂಬುದು ಗೊತ್ತಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>