<p><strong>ಕಾಕಿನಾಡ:</strong> ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ಸಂಬಂಧಿಸಿದಂತೆ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ನಡುವಣ ವಾಗ್ವಾದಕ್ಕೆ ಪ್ರತಿಕ್ರಿಯೆ ನೀಡಿರುವ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, 'ದೇಶಕ್ಕೆ ಕೇವಲ ಎರಡಲ್ಲ, ಬಹುಭಾಷೆಗಳ ಅಗತ್ಯವಿದೆ' ಎಂದು ಹೇಳಿದ್ದಾರೆ. </p><p>'ದೇಶದ ಭಾಷಾ ವೈವಿಧ್ಯತೆಯನ್ನು ಉಳಿಸಿಕೊಳ್ಳುವ ಅಗತ್ಯವಿದೆ' ಎಂದು ಅವರು ಕೇಂದ್ರ ಸರ್ಕಾರಕ್ಕೆ ಬಂಬಲ ಸೂಚಿಸಿದ್ದಾರೆ. </p><p>ಜನಸೇನಾ ಪಕ್ಷದ 12ನೇ ಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ದೇಶಕ್ಕೆ ತಮಿಳು ಸೇರಿದಂತೆ ಬಹುಭಾಷೆಗಳ ಅಗತ್ಯವಿದೆ. ಆ ಮೂಲಕ ಏಕತೆ ಹಾಗೂ ಪ್ರೀತಿಯನ್ನು ಪಸರಿಸಬಹುದಾಗಿದೆ' ಎಂದು ಹೇಳಿದ್ದಾರೆ. </p><p>ತ್ರಿಭಾಷಾ ಸೂತ್ರವನ್ನು ಖಂಡಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ್ದರು. </p><p>ಈ ಸಂಬಂಧ ಡಿಎಂಕೆ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಪವಣ್ ಕಲ್ಯಾಣ್, 'ಅವರು ಹಿಂದಿ ಭಾಷೆಯನ್ನು ವಿರೋಧಿಸುತ್ತಾರೆ. ಆದರೆ ಹಣಕಾಸಿನ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಡಬ್ಬಿಂಗ್ ಮಾಡುತ್ತಾರೆ. ಅವರಿಗೆ ಬಾಲಿವುಡ್ನಿಂದ ದುಡ್ಡು ಬೇಕಿದೆ. ಇದೆಂಥಹ ನ್ಯಾಯ' ಎಂದು ಪ್ರಶ್ನಿಸಿದ್ದಾರೆ.</p><p>'ವಿವಿಧತೆಯಲ್ಲಿ ಏಕತೆಯೇ ನನ್ನ ಸಿದ್ಧಾಂತ ಎಂದಿರುವ ಕಲ್ಯಾಣ್, ಸನಾತನ ಧರ್ಮ ನನ್ನ ರಕ್ತದಲ್ಲಿ ಅಡಗಿದೆ' ಎಂದು ಹೇಳಿದ್ದಾರೆ. </p><p>'ನಿಜವಾದ ಮನೋಭಾವನೆಯಿಂದ ಜಾತ್ಯತೀತತೆಯನ್ನು ಆಳವಡಿಸಿಕೊಳ್ಳಬೇಕು. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಲ. ದೇಶಕ್ಕಾಗಿ ಸಾಯಲು ಸಿದ್ಧವಿದ್ದೇನೆ' ಎಂದು ಅವರು ಹೇಳಿದ್ದಾರೆ. </p>.ಎಐ ಯುಗದಲ್ಲೂ ಶಾಲೆಗಳಲ್ಲಿ ತ್ರಿಭಾಷಾ ಕಲಿಕಾ ಸೂತ್ರ ಅಪ್ರಸ್ತುತ: ಸ್ಟಾಲಿನ್.ಬಜೆಟ್ ಲಾಂಛನದಲ್ಲಿ ‘₹‘ ಬದಲು ತಮಿಳು ಅಕ್ಷರ ‘ರೂ’ ಬಳಸಿದ ಸ್ಟಾಲಿನ್ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಕಿನಾಡ:</strong> ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ಸಂಬಂಧಿಸಿದಂತೆ ತಮಿಳುನಾಡು ಹಾಗೂ ಕೇಂದ್ರ ಸರ್ಕಾರದ ನಡುವಣ ವಾಗ್ವಾದಕ್ಕೆ ಪ್ರತಿಕ್ರಿಯೆ ನೀಡಿರುವ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, 'ದೇಶಕ್ಕೆ ಕೇವಲ ಎರಡಲ್ಲ, ಬಹುಭಾಷೆಗಳ ಅಗತ್ಯವಿದೆ' ಎಂದು ಹೇಳಿದ್ದಾರೆ. </p><p>'ದೇಶದ ಭಾಷಾ ವೈವಿಧ್ಯತೆಯನ್ನು ಉಳಿಸಿಕೊಳ್ಳುವ ಅಗತ್ಯವಿದೆ' ಎಂದು ಅವರು ಕೇಂದ್ರ ಸರ್ಕಾರಕ್ಕೆ ಬಂಬಲ ಸೂಚಿಸಿದ್ದಾರೆ. </p><p>ಜನಸೇನಾ ಪಕ್ಷದ 12ನೇ ಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 'ದೇಶಕ್ಕೆ ತಮಿಳು ಸೇರಿದಂತೆ ಬಹುಭಾಷೆಗಳ ಅಗತ್ಯವಿದೆ. ಆ ಮೂಲಕ ಏಕತೆ ಹಾಗೂ ಪ್ರೀತಿಯನ್ನು ಪಸರಿಸಬಹುದಾಗಿದೆ' ಎಂದು ಹೇಳಿದ್ದಾರೆ. </p><p>ತ್ರಿಭಾಷಾ ಸೂತ್ರವನ್ನು ಖಂಡಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಹಿಂದಿ ಹೇರಿಕೆ ವಿರುದ್ಧ ಧ್ವನಿ ಎತ್ತಿದ್ದರು. </p><p>ಈ ಸಂಬಂಧ ಡಿಎಂಕೆ ನಾಯಕರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಪವಣ್ ಕಲ್ಯಾಣ್, 'ಅವರು ಹಿಂದಿ ಭಾಷೆಯನ್ನು ವಿರೋಧಿಸುತ್ತಾರೆ. ಆದರೆ ಹಣಕಾಸಿನ ಲಾಭಕ್ಕಾಗಿ ತಮಿಳು ಚಲನಚಿತ್ರಗಳನ್ನು ಹಿಂದಿಯಲ್ಲಿ ಡಬ್ಬಿಂಗ್ ಮಾಡುತ್ತಾರೆ. ಅವರಿಗೆ ಬಾಲಿವುಡ್ನಿಂದ ದುಡ್ಡು ಬೇಕಿದೆ. ಇದೆಂಥಹ ನ್ಯಾಯ' ಎಂದು ಪ್ರಶ್ನಿಸಿದ್ದಾರೆ.</p><p>'ವಿವಿಧತೆಯಲ್ಲಿ ಏಕತೆಯೇ ನನ್ನ ಸಿದ್ಧಾಂತ ಎಂದಿರುವ ಕಲ್ಯಾಣ್, ಸನಾತನ ಧರ್ಮ ನನ್ನ ರಕ್ತದಲ್ಲಿ ಅಡಗಿದೆ' ಎಂದು ಹೇಳಿದ್ದಾರೆ. </p><p>'ನಿಜವಾದ ಮನೋಭಾವನೆಯಿಂದ ಜಾತ್ಯತೀತತೆಯನ್ನು ಆಳವಡಿಸಿಕೊಳ್ಳಬೇಕು. ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಲ. ದೇಶಕ್ಕಾಗಿ ಸಾಯಲು ಸಿದ್ಧವಿದ್ದೇನೆ' ಎಂದು ಅವರು ಹೇಳಿದ್ದಾರೆ. </p>.ಎಐ ಯುಗದಲ್ಲೂ ಶಾಲೆಗಳಲ್ಲಿ ತ್ರಿಭಾಷಾ ಕಲಿಕಾ ಸೂತ್ರ ಅಪ್ರಸ್ತುತ: ಸ್ಟಾಲಿನ್.ಬಜೆಟ್ ಲಾಂಛನದಲ್ಲಿ ‘₹‘ ಬದಲು ತಮಿಳು ಅಕ್ಷರ ‘ರೂ’ ಬಳಸಿದ ಸ್ಟಾಲಿನ್ ಸರ್ಕಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>