ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ರಮೇಶ್ ಕೆಲವು ತಿಂಗಳುಗಳ ಹಿಂದಷ್ಟೇ ಮದುವೆಯಾಗಿದ್ದರು. ಆದರೆ, ಮದುವೆಗೂ ಮುನ್ನವೇ ಪತ್ನಿಗೆ ಹಲವು ವರ್ಷಗಳಿಂದ ರಾಜ್ಯಸರ್ಕಾರದಿಂದ ವಿಧವಾ ವೇತನ ಬರುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೇ, ಈ ಕುರಿತು ಸರ್ಕಾರಿ ಅಧಿಕಾರಿಗಳ ವಿರುದ್ಧ ದೂರು ನೀಡಿರುವ ರಮೇಶ್, ‘ನಾನಿನ್ನೂ ಜೀವಂತವಾಗಿದ್ದೇನೆ. ಬದುಕಿರುವಾಗಲೇ ಪತ್ನಿಗೆ ವಿಧವಾ ವೇತನ ನೀಡುತ್ತಿರುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.