ದಂಪತಿಯ ಆಸ್ತಿ ವಿವಾದದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣನ್ ರಾಮಸಾಮಿ ಅವರು, ಗೃಹಿಣಿಯು ನೇರವಾಗಿ ಆರ್ಥಿಕ ಕೊಡುಗೆ ನೀಡಬೇಕಾಗಿಲ್ಲ. ಆದರೆ, ಪ್ರತಿದಿನವೂ ಮಕ್ಕಳ ಪಾಲನೆ, ಅಡುಗೆ ತಯಾರಿಕೆ, ಮನೆಯ ಸ್ವಚ್ಛತೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾಳೆ. ಕುಟುಂಬದ ಮುಖ್ಯಸ್ಥನ ಕೆಲಸಕ್ಕೆ ಯಾವುದೇ ತೊಡಕು ಎದುರಾಗದಂತೆ ಕೆಲಸ ನಿಭಾಯಿಸುತ್ತಾಳೆ. ಕುಟುಂಬ ಮತ್ತು ಮಕ್ಕಳಿಗಾಗಿ ತನ್ನ ಕನಸುಗಳನ್ನು ಬದಿಗೊತ್ತಿ ಸಮಯ ಮೀಸಲಿಡುತ್ತಾಳೆ ಎಂದು ಹೇಳಿದರು.