ಆನೆ ದಾಳಿಯಿಂದ ಸತತ ಮೂವರು ಮೃತಪಟ್ಟ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಸ್ಥಳೀಯರು ವಿವಿಧೆಡೆ ರಸ್ತೆ ತಡೆ ನಡೆಸಿದರು. ಪುಳಪಳ್ಳಿಯಲ್ಲಿ ಅರಣ್ಯ ಇಲಾಖೆಯ ವಾಹನವನ್ನು ಅಡ್ಡಗಟ್ಟಿ ಹಾನಿ ಮಾಡಿದರು. ಆನೆ ದಾಳಿಯಿಂದ ಶುಕ್ರವಾರ ಮೃತಪಟ್ಟಿದ್ದ ಪ್ರವಾಸೋದ್ಯಮ ಮಾರ್ಗದರ್ಶಿ ವಿ.ಪಿ ಪೌಲ್ ಎಂಬವರ ಶವವನ್ನು ಇಲಾಖೆಯ ವಾಹನದಲ್ಲಿ ಇಟ್ಟು ಪ್ರತಿಭಟಿಸಿದರು. ಜನರ ಜೀವ ಮತ್ತು ವಸ್ತುಗಳಿಗೆ ರಕ್ಷಣೆ ನೀಡುವಲ್ಲಿ ಇಲಾಖೆಯು ವಿಫಲವಾಗಿದೆ ಎಂದು ಆರೋಪಿಸಿದರು.