<p><strong>ನವದೆಹಲಿ</strong>: ಕಾನೂನುಗಳನ್ನು ಪಾಲಿಸದೆಯೇ ಭಾರತ ಮತ್ತು ವಿದೇಶದಿಂದ ಪ್ರಾಣಿಗಳನ್ನು ಪಡೆಯುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಗೆ ಸಹಕಾರ ನೀಡುವುದಾಗಿ ಲಯನ್ಸ್ ಫೌಂಡೇಷನ್ನ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವಂತಾರ ತಿಳಿಸಿದೆ.</p><p>ಈ ಪ್ರಕರಣದ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಎಸ್ಐಟಿ ರಚಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಪಿ.ಬಿ ವರಾಳೆ ಅವರಿದ್ದ ಪೀಠವು ವಂತಾರದ ವಿರುದ್ದದ ಆರೋಪಗಳ ಕುರಿತ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಜೆ. ಚೆಲಮೇಶ್ವರ್ ನೇತೃತ್ವದಲ್ಲಿ ನಾಲ್ವರನ್ನೊಳಗೊಂಡ ಎಸ್ಐಟಿಯನ್ನು ಸೋಮವಾರ ರಚಿಸಿತ್ತು.</p><p>‘ಸುಪ್ರೀಂ ಕೋರ್ಟ್ನ ಆದೇಶವನ್ನು ಗೌರವಿಸುತ್ತೇವೆ. ವಂತಾರವು ಪಾರದರ್ಶಕತೆ, ಸಹಾನುಭೂತಿ ಮತ್ತು ಕಾನೂನಿನ ಪಾಲನೆಗೆ ಬದ್ಧವಾಗಿದೆ’ ಎಂದು ವಂತಾರ ಪ್ರಕಟಣೆ ನೀಡಿದೆ.</p><p>ಮಾಧ್ಯಮ ಮತ್ತು ಸಾಮಾಜಿಕ ಜಾಲಾತಾಣಗಳಲ್ಲಿನ ವರದಿ ಹಾಗೂ ಎನ್ಜಿಒಗಳು ಮತ್ತು ವನ್ಯಜೀವಿ ಸಂರಕ್ಷಣಾ ಸಂಸ್ಥೆಗಳು ನೀಡಿನ ದೂರುಗಳ ಆಧಾರದಲ್ಲಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಾಲಯ ಎಸ್ಐಟಿಯನ್ನು ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾನೂನುಗಳನ್ನು ಪಾಲಿಸದೆಯೇ ಭಾರತ ಮತ್ತು ವಿದೇಶದಿಂದ ಪ್ರಾಣಿಗಳನ್ನು ಪಡೆಯುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ತನಿಖೆಗೆ ಸಹಕಾರ ನೀಡುವುದಾಗಿ ಲಯನ್ಸ್ ಫೌಂಡೇಷನ್ನ ವನ್ಯಜೀವಿ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವಂತಾರ ತಿಳಿಸಿದೆ.</p><p>ಈ ಪ್ರಕರಣದ ಕುರಿತ ತನಿಖೆಗೆ ಸುಪ್ರೀಂ ಕೋರ್ಟ್ ಎಸ್ಐಟಿ ರಚಿಸಿದೆ. ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಪಿ.ಬಿ ವರಾಳೆ ಅವರಿದ್ದ ಪೀಠವು ವಂತಾರದ ವಿರುದ್ದದ ಆರೋಪಗಳ ಕುರಿತ ತನಿಖೆಗಾಗಿ ನಿವೃತ್ತ ನ್ಯಾಯಮೂರ್ತಿ ಜೆ. ಚೆಲಮೇಶ್ವರ್ ನೇತೃತ್ವದಲ್ಲಿ ನಾಲ್ವರನ್ನೊಳಗೊಂಡ ಎಸ್ಐಟಿಯನ್ನು ಸೋಮವಾರ ರಚಿಸಿತ್ತು.</p><p>‘ಸುಪ್ರೀಂ ಕೋರ್ಟ್ನ ಆದೇಶವನ್ನು ಗೌರವಿಸುತ್ತೇವೆ. ವಂತಾರವು ಪಾರದರ್ಶಕತೆ, ಸಹಾನುಭೂತಿ ಮತ್ತು ಕಾನೂನಿನ ಪಾಲನೆಗೆ ಬದ್ಧವಾಗಿದೆ’ ಎಂದು ವಂತಾರ ಪ್ರಕಟಣೆ ನೀಡಿದೆ.</p><p>ಮಾಧ್ಯಮ ಮತ್ತು ಸಾಮಾಜಿಕ ಜಾಲಾತಾಣಗಳಲ್ಲಿನ ವರದಿ ಹಾಗೂ ಎನ್ಜಿಒಗಳು ಮತ್ತು ವನ್ಯಜೀವಿ ಸಂರಕ್ಷಣಾ ಸಂಸ್ಥೆಗಳು ನೀಡಿನ ದೂರುಗಳ ಆಧಾರದಲ್ಲಿ ಸಲ್ಲಿಕೆಯಾದ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಿದ ನ್ಯಾಯಾಲಯ ಎಸ್ಐಟಿಯನ್ನು ರಚಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>