ಭಾನುವಾರ ಎಕ್ಸ್ನಲ್ಲಿ (ಹಿಂದಿನ ಟ್ವೀಟರ್) ಪೋಸ್ಟ್ ಮಾಡಿರುವ ಅವರು, ಇಂಡಿಯಾ ಒಕ್ಕೂಟದ ಮೊದಲ ಸಮನ್ವಯ ಸಮಿತಿ ಸಭೆ 13ರಂದು ನವದೆಹಲಿಯಲ್ಲಿ ನಡೆಯಲಿದೆ. ಆದರೆ, ಇ.ಡಿ. ಸೆ.13ರೊಳಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ಪ್ರಧಾನಿ ಮೋದಿ ಅವರು ಉದ್ದೇಶಪೂವಕವಾಗಿ ಸಭೆಗೆ ಗೈರಾಗುವಂತೆ ಮಾಡಲು ಈ ರೀತಿ ಮಾಡಿದ್ದಾರೆ. ಆದರೆ, ವಿಚಾರಣೆಗೆ ಹಾಜರಾಗಿ ತನಿಖಾ ತಂಡಕ್ಕೆ ಸಹಕರಿಸುವೆ ಎಂದು ತಿಳಿಸಿದ್ದರು. ಆದರೆ, ಪಕ್ಷದ ಮೂಲಗಳ ಪ್ರಕಾರ ‘ಇಂಡಿಯಾ’ದ ಸಮಿತಿ ಸಭೆಗೆ ಅವರು ಗೈರು ಹಾಜರಾಗುವ ಸಾಧ್ಯತೆ ಇದೆ.