<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂರು ದಿನಗಳ ತಮಿಳುನಾಡು ಪ್ರವಾಸ ಇಂದಿನಿಂದ (ಶನಿವಾರ) ಆರಂಭಗೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.</p>.<p>ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ತಮಿಳುನಾಡು ಭೇಟಿ ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ. ಇತ್ತೀಚೆಗಷ್ಟೇ ತಮಿಳರ ಹೊಸ ವರ್ಷ 'ಪೊಂಗಲ್' ಹಬ್ಬದ ಪ್ರಯುಕ್ತ ನಡೆದ 'ಜಲ್ಲಿಕಟ್ಟು' ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/dont-mistake-proposal-to-suspend-farm-laws-as-admission-that-acts-have-lacunae-says-narendra-singh-798834.html" itemprop="url">ಕೃಷಿ ಕಾಯ್ದೆಗಳ ಅಮಾನತನ್ನು ತಪ್ಪಾಗಿ ಭಾವಿಸಬೇಡಿ: ರೈತರಿಗೆ ನರೇಂದ್ರ ಸಿಂಗ್ ತೋಮರ್ </a></p>.<p>ಈ ಮೂಲಕ ತಿಂಗಳೊಂದರಲ್ಲೇ ಎರಡನೇ ಬಾರಿಗೆ ತಮಿಳುನಾಡು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಕುರಿತು ವಿಶೇಷ ವಿಡಿಯೊವನ್ನು ಹಂಚಿದ್ದಾರೆ.</p>.<p>ತಮಿಳುನಾಡಿಗೆ ಮತ್ತೊಮ್ಮೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ. ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ ಎಂದು ಟ್ವೀಟ್ ಮಾಡಿದರು.</p>.<p>'ಕೊಂಗು ರಾಜ್ಯ' ತಮಿಳುನಾಡಿನ ಪಶ್ಚಿಮ ಭಾಗದ ಪ್ರದೇಶವನ್ನೊಳಗೊಂಡ ಪ್ರಾಚೀನ ರಾಜ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೂರು ದಿನಗಳ ತಮಿಳುನಾಡು ಪ್ರವಾಸ ಇಂದಿನಿಂದ (ಶನಿವಾರ) ಆರಂಭಗೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.</p>.<p>ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ತಮಿಳುನಾಡು ಭೇಟಿ ಹೆಚ್ಚಿನ ಮಹತ್ವ ಗಿಟ್ಟಿಸಿಕೊಂಡಿದೆ. ಇತ್ತೀಚೆಗಷ್ಟೇ ತಮಿಳರ ಹೊಸ ವರ್ಷ 'ಪೊಂಗಲ್' ಹಬ್ಬದ ಪ್ರಯುಕ್ತ ನಡೆದ 'ಜಲ್ಲಿಕಟ್ಟು' ಗ್ರಾಮೀಣ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/india-news/dont-mistake-proposal-to-suspend-farm-laws-as-admission-that-acts-have-lacunae-says-narendra-singh-798834.html" itemprop="url">ಕೃಷಿ ಕಾಯ್ದೆಗಳ ಅಮಾನತನ್ನು ತಪ್ಪಾಗಿ ಭಾವಿಸಬೇಡಿ: ರೈತರಿಗೆ ನರೇಂದ್ರ ಸಿಂಗ್ ತೋಮರ್ </a></p>.<p>ಈ ಮೂಲಕ ತಿಂಗಳೊಂದರಲ್ಲೇ ಎರಡನೇ ಬಾರಿಗೆ ತಮಿಳುನಾಡು ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ಕುರಿತು ವಿಶೇಷ ವಿಡಿಯೊವನ್ನು ಹಂಚಿದ್ದಾರೆ.</p>.<p>ತಮಿಳುನಾಡಿಗೆ ಮತ್ತೊಮ್ಮೆ ಹಿಂತಿರುಗಲು ನನಗೆ ಸಂತಸವಾಗುತ್ತಿದೆ. ಕೊಂಗು ನಾಡಿನ ನನ್ನ ತಮಿಳು ಸಹೋದರ ಹಾಗೂ ಸಹೋದರಿಯೊಂದಿಗೆ ಸಮಯ ಕಳೆಯಲಿದ್ದೇನೆ. ನಾವೆಲ್ಲರೂ ಒಟ್ಟಾಗಿ, ನರೇಂದ್ರ ಮೋದಿ ಸರ್ಕಾರದ ದಾಳಿಯಿಂದ ತಮಿಳರ ವಿಶಿಷ್ಟ ಸಂಸ್ಕೃತಿಯನ್ನು ರಕ್ಷಿಸಲಿದ್ದೇವೆ ಎಂದು ಟ್ವೀಟ್ ಮಾಡಿದರು.</p>.<p>'ಕೊಂಗು ರಾಜ್ಯ' ತಮಿಳುನಾಡಿನ ಪಶ್ಚಿಮ ಭಾಗದ ಪ್ರದೇಶವನ್ನೊಳಗೊಂಡ ಪ್ರಾಚೀನ ರಾಜ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>