<p><strong>ಗಿರಿಡೀಹ್ (ಜಾರ್ಖಂಡ್):</strong> ಅನ್ಯಾಯ ಮತ್ತು ಸರ್ವಾಧಿಕಾರಿ ಶಕ್ತಿಗಳ ವಿರುದ್ಧ ದಿಟ್ಟ ಹೋರಾಟ ನಡೆಸುತ್ತೇನೆ. ನಾನು, ನನ್ನ ಪತಿಯ ಹೆಜ್ಜೆ ಗುರುತುಗಳನ್ನೇ ಅನುಸರಿಸುತ್ತೇನೆ ಎಂದು ಹೇಮಂತ್ ಸೊರೇನ್ ಪತ್ನಿ, ಕಲ್ಪನಾ ಸೊರೇನ್ ಹೇಳಿದ್ದಾರೆ. </p>.ಭೂ ಹಗರಣ ಪ್ರಕರಣ: ಸೊರೇನ್ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ .ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೇಮಂತ್ ಸೊರೇನ್ ಬಂಧನದ ಅವಧಿ ವಿಸ್ತರಣೆ.ಭ್ರಷ್ಟರನ್ನು ಬೆಂಬಲಿಸುವ ಬಿಜೆಪಿ: ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ. <p>ಬುಡಕಟ್ಟು ಜನಾಂಗದವರು ಯಾರಿಗೂ ತಲೆ ಬಾಗುವುದಿಲ್ಲ. ಜೈಲಿನಿಂದ ಹೊರಬರುವ ನನ್ನ ಪತಿ ಮತ್ತಷ್ಟು ಬಲಿಷ್ಠರಾಗಿರಲಿದ್ದಾರೆ ಎಂದು ಕಲ್ಪನಾ ಸೊರೇನ್ ಸುದ್ದಿ ಸಂಸ್ಥೆ ಪಿಟಿಐ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. </p><p>ತಮ್ಮ ಪತಿಯ ಬಂಧನ ಅನಿರೀಕ್ಷಿತವಾಗಿದೆ. ಇದು ಜೆಎಂಎಂ ಪಕ್ಷಕ್ಕೆ ಹಾಗೂ ನಮ್ಮ ಕುಟುಂಬಕ್ಕೆ ಬಹುದೊಡ್ಡ ಆಘಾತವನ್ನು ಉಂಟುಮಾಡಿದೆ. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ಜಾಮೀನಿನ ಮೇಲೆ ಹೇಮಂತ್ ಸೊರೇನ್ ಶೀಘ್ರವಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.ಹೇಮಂತ್ ಸೊರೇನ್ಗೆ ಸೇರಿದ ₹ 31 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ . <p>ನಿರಾಪರಾಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿ ನಡೆಸಿ, ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ಸರ್ವಾಧಿಕಾರ ವಿರುದ್ಧ ಜನರು ಸಿಟ್ಟಿಗೆದ್ದಿದ್ದಾರೆ.</p><p>ನಿಮ್ಮ ಪತಿ ಜೈಲಿನಲ್ಲಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿಯೇ ಏಕೆ ಇ.ಡಿ ಅಧಿಕಾರಿಗಳಿಂದ ದಾಳಿ ನಡೆಯುತ್ತಿದೆ ಎಂಬ ಅನುಮಾನ ನನ್ನಲ್ಲಿದೆ ಎಂದು ಕಲ್ಪನಾ ಸೊರೇನ್ ಹೇಳಿದ್ದಾರೆ.</p><p>ಹೇಮಂತ್ ಸೊರೇನ್ ಅವರ ಬಂಧನವು ಅವರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರುವ ರಾಜಕೀಯ ಪ್ರೇರಿತ ಪಿತೂರಿಯಾಗಿದೆ. ಅವರ ಬಂಧನವು ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿದೆ. ಈ ಮೂಲಕ ಅವರನ್ನು( ಹೇಮಂತ್ ಸೊರೇನ್) ಬೆದರಿಸುವ, ಅವಮಾನಿಸುವ ಪ್ರಯತ್ನವಾಗಿದೆ. ಆದರೆ ಈ ಚುನಾವಣೆಯಲ್ಲಿ ಈ ಎಲ್ಲಕ್ಕೂ ಉತ್ತರ ಸಿಗಲಿದೆ ಎಂದಿದ್ದಾರೆ</p>.LSPolls:ಕೈಸರ್ಗಂಜ್ ಕ್ಷೇತ್ರದಿಂದ ಬ್ರಿಜ್ಭೂಷಣ್ ಮಗನನ್ನು ಕಣಕ್ಕಿಳಿಸಿದ ಬಿಜೆಪಿ.ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬನ್ನಿ: ಮೋದಿ, ಬಿಜೆಪಿಗೆ ಖರ್ಗೆ ಪತ್ರ. <p>ನಿಮ್ಮ ಕುಟುಂಬದಲ್ಲಿ ಬಿರುಕು ಬಿಟ್ಟಿದೆಯೇ ಎಂಬುವುದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಕುಟುಂಬದಲ್ಲಿ ಎಲ್ಲವೂ ಸರಿಯಿದೆ. ಗಾಂಡೇಯ್ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನನ್ನ ಪತಿಯ ಸಹೋದರ ಜತೆಗಿದ್ದರು ಎಂದು ಹೇಳಿದ್ದಾರೆ.</p>.ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್.ಪ್ರಜ್ವಲ್ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್. <p>ನನಗೆ ರಾಜಕೀಯ ಎಂದಿಗೂ ಆಯ್ಕೆಯಾಗಿರಲಿಲ್ಲ, ಆದರೆ ರಾಜ್ಯ ಹಾಗೂ ಜೆಎಂಎಂ ಪಕ್ಷದಲ್ಲಿನ ಬದಲಾವಣೆಗಳಿಂದಾಗಿ ನಾನು ರಾಜಕೀಯಕ್ಕೆ ಬಂದೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.</p>.ಕೇಜ್ರಿವಾಲ್ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್.<p>ಎಂ.ಟೆಕ್ ಮತ್ತು ಎಂಬಿಎ ಪದವೀಧರೆಯಾಗಿರುವ ಕಲ್ಪನಾ ಅವರ ರಾಜಕೀಯ ಪಯಣ ಮಾರ್ಚ್ 4ರಂದು ನಡೆದ ಜೆಎಂಎಂ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಂದು ಆರಂಭವಾಯಿತು.</p><p>ಗಿರಿಡೀಹ್ ಜಿಲ್ಲೆಯ ಗಾಂಡೇಯ್ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿತ್ತು. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಿರಿಡೀಹ್ (ಜಾರ್ಖಂಡ್):</strong> ಅನ್ಯಾಯ ಮತ್ತು ಸರ್ವಾಧಿಕಾರಿ ಶಕ್ತಿಗಳ ವಿರುದ್ಧ ದಿಟ್ಟ ಹೋರಾಟ ನಡೆಸುತ್ತೇನೆ. ನಾನು, ನನ್ನ ಪತಿಯ ಹೆಜ್ಜೆ ಗುರುತುಗಳನ್ನೇ ಅನುಸರಿಸುತ್ತೇನೆ ಎಂದು ಹೇಮಂತ್ ಸೊರೇನ್ ಪತ್ನಿ, ಕಲ್ಪನಾ ಸೊರೇನ್ ಹೇಳಿದ್ದಾರೆ. </p>.ಭೂ ಹಗರಣ ಪ್ರಕರಣ: ಸೊರೇನ್ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ .ಹಣ ಅಕ್ರಮ ವರ್ಗಾವಣೆ ಪ್ರಕರಣ: ಹೇಮಂತ್ ಸೊರೇನ್ ಬಂಧನದ ಅವಧಿ ವಿಸ್ತರಣೆ.ಭ್ರಷ್ಟರನ್ನು ಬೆಂಬಲಿಸುವ ಬಿಜೆಪಿ: ಕಾಂಗ್ರೆಸ್ನ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪ. <p>ಬುಡಕಟ್ಟು ಜನಾಂಗದವರು ಯಾರಿಗೂ ತಲೆ ಬಾಗುವುದಿಲ್ಲ. ಜೈಲಿನಿಂದ ಹೊರಬರುವ ನನ್ನ ಪತಿ ಮತ್ತಷ್ಟು ಬಲಿಷ್ಠರಾಗಿರಲಿದ್ದಾರೆ ಎಂದು ಕಲ್ಪನಾ ಸೊರೇನ್ ಸುದ್ದಿ ಸಂಸ್ಥೆ ಪಿಟಿಐ ನಡೆಸಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. </p><p>ತಮ್ಮ ಪತಿಯ ಬಂಧನ ಅನಿರೀಕ್ಷಿತವಾಗಿದೆ. ಇದು ಜೆಎಂಎಂ ಪಕ್ಷಕ್ಕೆ ಹಾಗೂ ನಮ್ಮ ಕುಟುಂಬಕ್ಕೆ ಬಹುದೊಡ್ಡ ಆಘಾತವನ್ನು ಉಂಟುಮಾಡಿದೆ. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ಜಾಮೀನಿನ ಮೇಲೆ ಹೇಮಂತ್ ಸೊರೇನ್ ಶೀಘ್ರವಾಗಿ ಹೊರಬರುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.ಹೇಮಂತ್ ಸೊರೇನ್ಗೆ ಸೇರಿದ ₹ 31 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇ.ಡಿ.ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ನಾಮಪತ್ರ ಸಲ್ಲಿಕೆ . <p>ನಿರಾಪರಾಧಿಯನ್ನು ಗುರಿಯಾಗಿಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರ ಪಿತೂರಿ ನಡೆಸಿ, ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ. ಸರ್ವಾಧಿಕಾರ ವಿರುದ್ಧ ಜನರು ಸಿಟ್ಟಿಗೆದ್ದಿದ್ದಾರೆ.</p><p>ನಿಮ್ಮ ಪತಿ ಜೈಲಿನಲ್ಲಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿಯೇ ಏಕೆ ಇ.ಡಿ ಅಧಿಕಾರಿಗಳಿಂದ ದಾಳಿ ನಡೆಯುತ್ತಿದೆ ಎಂಬ ಅನುಮಾನ ನನ್ನಲ್ಲಿದೆ ಎಂದು ಕಲ್ಪನಾ ಸೊರೇನ್ ಹೇಳಿದ್ದಾರೆ.</p><p>ಹೇಮಂತ್ ಸೊರೇನ್ ಅವರ ಬಂಧನವು ಅವರನ್ನು ಬಿಜೆಪಿಗೆ ಸೇರುವಂತೆ ಒತ್ತಡ ಹೇರುವ ರಾಜಕೀಯ ಪ್ರೇರಿತ ಪಿತೂರಿಯಾಗಿದೆ. ಅವರ ಬಂಧನವು ಕೇಂದ್ರ ಸರ್ಕಾರದ ಯೋಜನೆಯ ಭಾಗವಾಗಿದೆ. ಈ ಮೂಲಕ ಅವರನ್ನು( ಹೇಮಂತ್ ಸೊರೇನ್) ಬೆದರಿಸುವ, ಅವಮಾನಿಸುವ ಪ್ರಯತ್ನವಾಗಿದೆ. ಆದರೆ ಈ ಚುನಾವಣೆಯಲ್ಲಿ ಈ ಎಲ್ಲಕ್ಕೂ ಉತ್ತರ ಸಿಗಲಿದೆ ಎಂದಿದ್ದಾರೆ</p>.LSPolls:ಕೈಸರ್ಗಂಜ್ ಕ್ಷೇತ್ರದಿಂದ ಬ್ರಿಜ್ಭೂಷಣ್ ಮಗನನ್ನು ಕಣಕ್ಕಿಳಿಸಿದ ಬಿಜೆಪಿ.ನಮ್ಮ ಪಕ್ಷದ ಪ್ರಣಾಳಿಕೆ ಬಗ್ಗೆ ಚರ್ಚೆಗೆ ಬನ್ನಿ: ಮೋದಿ, ಬಿಜೆಪಿಗೆ ಖರ್ಗೆ ಪತ್ರ. <p>ನಿಮ್ಮ ಕುಟುಂಬದಲ್ಲಿ ಬಿರುಕು ಬಿಟ್ಟಿದೆಯೇ ಎಂಬುವುದಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಕುಟುಂಬದಲ್ಲಿ ಎಲ್ಲವೂ ಸರಿಯಿದೆ. ಗಾಂಡೇಯ್ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ನನ್ನ ಪತಿಯ ಸಹೋದರ ಜತೆಗಿದ್ದರು ಎಂದು ಹೇಳಿದ್ದಾರೆ.</p>.ಬಿಜೆಪಿಗೆ 400 ಸೀಟು ಲಭ್ಯತೆ ಹಾಸ್ಯಾಸ್ಪದ, 300 ಅಸಾಧ್ಯ, 200 ಸವಾಲು: ಶಶಿ ತರೂರ್.ಪ್ರಜ್ವಲ್ರಿಂದ 400 ಮಹಿಳೆಯರ ಅತ್ಯಾಚಾರ; ಪ್ರಧಾನಿ ಕ್ಷಮೆಯಾಚಿಸಬೇಕು: ರಾಹುಲ್. <p>ನನಗೆ ರಾಜಕೀಯ ಎಂದಿಗೂ ಆಯ್ಕೆಯಾಗಿರಲಿಲ್ಲ, ಆದರೆ ರಾಜ್ಯ ಹಾಗೂ ಜೆಎಂಎಂ ಪಕ್ಷದಲ್ಲಿನ ಬದಲಾವಣೆಗಳಿಂದಾಗಿ ನಾನು ರಾಜಕೀಯಕ್ಕೆ ಬಂದೆ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.</p>.ಕೇಜ್ರಿವಾಲ್ ಬಂಧನ| ಮತದಾನದ ಮೂಲಕ ಜನರು ಉತ್ತರಿಸಲಿದ್ದಾರೆ: ಸುನಿತಾ ಕೇಜ್ರಿವಾಲ್.<p>ಎಂ.ಟೆಕ್ ಮತ್ತು ಎಂಬಿಎ ಪದವೀಧರೆಯಾಗಿರುವ ಕಲ್ಪನಾ ಅವರ ರಾಜಕೀಯ ಪಯಣ ಮಾರ್ಚ್ 4ರಂದು ನಡೆದ ಜೆಎಂಎಂ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಂದು ಆರಂಭವಾಯಿತು.</p><p>ಗಿರಿಡೀಹ್ ಜಿಲ್ಲೆಯ ಗಾಂಡೇಯ್ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿತ್ತು. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>