<p><strong>ನವದೆಹಲಿ</strong>: ಹೈದರಾಬಾದ್ ವಿಶ್ವವಿದ್ಯಾಲಯದ ಪಕ್ಕದಲ್ಲಿ ಹೆಚ್ಚಿನ ಸಂಖ್ಯೆಯ ಮರಗಳನ್ನು ಕಡಿಯುವುದರಿಂದ ಅಲ್ಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಬುಧವಾರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ಇಂತಹ ಕಾರ್ಯಗಳಿಂದ ಪರಿಸರ ಸಂರಕ್ಷಣೆ ಹೇಗಾಗುತ್ತದೆ?’ ಎಂದು ಕೇಳಿದೆ. </p>.<p>‘ತೆಲಂಗಾಣ ಸರ್ಕಾರವು ಅಲ್ಲಿನ ಮರಗಳನ್ನು ಕಡಿಯಲು ಏಕೆ ಆತುರ ಪಡುತ್ತಿದೆ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಪ್ರಶ್ನಿಸಿತು.</p>.<p>‘ಅಲ್ಲಿನ 100 ಎಕರೆ ಭೂಮಿಯನ್ನು ನೀವು ಹೇಗೆ ಪುನರ್ ಸ್ಥಾಪಿಸುತ್ತೀರಿ ಎಂಬುದರ ಕುರಿತು ಯೋಜನೆ ರೂಪಿಸಿ ಸಲ್ಲಿಸಿ’ ಎಂದು ಪೀಠವು, ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ಸೂಚಿಸಿತು.</p>.<p>‘ಅಲ್ಲಿನ ಪ್ರಾಣಿಗಳು ಆಶ್ರಯಕ್ಕಾಗಿ ಓಡುತ್ತಿರುವ ವಿಡಿಯೊಗಳನ್ನು ನೋಡಿ ಬೇಸರವಾಯಿತು’ ಎಂದ ಪೀಠವು, ಅವುಗಳ ರಕ್ಷಣೆಗೆ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿತು. </p>.<p>ಈ ಕುರಿತ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದ ಪೀಠವು, ‘ಅಲ್ಲಿಯ ತನಕ ಒಂದೇ ಒಂದು ಮರವನ್ನು ಕಡಿಯಬಾರದು’ ಎಂದು ಮೌಖಿಕವಾಗಿ ತಿಳಿಸಿತು.</p>.<p>ಕಾಂಚ ಗಚಿಬೌಲಿ ಅರಣ್ಯ ಪ್ರದೇಶದಲ್ಲಿನ ಮರಗಳ ಮಾರಣ ಹೋಮ ಕುರಿತು ಏಪ್ರಿಲ್ 3ರಂದು ಸ್ವಯಂ ಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಇದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಹೇಳಿತ್ತು.</p>.<p>ಹೈದರಾಬಾದ್ ವಿಶ್ವವಿದ್ಯಾಲಯದ ಪಕ್ಕದ 400 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸುವ ತೆಲಂಗಾಣ ಸರ್ಕಾರದ ಯೋಜನೆಯನ್ನು ವಿರೋಧಿಸಿ ವಿ.ವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಹೈದರಾಬಾದ್ ವಿಶ್ವವಿದ್ಯಾಲಯದ ಪಕ್ಕದಲ್ಲಿ ಹೆಚ್ಚಿನ ಸಂಖ್ಯೆಯ ಮರಗಳನ್ನು ಕಡಿಯುವುದರಿಂದ ಅಲ್ಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಬುಧವಾರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ‘ಇಂತಹ ಕಾರ್ಯಗಳಿಂದ ಪರಿಸರ ಸಂರಕ್ಷಣೆ ಹೇಗಾಗುತ್ತದೆ?’ ಎಂದು ಕೇಳಿದೆ. </p>.<p>‘ತೆಲಂಗಾಣ ಸರ್ಕಾರವು ಅಲ್ಲಿನ ಮರಗಳನ್ನು ಕಡಿಯಲು ಏಕೆ ಆತುರ ಪಡುತ್ತಿದೆ’ ಎಂದು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠ ಪ್ರಶ್ನಿಸಿತು.</p>.<p>‘ಅಲ್ಲಿನ 100 ಎಕರೆ ಭೂಮಿಯನ್ನು ನೀವು ಹೇಗೆ ಪುನರ್ ಸ್ಥಾಪಿಸುತ್ತೀರಿ ಎಂಬುದರ ಕುರಿತು ಯೋಜನೆ ರೂಪಿಸಿ ಸಲ್ಲಿಸಿ’ ಎಂದು ಪೀಠವು, ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರಿಗೆ ಸೂಚಿಸಿತು.</p>.<p>‘ಅಲ್ಲಿನ ಪ್ರಾಣಿಗಳು ಆಶ್ರಯಕ್ಕಾಗಿ ಓಡುತ್ತಿರುವ ವಿಡಿಯೊಗಳನ್ನು ನೋಡಿ ಬೇಸರವಾಯಿತು’ ಎಂದ ಪೀಠವು, ಅವುಗಳ ರಕ್ಷಣೆಗೆ ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿತು. </p>.<p>ಈ ಕುರಿತ ವಿಚಾರಣೆಯನ್ನು ಮೇ 15ಕ್ಕೆ ಮುಂದೂಡಿದ ಪೀಠವು, ‘ಅಲ್ಲಿಯ ತನಕ ಒಂದೇ ಒಂದು ಮರವನ್ನು ಕಡಿಯಬಾರದು’ ಎಂದು ಮೌಖಿಕವಾಗಿ ತಿಳಿಸಿತು.</p>.<p>ಕಾಂಚ ಗಚಿಬೌಲಿ ಅರಣ್ಯ ಪ್ರದೇಶದಲ್ಲಿನ ಮರಗಳ ಮಾರಣ ಹೋಮ ಕುರಿತು ಏಪ್ರಿಲ್ 3ರಂದು ಸ್ವಯಂ ಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಇದು ಅತ್ಯಂತ ಗಂಭೀರ ವಿಷಯವಾಗಿದೆ ಎಂದು ಹೇಳಿತ್ತು.</p>.<p>ಹೈದರಾಬಾದ್ ವಿಶ್ವವಿದ್ಯಾಲಯದ ಪಕ್ಕದ 400 ಎಕರೆ ಪ್ರದೇಶವನ್ನು ಅಭಿವೃದ್ಧಿಪಡಿಸುವ ತೆಲಂಗಾಣ ಸರ್ಕಾರದ ಯೋಜನೆಯನ್ನು ವಿರೋಧಿಸಿ ವಿ.ವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>