ಸಿಂಗ್ ಬಂಧನಕ್ಕೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ, ಒಲಿಂಪಿಕ್ ಹಾಗೂ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ತಾವು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ಹಾಕಲು ಹರಿದ್ವಾರಕ್ಕೆ ಬಂದಿದ್ದ ಕುಸ್ತಿಪಟುಗಳು, ಭಾರತೀಯ ಕಿಸಾನ್ ಯೂನಿಯನ್ ಮುಖಂಡ ನರೇಶ್ ಟಿಕಾಯತ್ ಅವರು ಮನವೊಲಿಸಿದ ನಂತರ ಈ ನಿರ್ಧಾರ ಪ್ರಕಟಿಸಿದ್ದಾರೆ. ನಂತರ, ಕುಸ್ತಿಪಟುಗಳಿಂದ ಪದಕಗಳನ್ನು ಟಿಕಾಯತ್ ಸಂಗ್ರಹಿಸಿದ್ದಾರೆ.