<p><strong>ನವದೆಹಲಿ</strong>: ರಾಜಸ್ಥಾನದಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಗೆದ್ದಿರುವ ಬೆನ್ನಲ್ಲೇ, ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುರಿತು ಚರ್ಚೆ ಆರಂಭವಾಗಿದೆ.</p>.<p>‘ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷದ ಕೇಂದ್ರ ನಾಯಕರ ಮಾರ್ಗದರ್ಶನ ಹಾಗೂ ನೂತನವಾಗಿ ಆಯ್ಕೆಯಾಗಿರುವ ಶಾಸಕರೊಂದಿಗೆ ವ್ಯಾಪಕ ಸಮಾಲೋಚನೆ ಬಳಿಕ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಕೇಂದ್ರ ಸಚಿವ ಹಾಗೂ ರಾಜಸ್ಥಾನ ಚುನಾವಣಾ ಉಸ್ತುವಾರಿ ಪ್ರಲ್ಹಾದ ಜೋಶಿ ಭಾನುವಾರ ಹೇಳಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಶೀಘ್ರ ಹಾಗೂ ಸುಗಮವಾಗಿ ನಡೆಯಲಿದೆ’ ಎಂದು ಹೇಳಿದ್ದಾರೆ.</p>.<p>ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿರುವ ಕುರಿತು ಪ್ರತಿಕ್ರಿಯಿಸಿದ ಜೋಶಿ, ‘ಬಿಆರ್ಎಸ್ ವಿರುದ್ಧದ ಆಡಳಿತ ವಿರೋಧಿ ಅಲೆಯ ಲಾಭ ಕಾಂಗ್ರೆಸ್ಗೆ ಆಗಿದೆ. ತೆಲಂಗಾಣದಲ್ಲಿ ಬಿಜೆಪಿ ಇನ್ನೂ ಬಲಗೊಳ್ಳಬೇಕಿದೆ’ ಎಂದರು.</p>.<p>‘ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿರುವುದು ಹಾಗೂ ಕಾಂಗ್ರೆಸ್ನ ಸುಳ್ಳು ಭರವಸೆಗಳನ್ನು ತಿರಸ್ಕರಿಸುವುದನ್ನು ಈ ಮೂರು ರಾಜ್ಯಗಳ ಫಲಿತಾಂಶ ಹೇಳುತ್ತದೆ’ ಎಂದರು.</p>.<p>‘ತಾವು ನೀಡಿರುವ ಗ್ಯಾರಂಟಿಗಳನ್ನು ಮೋದಿ ಈಡೇರಿಸುತ್ತಾರೆ ಎಂಬುದನ್ನು ಜನರು ಒಪ್ಪಿದ್ದಾರೆ . ಇನ್ನೊಂದೆಡೆ, ಕಾಂಗ್ರೆಸ್ ಪಕ್ಷ ಭರವಸೆಗಳನ್ನು ಮಾತ್ರ ನೀಡುತ್ತದೆ, ಅವುಗಳನ್ನು ಎಂದಿಗೂ ಈಡೇರಿಸುವುದಿಲ್ಲ ಎಂಬುದನ್ನು ಈ ಫಲಿತಾಂಶ ತೋರಿಸಿದೆ’ ಎಂದೂ ಜೋಶಿ ಹೇಳಿದರು.</p>.<p>‘ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ‘ಮ್ಯಾಜಿಕ್’ ರಾಜ್ಯದಲ್ಲಿ ನಡೆದಿಲ್ಲ. ಬಿಜೆಪಿ ನೀಡಿದ್ದ ಗ್ಯಾರಂಟಿಗಳನ್ನು ಮೋದಿ ಈಡೇರಿಸುವರು ಎಂಬ ಗ್ಯಾರಂಟಿಯನ್ನು ಒಪ್ಪಿಕೊಂಡಿದ್ದಾರೆ’ ಎಂದು ರಾಜಸ್ಥಾನದವರೇ ಆಗಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದರು.</p>.<p>‘ಪಕ್ಷದ ಚುನಾವಣಾ ಉಸ್ತುವಾರಿಯಾಗಿ ಪ್ರಲ್ಹಾದ ಜೋಶಿ ಅದ್ಭುತ ಕೆಲಸ ಮಾಡಿದರು. ಪಕ್ಷದ ಪ್ರತಿಯೊಬ್ಬರ ಅಹವಾಲನ್ನು ಆಲಿಸುವ ಜೊತೆಗೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದರು’ ಎಂದರು.</p>.<p>ಈ ಹಿಂದೆ ಉತ್ತರಾಖಂಡ ಚುನಾವಣೆ ಉಸ್ತುವಾರಿಯನ್ನು ಸಹ ಜೋಶಿ ಅವರಿಗೆ ನೀಡಲಾಗಿತ್ತು. ರಾಜಸ್ಥಾನದಲ್ಲಿ ಘಟಾನುಘಟಿ ನಾಯಕರ ಜೊತೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆಯೂ ದೊಡ್ಡದಿತ್ತು. ಆದರೆ, ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಪಕ್ಷವನ್ನು ಗೆಲುವಿನ ದಡ ಸೇರಿಸಿದ ಹೆಗ್ಗಳಿಕೆ ಜೋಶಿ ಅವರದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜಸ್ಥಾನದಲ್ಲಿ ಭಾರಿ ಬಹುಮತದೊಂದಿಗೆ ಬಿಜೆಪಿ ಗೆದ್ದಿರುವ ಬೆನ್ನಲ್ಲೇ, ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುರಿತು ಚರ್ಚೆ ಆರಂಭವಾಗಿದೆ.</p>.<p>‘ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಕುರಿತು ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುತ್ತದೆ. ಪಕ್ಷದ ಕೇಂದ್ರ ನಾಯಕರ ಮಾರ್ಗದರ್ಶನ ಹಾಗೂ ನೂತನವಾಗಿ ಆಯ್ಕೆಯಾಗಿರುವ ಶಾಸಕರೊಂದಿಗೆ ವ್ಯಾಪಕ ಸಮಾಲೋಚನೆ ಬಳಿಕ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ’ ಎಂದು ಕೇಂದ್ರ ಸಚಿವ ಹಾಗೂ ರಾಜಸ್ಥಾನ ಚುನಾವಣಾ ಉಸ್ತುವಾರಿ ಪ್ರಲ್ಹಾದ ಜೋಶಿ ಭಾನುವಾರ ಹೇಳಿದ್ದಾರೆ.</p>.<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೂತನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಶೀಘ್ರ ಹಾಗೂ ಸುಗಮವಾಗಿ ನಡೆಯಲಿದೆ’ ಎಂದು ಹೇಳಿದ್ದಾರೆ.</p>.<p>ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿರುವ ಕುರಿತು ಪ್ರತಿಕ್ರಿಯಿಸಿದ ಜೋಶಿ, ‘ಬಿಆರ್ಎಸ್ ವಿರುದ್ಧದ ಆಡಳಿತ ವಿರೋಧಿ ಅಲೆಯ ಲಾಭ ಕಾಂಗ್ರೆಸ್ಗೆ ಆಗಿದೆ. ತೆಲಂಗಾಣದಲ್ಲಿ ಬಿಜೆಪಿ ಇನ್ನೂ ಬಲಗೊಳ್ಳಬೇಕಿದೆ’ ಎಂದರು.</p>.<p>‘ಜನರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಒಪ್ಪಿರುವುದು ಹಾಗೂ ಕಾಂಗ್ರೆಸ್ನ ಸುಳ್ಳು ಭರವಸೆಗಳನ್ನು ತಿರಸ್ಕರಿಸುವುದನ್ನು ಈ ಮೂರು ರಾಜ್ಯಗಳ ಫಲಿತಾಂಶ ಹೇಳುತ್ತದೆ’ ಎಂದರು.</p>.<p>‘ತಾವು ನೀಡಿರುವ ಗ್ಯಾರಂಟಿಗಳನ್ನು ಮೋದಿ ಈಡೇರಿಸುತ್ತಾರೆ ಎಂಬುದನ್ನು ಜನರು ಒಪ್ಪಿದ್ದಾರೆ . ಇನ್ನೊಂದೆಡೆ, ಕಾಂಗ್ರೆಸ್ ಪಕ್ಷ ಭರವಸೆಗಳನ್ನು ಮಾತ್ರ ನೀಡುತ್ತದೆ, ಅವುಗಳನ್ನು ಎಂದಿಗೂ ಈಡೇರಿಸುವುದಿಲ್ಲ ಎಂಬುದನ್ನು ಈ ಫಲಿತಾಂಶ ತೋರಿಸಿದೆ’ ಎಂದೂ ಜೋಶಿ ಹೇಳಿದರು.</p>.<p>‘ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಅವರ ‘ಮ್ಯಾಜಿಕ್’ ರಾಜ್ಯದಲ್ಲಿ ನಡೆದಿಲ್ಲ. ಬಿಜೆಪಿ ನೀಡಿದ್ದ ಗ್ಯಾರಂಟಿಗಳನ್ನು ಮೋದಿ ಈಡೇರಿಸುವರು ಎಂಬ ಗ್ಯಾರಂಟಿಯನ್ನು ಒಪ್ಪಿಕೊಂಡಿದ್ದಾರೆ’ ಎಂದು ರಾಜಸ್ಥಾನದವರೇ ಆಗಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಹೇಳಿದರು.</p>.<p>‘ಪಕ್ಷದ ಚುನಾವಣಾ ಉಸ್ತುವಾರಿಯಾಗಿ ಪ್ರಲ್ಹಾದ ಜೋಶಿ ಅದ್ಭುತ ಕೆಲಸ ಮಾಡಿದರು. ಪಕ್ಷದ ಪ್ರತಿಯೊಬ್ಬರ ಅಹವಾಲನ್ನು ಆಲಿಸುವ ಜೊತೆಗೆ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದರು’ ಎಂದರು.</p>.<p>ಈ ಹಿಂದೆ ಉತ್ತರಾಖಂಡ ಚುನಾವಣೆ ಉಸ್ತುವಾರಿಯನ್ನು ಸಹ ಜೋಶಿ ಅವರಿಗೆ ನೀಡಲಾಗಿತ್ತು. ರಾಜಸ್ಥಾನದಲ್ಲಿ ಘಟಾನುಘಟಿ ನಾಯಕರ ಜೊತೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಸಂಖ್ಯೆಯೂ ದೊಡ್ಡದಿತ್ತು. ಆದರೆ, ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗಿ ಪಕ್ಷವನ್ನು ಗೆಲುವಿನ ದಡ ಸೇರಿಸಿದ ಹೆಗ್ಗಳಿಕೆ ಜೋಶಿ ಅವರದ್ದಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>