<p><strong>ಚಂಡೀಗಢ</strong>: ‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿದಾಗ ಹರಿಯಾಣದ ಅಂಬಾಲದ ಬಳಿ ಶಂಭು ಗಡಿಯಲ್ಲಿ ಬೀಡುಬಿಟ್ಟಿರುವ ರೈತರು ದೆಹಲಿಯತ್ತ ನುಗ್ಗಲಿದ್ದಾರೆ’ ಎಂದು ರೈತ ಮುಖಂಡ ಜಗಜೀತ ಸಿಂಗ್ ಡಲ್ಲೇವಾಲ್ ಮಂಗಳವಾರ ಹೇಳಿದ್ದಾರೆ.</p>.<p>ಶಂಭು ಗಡಿಯಲ್ಲಿ ಸ್ಥಾಪಿಸಲಾಗಿರುವ ಬ್ಯಾರಿಕೇಡ್ಗಳನ್ನು ‘ಪ್ರಾಯೋಗಿಕ ಆಧಾರ’ದಲ್ಲಿ ತೆಗೆದುಹಾಕುವಂತೆ ಹರಿಯಾಣ ಸರ್ಕಾರಕ್ಕೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ, ರೈತ ಮುಖಂಡ ಜಗಜೀತ ಸಿಂಗ್ ಡಲ್ಲೇವಾಲ್ ಅವರ ಈ ಹೇಳಿಕೆ ಹೊರಬಿದ್ದಿದೆ. </p>.<p>ಫೆಬ್ರುವರಿ 13ರಿಂದ ಶಂಭು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. </p>.<p>ಹೆದ್ದಾರಿಗಳು ತೆರೆದಾಗ, ದೆಹಲಿಯತ್ತ ತೆರಳಬೇಕು ಎನ್ನುವುದು ನಮ್ಮ ನಿರ್ಧಾರವಾಗಿದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ಡಲ್ಲೇವಾಲ್ ಹೇಳಿದ್ದಾರೆ. </p>.<p>ಮತ್ತೊಂದೆಡೆ, ಹೆದ್ದಾರಿಯನ್ನು ಬ್ಯಾರಿಕೇಡ್ಗಳಿಂದ ಮುಕ್ತಗೊಳಿಸಬೇಕು ಎಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಹರಿಯಾಣ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಒಂದು ವೇಳೆ ಹೆದ್ದಾರಿ ತೆರೆದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ತನ್ನ ಅರ್ಜಿಯಲ್ಲಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಢ</strong>: ‘ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಬ್ಯಾರಿಕೇಡ್ಗಳನ್ನು ತೆರವುಗೊಳಿಸಿದಾಗ ಹರಿಯಾಣದ ಅಂಬಾಲದ ಬಳಿ ಶಂಭು ಗಡಿಯಲ್ಲಿ ಬೀಡುಬಿಟ್ಟಿರುವ ರೈತರು ದೆಹಲಿಯತ್ತ ನುಗ್ಗಲಿದ್ದಾರೆ’ ಎಂದು ರೈತ ಮುಖಂಡ ಜಗಜೀತ ಸಿಂಗ್ ಡಲ್ಲೇವಾಲ್ ಮಂಗಳವಾರ ಹೇಳಿದ್ದಾರೆ.</p>.<p>ಶಂಭು ಗಡಿಯಲ್ಲಿ ಸ್ಥಾಪಿಸಲಾಗಿರುವ ಬ್ಯಾರಿಕೇಡ್ಗಳನ್ನು ‘ಪ್ರಾಯೋಗಿಕ ಆಧಾರ’ದಲ್ಲಿ ತೆಗೆದುಹಾಕುವಂತೆ ಹರಿಯಾಣ ಸರ್ಕಾರಕ್ಕೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೂಚಿಸಿದ ಬೆನ್ನಲ್ಲೇ, ರೈತ ಮುಖಂಡ ಜಗಜೀತ ಸಿಂಗ್ ಡಲ್ಲೇವಾಲ್ ಅವರ ಈ ಹೇಳಿಕೆ ಹೊರಬಿದ್ದಿದೆ. </p>.<p>ಫೆಬ್ರುವರಿ 13ರಿಂದ ಶಂಭು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. </p>.<p>ಹೆದ್ದಾರಿಗಳು ತೆರೆದಾಗ, ದೆಹಲಿಯತ್ತ ತೆರಳಬೇಕು ಎನ್ನುವುದು ನಮ್ಮ ನಿರ್ಧಾರವಾಗಿದೆ. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಖಾತ್ರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ಡಲ್ಲೇವಾಲ್ ಹೇಳಿದ್ದಾರೆ. </p>.<p>ಮತ್ತೊಂದೆಡೆ, ಹೆದ್ದಾರಿಯನ್ನು ಬ್ಯಾರಿಕೇಡ್ಗಳಿಂದ ಮುಕ್ತಗೊಳಿಸಬೇಕು ಎಂಬ ಹೈಕೋರ್ಟ್ ಆದೇಶ ಪ್ರಶ್ನಿಸಿ ಹರಿಯಾಣ ಸರ್ಕಾರವು ಸುಪ್ರೀಂ ಕೋರ್ಟ್ ಮೊರೆಹೋಗಿದೆ. ಒಂದು ವೇಳೆ ಹೆದ್ದಾರಿ ತೆರೆದರೆ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗಲಿದೆ ಎಂದು ತನ್ನ ಅರ್ಜಿಯಲ್ಲಿ ತಿಳಿಸಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>