<p><strong>ಮುಂಬೈ: </strong>ಗಡಿ ವಿವಾದವನ್ನು ಮಹಾರಾಷ್ಟ್ರ ಮತ್ತೆ ಕೆದಕಿದೆ.</p>.<p>‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.</p>.<p>’ಬಹುಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ’ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.</p>.<p>‘ನಾವು ಒಗ್ಗಟ್ಟಾಗಿದ್ದೇವೆ. ಈ ವಿಷಯದಲ್ಲಿ ಬದ್ಧತೆಯನ್ನು ಪ್ರದರ್ಶಿಸುತ್ತೇವೆ. ಈ ಭರವಸೆಯೊಂದಿಗೆ ನಾವು ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ.</p>.<p>ಬೆಳಗಾವಿ ಮತ್ತು ಇತರ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದ ಪ್ರಕರಣ ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.</p>.<p>ಗಡಿ ವಿವಾದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಉಸ್ತುವಾರಿ ವಹಿಸಲು ಕಳೆದ ವರ್ಷ ಸಚಿವರಾದ ಏಕನಾಥ್ ಶಿಂಧೆ ಮತ್ತು ಛಗನ್ ಭುಜಬಲ್ ಅವರನ್ನು ಸಮನ್ವಯಕಾರರನ್ನಾಗಿ ಉದ್ಧವ್ ಠಾಕ್ರೆ ಅವರು ನೇಮಿಸಿದ್ದರು.</p>.<p>ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಜನವರಿ 17ರಂದು ಹುತಾತ್ಮರ ದಿನವನ್ನು ಆಚರಿಸುತ್ತದೆ. ಬೆಳಗಾವಿ ಮತ್ತು ಇತರ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ 1956ರಲ್ಲಿ ನಡೆದ ಹೋರಾಟದಲ್ಲಿ ಮಡಿದವರ ಗೌರವಾರ್ಥ ಮಹಾರಾಷ್ಟ್ರ ಏಕೀಕರಣ ಸಮಿತಿ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಗಡಿ ವಿವಾದವನ್ನು ಮಹಾರಾಷ್ಟ್ರ ಮತ್ತೆ ಕೆದಕಿದೆ.</p>.<p>‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ಹೇಳಿದ್ದಾರೆ.</p>.<p>’ಬಹುಸಂಖ್ಯೆಯಲ್ಲಿ ಮರಾಠಿ ಮಾತನಾಡುವ ಮತ್ತು ಸಂಸ್ಕೃತಿ ಹೊಂದಿರುವ ಪ್ರದೇಶಗಳನ್ನು ಮಹಾರಾಷ್ಟಕ್ಕೆ ಸೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಗಡಿ ವಿಷಯಕ್ಕಾಗಿ ಹೋರಾಟ ನಡೆಸಿ ಹುತಾತ್ಮರಾದವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಇದಾಗಿದೆ’ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.</p>.<p>‘ನಾವು ಒಗ್ಗಟ್ಟಾಗಿದ್ದೇವೆ. ಈ ವಿಷಯದಲ್ಲಿ ಬದ್ಧತೆಯನ್ನು ಪ್ರದರ್ಶಿಸುತ್ತೇವೆ. ಈ ಭರವಸೆಯೊಂದಿಗೆ ನಾವು ಹುತಾತ್ಮರಿಗೆ ಗೌರವ ಸಲ್ಲಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ.</p>.<p>ಬೆಳಗಾವಿ ಮತ್ತು ಇತರ ಪ್ರದೇಶಗಳಿಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಣ ಗಡಿ ವಿವಾದ ಪ್ರಕರಣ ಹಲವು ವರ್ಷಗಳಿಂದ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ.</p>.<p>ಗಡಿ ವಿವಾದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವಂತೆ ಉಸ್ತುವಾರಿ ವಹಿಸಲು ಕಳೆದ ವರ್ಷ ಸಚಿವರಾದ ಏಕನಾಥ್ ಶಿಂಧೆ ಮತ್ತು ಛಗನ್ ಭುಜಬಲ್ ಅವರನ್ನು ಸಮನ್ವಯಕಾರರನ್ನಾಗಿ ಉದ್ಧವ್ ಠಾಕ್ರೆ ಅವರು ನೇಮಿಸಿದ್ದರು.</p>.<p>ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿ ವರ್ಷ ಜನವರಿ 17ರಂದು ಹುತಾತ್ಮರ ದಿನವನ್ನು ಆಚರಿಸುತ್ತದೆ. ಬೆಳಗಾವಿ ಮತ್ತು ಇತರ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ 1956ರಲ್ಲಿ ನಡೆದ ಹೋರಾಟದಲ್ಲಿ ಮಡಿದವರ ಗೌರವಾರ್ಥ ಮಹಾರಾಷ್ಟ್ರ ಏಕೀಕರಣ ಸಮಿತಿ ಈ ದಿನವನ್ನು ಹುತಾತ್ಮರ ದಿನವನ್ನಾಗಿ ಆಚರಿಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>